4 ಗಂಟೆಯಲ್ಲಿ 3 ಕಾರ್ಯಕ್ರಮ: ಪ್ರಧಾನಿ ಮೋದಿ ಬೆಂಗಳೂರು ಭೇಟಿ ವೇಳಾಪಟ್ಟಿ

ಬೆಂಗಳೂರು: ನಮ್ಮ ಮೆಟ್ರೋದ ಹಳದಿ ಮಾರ್ಗ​ ಮತ್ತು ಬೆಂಗಳೂರು – ಬೆಳಗಾವಿ ನಡುವಿನ ವಂದೆ ಭಾರತ್​ ರೈಲಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಆಗಸ್ಟ್ 10) ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಕುರಿತು ವೇಳಾಪಟ್ಟಿ ಹಂಚಿಕೊಂಡಿರುವ ಸಿಎಂ ಕಚೇರಿ, ಮೋದಿ ಅವರು 4 ಗಂಟೆಗಳ ಕಾಲ ಇರಲಿದ್ದು, ಈ ವೇಳೆ 3 ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ ಹೆಚ್​ಎಎಲ್​ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ, ಕೆಎಸ್​ಆರ್​ ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ಆಗಮಿಲಿದ್ದು, ಅಲ್ಲಿ ಬೆಂಗಳೂರು- […]

Continue Reading

ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ ಭವರಲಾಲ್’ಗೆ ಶಾಲು ಹೊದಿಸಿ ಸನ್ಮಾನಿಸಿದ ವೀರಣ್ಣ ಯಾರಿ

ವಾಡಿ: ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ, ಅಂತರಾಷ್ಟ್ರೀಯ ಯೋಗ ಸಾಧಕ ಭವರಲಾಲ್ ಆರ್ಯ್ ಅವರನ್ನು ವಾಡಿ ಪತಂಜಲಿ ಯೋಗ ಶಿಕ್ಷಕ ವೀರಣ್ಣ ಯಾರಿ, ನಾಗರಾಜಗೌಡ ಗೌಡಪ್ಪನೂರ ಅವರು ಶಾಲು ಹೊದಿಸಿ ಸನ್ಮಾನಿಸಿದರು. ಕಲಬುರಗಿ ನಗರದ ಅಪ್ಪಾ ಗಾರ್ಡನ್’ನಲ್ಲಿ ಪತಂಜಲಿ ಯೋಗ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಯೋಗಾಭ್ಯಾಸ‌ ಶಿಬಿರಕ್ಕೆ ಯೋಗಾಚಾರ್ಯ ಭವರ್ ಲಾಲ್ ಆರ್ಯ ಅವರು ಆಗಮಿಸಿದ್ದರು. ಯೋಗ ಶಿಕ್ಷಕ ವೀರಣ್ಣ ಯಾರಿ ಅವರು ಆರ್ಯ್ ಅವರನ್ನು ಸನ್ಮಾನಿಸಿ ಮಾತನಾಡಿದ ಅವರು, ಕಳೆದ ಜೂನ್ 21ರ ಅಂತರಾಷ್ಟ್ರೀಯ […]

Continue Reading

ದೇಶದ ಸ್ವಾತಂತ್ರ್ಯದಲ್ಲಿ ಕ್ವಿಟ್‌ ಇಂಡಿಯಾ ಚಳುವಳಿಯ ಪಾತ್ರ ಪ್ರಮುಖ

ಕಲಬುರಗಿ: ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡಲು ಅಸಂಖ್ಯಾತ ಭಾರತಿಯರು ನಿರಂತರ ಹೋರಾಟ ಮಾಡಬೇಕಾಯಿತು. ಸ್ವಾತಂತ್ರ್ಯಕ್ಕಾಗಿ ಜರುಗಿದ ಸಾಕಷ್ಟು ಹೋರಾಟಗಳಲ್ಲಿ ‘ಕ್ವಿಟ್‌ ಇಂಡಿಯಾ ಚಳುವಳಿ, ಪ್ರಮುಖವಾಗಿದೆ. ‘ಮಾಡು ಇಲ್ಲವೆ ಮಡಿ, ಬ್ರಿಟಿಷರೇ ಭಾರತ ಬಿಟ್ಟು ತೊಲಗಿ’ ಎಂಬ ಘೋಷಣೆಯೊಂದಿಗೆ ಜರುಗಿದ ಚಳುವಳಿ ಜನಸಾಮಾನ್ಯರ ಚಳುವಳಿಯಾಗಿದ್ದರಿಂದ ಮುಂದೆ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿ ಕೊಡುವಲ್ಲಿ ತನ್ನದೆಯಾದ ಪ್ರಮುಖ ಪಾತ್ರ ವಹಿಸಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ಅಫಜಲಪುರ ತಾಲೂಕಿನ ಗೊಬ್ಬೂರ(ಕೆ) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ […]

