ಬಸ್ ಬಾರದ್ದಕ್ಕೆ ಹಾಲಿನ ಗಾಡಿ ಹತ್ತಿದ ವಿದ್ಯಾರ್ಥಿಗಳು– ವಾಹನ ಪಲ್ಟಿ, 7 ಜನರಿಗೆ ಗಾಯ

ಮೈಸೂರು: ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳು, ಬಸ್ ಬಾರದ ಹಿನ್ನೆಲೆಯಲ್ಲಿ ಹಾಲಿನ ವಾಹನ ಹತ್ತಿದ್ದರು, ಆ ವಾಹನ ಪಲ್ಟಿಯಾದ ಪರಿಣಾಮ 7 ಜನರು ಗಾಯಗೊಂಡಿರುವ ಘಟನೆ ಮೈಸೂರಿನ ಹುಣಸೂರು ತಾಲೂಕು ಸೋಮನಹಳ್ಳಿ ಬಳಿ ನಡೆದಿದೆ. ಹುಣಸೂರು ಬನ್ನಿಕುಪ್ಪೆ ಫ್ರೌಢಶಾಲೆಯ ತೆರಳುತ್ತಿದ್ದ ಮೂಕನಹಳ್ಳಿ ಗ್ರಾಮದ ಪಾಲಾಕ್ಷ, ವಿದ್ಯಾಚರಣ, ಅಪ್ಪು, ನಿತಿನ್, ಚಂದ್ರಶೇಖರ್, ಮನುಕುಮಾರ್, ಎಮ್ಮೆಕೊಪ್ಪಲಿನ ಸಂಜಯ್ ಗಾಯಗೊಂಡ ವಿದ್ಯಾರ್ಥಿಗಳು. ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿ ಪಾಲಾಕ್ಷಗೆ ಗಂಭೀರ ಗಾಯವಾಗಿದ್ದು, ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳು, […]

Continue Reading

ಜನೌಷಧಿ ಕೇಂದ್ರಗಳನ್ನು ಮುಚ್ಚಿಸಿಲ್ಲ, ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿ ಮಾತ್ರ ನಿರ್ಬಂಧಿಸಲು ನಿರ್ಧಾರ: ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಜನೌಷಧಿ ಕೇಂದ್ರಗಳನ್ನು ಮುಚ್ಚಿಸಿಲ್ಲ. ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿ ಮಾತ್ರ ನಿರ್ಬಂಧಿಸಲು ನಿರ್ಧರಿಸಲಾಗಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದರು. ಜನೌಷಧಿ ಕೇಂದ್ರಗಳನ್ನು ತೆರವುಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಅವರಿಗೆ ಸ್ಪಷ್ಟನೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಮಾತ್ರ ಜನೌಷಧಿ ಕೇಂದ್ರಗಳನ್ನ ನಿರ್ಬಂಧಿಸಲು ನಿರ್ಧರಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಜನಸಾಮಾನ್ಯರಿಗೆ ಉಚಿತ ಔಷಧಿಗಳನ್ನು ನಿರಾಕರಿಸುವ […]

Continue Reading

ಪರಮಾಣು ಶಕ್ತಿಯಿಂದ ರಾಷ್ಟ್ರದ ಅಭಿವೃದ್ಧಿ ಸಾಧ್ಯ: ಎಚ್.ಬಿ ಪಾಟೀಲ

ಕಲಬುರಗಿ: ಪರಮಾಣು ಶಕ್ತಿ ಬಳಸಿ ವಿದ್ಯುಚ್ಛಕ್ತಿ ಉತ್ಪಾದನೆ, ಕೈಗಾರಿಕಾ ಕ್ಷೇತ್ರ ಸೇರಿದಂತೆ ಇನ್ನಿತರ ಅಭಿವೃದ್ಧಿಗೆ ಬಳಸಿದರೆ, ನಾಶವಾಗುವುದು ತಪ್ಪುತ್ತದೆ ಮತ್ತು ರಾಷ್ಟ್ರದ ಅಭಿವೃದ್ಧಿಯಾಗಲು ಸಾಧ್ಯವಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದ ಸಕ್ಸಸ್ ಕಂಪ್ಯೂಟರ ತರಬೇತಿ ಸಂಸ್ಥೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಹಿರೋಷಿಮಾ ಮತ್ತು ನಾಗಾಸಾಕಿ ಕರಾಳ ದಿನಾಚರಣೆ’ಯ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪರಮಾಣು ಶಕ್ತಿ ಬಳಸಿಕೊಂಡು ಹಿರೋಷಿಮಾ ಮತ್ತು ನಾಗಾಸಾಕಿ ಮೇಲೆ ದಾಳಿಮಾಡುವ […]