Continue Reading

ಜನಪದದಿಂದ ಬದುಕಿಗೆ ಬಲ, ಬೆಲೆ, ಸತ್ವ ಮತ್ತು ಮಹತ್ವ ಬರಲು ಸಾಧ್ಯ

ಕಲಬುರಗಿ: ನಮ್ಮತನ, ಹೃದಯ ಶ್ರೀಮಂತಿಕೆ, ಮಾನವೀಯ ಮೌಲ್ಯಗಳು, ಸಾಮಾಜಿಕ ಕಾಳಜಿ, ಕೌಟುಂಬಿಕ ಸಾಮರಸ್ಯ ಸೇರಿದಂತೆ ಬದುಕಿನ ಶ್ರೀಮಂತಿಕೆ ಕಟ್ಟಿಕೊಡುವ, ನಮ್ಮ ದೇಶದ ಮೂಲ ಸಂಸ್ಕೃತಿ, ಪರಂಪರೆಯಾದ ಜನಪದದ ಅಳವಡಿಕೆಯಿಂದ ಬದುಕಿಗೆ ಬಲ, ಬೆಲೆ, ಸತ್ವ ಮತ್ತು ಮಹತ್ವ ಬರಲು ಸಾಧ್ಯ ಎಂದು ಹಿರಿಯ ಸಾಹಿತಿ, ಜಾನಪದ ವಿದ್ವಾಂಸ ಡಾ.ಸ್ವಾಮಿರಾವ ಕುಲಕರ್ಣಿ ಅಭಿಮತಪಟ್ಟರು. ನಗರದ ಹೊಸ ಜೇವರ್ಗಿ ರಸ್ತೆಯಲ್ಲಿನ ಗೆಟ್ಸ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಕಾಲೇಜ್’ನಲ್ಲಿ ಕನ್ನಡ ಜಾನಪದ ಪರಿಷತ್’ನ ಜಿಲ್ಲಾ ಘಟಕದಿಂದ ಹಮ್ಮಿಕೊಳ್ಳಲಾಗಿದ್ದ ‘ವಿಶ್ವ ಬುಡಕಟ್ಟು […]

Continue Reading

ರಾತ್ರೋರಾತ್ರಿ ವಿಷ್ಣು ಸಮಾಧಿ ನೆಲಸಮ: ಅಭಿಮಾನಿಗಳಿಂದ ತೀವ್ರ ಆಕ್ರೋಶ

ಬೆಂಗಳೂರು: ಅಭಿಮಾನಿಗಳ ವಿರೋಧದ ನಡುವೆಯೂ ಡಾ.ವಿಷ್ಣುವರ್ಧನ್‌ ಅವರ ಸಮಾಧಿಯನ್ನು ತೆರವುಗೊಳಿಸಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಹೈಕೋರ್ಟ್‌ ಸೂಚನೆ ಮೇರೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಮಾಧಿಯನ್ನು ರಾತ್ರೋರಾತ್ರಿ ತೆರವುಗೊಳಿಸಲಾಗಿದೆ. ಇದರಿಂದ ಆಘಾತಕ್ಕೆ ಒಳಗಾಗಿರುವ ವಿಷ್ಣು ಅಭಿಮಾನಿಗಳು ಸರ್ಕಾರ, ಪೊಲೀಸ್‌ ಇಲಾಖೆ ಮತ್ತು ವಾಣಿಜ್ಯ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. 35 ವರ್ಷಗಳ ಕಲಾಸೇವೆ ಮತ್ತು 200 ಕನ್ನಡ ಚಲನಚಿತ್ರದಲ್ಲಿ ಅಭಿನಯಿಸಿ ಕನ್ನಡಿಗರ ಮನಗೆದ್ದ ಡಾ.ವಿಷ್ಣುವರ್ಧನ್‌ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಕೆಂಗೇರಿಯಲ್ಲಿರುವ ಅಭಿಮಾನ್‌ ಸ್ಟುಡಿಯೋ ಆವರಣದಲ್ಲಿ ನಡೆಸಲಾಗಿತ್ತು. ನಂತರದಲ್ಲಿ ವಿಷ್ಣು ಸಮಾಧಿಯನ್ನು […]

Continue Reading

ಅಮೃತ್ 2.0 ಯೋಜನೆ: ಪೈಪ್‌ಲೈನ್ ಅಳವಡಿಕೆ ಕಾಮಗಾರಿ ಆರಂಭ

ಚಿತ್ತಾಪುರ: ಪಟ್ಟಣದ ಪ್ರತಿಯೊಂದು ವಾರ್ಡಿನ ಮನೆಗೂ ಅಮೃತ್ 2.0 ಯೋಜನೆಯಡಿ ಕುಡಿಯುವ ನೀರು ಪೂರೈಕೆ ಮಾಡುವ ಗುರಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೊಂದಿದ್ದಾರೆ ಎಂದು ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗದೀಶ್ ಚವ್ಹಾಣ ಹೇಳಿದರು. ಪಟ್ಟಣದ ಸ್ಟೇಷನ್ ತಾಂಡಾದಲ್ಲಿ ಸುಧಾರಿತ ಕುಡಿಯುವ ನೀರು ಸರಬರಾಜು ಅಮೃತ್‌ 2.0 ಯೋಜನೆಯಡಿ ಇತ್ತಿಚೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ […]

Continue Reading

ಬೀದರ: ಸೆ.7 ರಂದು ದ್ವಿತೀಯ ಅಖಿಲ ಕರ್ನಾಟಕ ಗಜಲ್ ಸಮ್ಮೇಳನ

ಕಲಬುರಗಿ: ಅಖಿಲ ಕರ್ನಾಟಕ ದ್ವಿತೀಯ ಗಜಲ್ ಸಾಹಿತ್ಯ ಸಮ್ಮೇಳನವನ್ನು ಸೆಪ್ಟೆಂಬರ್ 7 ರಂದು ರವಿವಾರ ಬೀದರ ನಗರದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಗಜಲ್ ಸಮ್ಮೇಳನದ ರೂವಾರಿ ಆಗಿರುವ ಕರ್ನಾಟಕ ಗಜಲ್ ಅಕಾಡೆಮಿ ಕಾರ್ಯದರ್ಶಿ ಮಹಿಪಾಲರೆಡ್ಡಿ ಸೇಡಂ ತಿಳಿಸಿದ್ದಾರೆ. ಕಳೆದ ವರ್ಷ ಕಲಬುರಗಿಯ ವಿಶ್ವವಿದ್ಯಾಲಯದಲ್ಲಿ ಪ್ರಥಮ ಗಜಲ್ ಸಾಹಿತ್ಯ ಸಮ್ಮೇಳನ ನಡೆಸಲಾಗಿತ್ತು, ಈ ಬಾರಿ ಕರ್ನಾಟಕದ ಮುಕುಟಪ್ರಾಯ ಎನಿಸಿರುವ ಧರಿನಾಡಿನಲ್ಲಿ ದ್ವಿತೀಯ ಗಜಲ್ ಸಾಹಿತ್ಯ ಸಮ್ಮೇಳನ ನಡೆಸಲಾಗುತ್ತಿದ್ದು, ಸಮ್ಮೇಳನಾಧ್ಯಕ್ಷರಾಗಿ ಕನ್ನಡದ ಹಿರಿಯ ಕವಿ, ಬಹುಭಾಷಾ ವಿದ್ವಾಂಸರು ಮತ್ತು ಗಜಲ್ […]

Continue Reading

ವಿಶ್ವ ಬುಡಕಟ್ಟು ದಿನಾಚರಣೆ ನಾಳೆ

ಕಲಬುರಗಿ: ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕದ ವತಿಯಿಂದ ದಿ.8ರಂದು ಶುಕ್ರವಾರ ‘ವಿಶ್ವ ಬುಡಕಟ್ಟು ದಿನಾಚರಣೆ’ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಬಿ ಪಾಟೀಲ ತಿಳಿಸಿದ್ದಾರೆ. ನಗರದ ಹೊಸ ಜೇವರ್ಗಿ ರಸ್ತೆಯ ಖಮೀತಕರ್ ಕಲ್ಯಾಣ ಮಂಟಪದ ಸಮೀಪವಿರುವ ಗೆಟ್ಸ್ ಡಿಗ್ರಿ ಕಾಲೇಜಿನಲ್ಲಿ ಬೆ.10.30ಕ್ಕೆ ಕಾರ್ಯಕ್ರಮ ಜರುಗಲಿದೆ. ಹಿರಿಯ ಸಾಹಿತಿ ಡಾ.ಸ್ವಾಮಿರಾವ ಕುಲಕರ್ಣಿ ಉದ್ಘಾಟಿಸಲಿದ್ದಾರೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಅಮೃತ ಅಷ್ಟಗಿ, ಗುವಿವಿ ಮಾಜಿ ಸಿಂಡಿಕೇಟ್ ಸದಸ್ಯ ಡಾ.ಸುನೀಲಕುಮಾರ ಎಚ್.ವಂಟಿ, […]

Continue Reading

ನೇಕಾರರಿಗೆ ಆರ್ಥಿಕ ಭದ್ರತಾ ಸೌಲಭ್ಯ ದೊರೆಯಲಿ

ಕಲಬುರಗಿ: ಸಮಾಜಕ್ಕೆ ಬಟ್ಟೆ ನೀಡಿ ಮಾನವನ್ನು ಕಾಪಾಡುವ ನೇಕಾರರ ಬದುಕು ಸಂಕಷ್ಟದಲ್ಲಿದೆ. ವೃತ್ತಿಗೆ ಸಂಬಂಧಿಸಿದಂತೆ ಮೂಲಭೂತ ಸೌಕರ್ಯ, ಆರ್ಥಿಕ ಸಹಾಯ ಸೇರಿದಂತೆ ಮುಂತಾದ ಸೌಲಭ್ಯಗಳನ್ನು ಒದಗಿಸಿಕೊಟ್ಟು, ನೇಕಾರರ ಬದುಕು ಹಸನುಗೊಳಿಸುವ ಕಾರ್ಯವಾಗಬೇಕು ಎಂದು ಹಿರಿಯ ಕೈಮಗ್ಗ ಮಹಾದೇವ ಹುಲ್ಮನಿ ಒತ್ತಾಸೆ ಮಾಡಿದರು. ಆಳಂದ ತಾಲೂಕಿನ ಸುಂಟನೂರ ಗ್ರಾಮದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಏರ್ಪಡಿಸಲಾಗಿದ್ದ ‘11ನೇ ರಾಷ್ಟೀಯ ಕೈಮಗ್ಗ ನೇಕಾರರ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ನೇಕಾರರು ನೂರಾರು ವರ್ಷಗಳಿಂದ ಬಟ್ಟೆ ನೇಯ್ಗೆ ವೃತ್ತಿಯನ್ನೇ […]

Continue Reading

ಕುಡಿತದ ಚಟ ಬಿಡಿಸಲು ನಾಟಿ ಔಷಧಿ ಸೇವಿಸಿ ನಾಲ್ವರು ಸಾವು: ನಕಲಿ ವೈದ್ಯ ಅರೆಸ್ಟ್

ಕಲಬುರಗಿ: ಕುಡಿತದ ಚಟ ಬಿಡಿಸಲು ನಕಲಿ ವೈದ್ಯನಿಂದ ಚಿಕಿತ್ಸೆ ಪಡೆದು ನಾಲ್ವರು ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆ ಸೇಡಂ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮಿ, ಗಣೇಶ್ ರಾಠೋಡ, ನಾಗೇಶ್ ಹಾಗೂ ಮನೋಹರ ಮೃತ ದುರ್ದೈವಿಗಳು. ನಕಲಿ ವೈದ್ಯ ಸಾಯಪ್ಪ ಮುತ್ಯಾ ಅಲಿಯಾಸ್ ಫಕೀರಪ್ಪ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಮದ್ಯವ್ಯಸನಿಗಳಾಗಿದ್ದ ಲಕ್ಷ್ಮಿ, ಗಣೇಶ ರಾಠೋಡ, ನಾಗೇಶ್ ಹಾಗೂ ಮನೋಹರ ತಮ್ಮ ಕುಟುಂಬಸ್ಥರೊಂದಿಗೆ ಸೇಡಂ ತಾಲೂಕಿನ ಇಮಡಾಪುರ ಗ್ರಾಮಕ್ಕೆ ಬಂದಿದ್ದರು. ಇಮಡಾಪುರ ಗ್ರಾಮದ ಸಾಯಪ್ಪ ಮುತ್ಯಾ ಅಲಿಯಾಸ್ ಫಕೀರಪ್ಪ ಎಂಬ […]

Continue Reading