Continue Reading

ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ: ಸಾವಿನ ಸಂಖ್ಯೆ 4ಕ್ಕೆ ಏರಿಕೆ

ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿಯ ಧರಾಲಿಯಲ್ಲಿ ಸಂಭವಿಸಿದ ಭೀಕರ ಮೇಘಸ್ಫೋಟದಿಂದಾಗಿ ನಾಲ್ಕು ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಜನರು ಜಲಪ್ರಳಯದಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿರುವುದಾಗಿ ಮೂಲಗಳು ತಿಳಿಸಿವೆ. ಖೀರ್ ಗಂಗಾ ನದಿಯ ರೌದ್ರಾವತಾರಕ್ಕೆ ಇಡಿ ಊರಿಗೆ ಊರೇ ಸರ್ವನಾಶವಾಗಿದೆ. ಬೆಟ್ಟದ ಮೇಲಿಂದ ಏಕಾಏಕಿ ನೀರು ಹರಿದು ಬಂದಿದ್ದು, ಗ್ರಾಮವೇ ಕೊಚ್ಚಿಕೊಂಡು ಹೋಗಿದೆ. ಪರಿಣಾಮ 4 ಜನರು ಸಾವನ್ನಪ್ಪಿದ್ದು, ಪ್ರವಾಸಿಗರು, ಅಲ್ಲಿನ ಸ್ಥಳೀಯರು ಸೇರಿದಂತೆ 60ಕ್ಕೂ ಹೆಚ್ಚು ಜನರು ಜಲಪ್ರಳಯದಲ್ಲಿ ಕೊಚ್ಚಿ ಹೋಗಿದ್ದಾರೆ. ಸದ್ಯ ಸ್ಥಳದಲ್ಲಿ ಉತ್ತರಕಾಶಿ ಪೊಲೀಸ್, ರಾಜ್ಯ […]

Continue Reading

ಮುಷ್ಕರ ನಡೆಸಿದ ಸಾರಿಗೆ ಸಂಘಟನೆಗೆ ಹೈಕೋರ್ಟ್ ತರಾಟೆ, ಅರೆಸ್ಟ್ ಎಚ್ಚರಿಕೆಗೆ ಅಧ್ಯಕ್ಷರು ಥಂಡಾ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಖಡಕ್​ ಎಚ್ಚರಿಕೆ ನೀಡಿದ ಬೆನ್ನಲ್ಲೇ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್​ ಸಾರಿಗೆ ನೌಕರರ ಮುಷ್ಕರವನ್ನು ಮುಂದೂಡಿದ್ದೆವೆ ಎಂದು ಘೋಷಿಸಿದ್ದಾರೆ. ಒಂದು ದಿನ ಮುಷ್ಕರ ಮುಂದೂಡುವಂತೆ ಹೈಕೋರ್ಟ್​ ಸೂಚನೆ ನೀಡಿದ ನಂತರವೂ ಸಾರಿಗೆ ನೌಕರರು ಮಂಗಳವಾರ ಮುಷ್ಕರ ನಡೆಸಿದರು. ಇದರಿಂದ ಗರಂ ಆದ ಹೈಕೋರ್ಟ್​, ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯನ್ನು ತರಾಟೆಗೆ ತೆಗೆದುಕೊಂಡಿತು. ಮುಷ್ಕರ ನಿಲ್ಲಿಸದಿದ್ದರೆ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಲಾಗುವುದು. […]

Continue Reading

ಕನ್ನಡಗಿಯಲ್ಲಿ ಸಂಭ್ರಮದ ಪಲ್ಲಕ್ಕಿ ಉತ್ಸವ

ಕಾಳಗಿ: ಬೆಣ್ಣೆತೊರಾ ಜಲಾಶಯದ ದಡದಲ್ಲಿರುವ ಕನ್ನಡಗಿಗ್ರಾಮದಲ್ಲಿ ಶ್ರಾವಣ ಎರಡನೇ ಸೋಮವಾರದಂದು ಅಪಾರ ಭಕ್ತರ ಜೈಘೋಷ ಮಧ್ಯೆ ಅದ್ದೂರಿಯಾಗಿ ಶ್ರೀ ಮಲ್ಲಿಕಾರ್ಜುನ ದೇವರ ಪಲ್ಲಕ್ಕಿ ಉತ್ಸವ ನಡೆಯಿತು. ಬೆಳೆಗ್ಗೆ ಮೂಲ ವಿಗ್ರಹಕ್ಕೆ ರುದ್ರಾಭಿಷೇಕ, ವಿಶೇಷ ಪೂಜೆ ಜರುಗಿತು. ಮಧ್ಯಾಹ್ನ ನಂದಿಕೋಲು ಉತ್ಸವ, ಸಾಯಂಕಾಲ ಪಲ್ಲಕ್ಕಿ ಉತ್ಸವ ಡೋಲು, ಹಲಗೆ, ಪುರವಂತರ ಮೆರವಣಿಗೆ ಹಾಗೂ ಅಪಾರ ಭಕ್ತರ ಜೈ ಘೋಷಗಳ ಮಧ್ಯೆ ಸಡಗರದಿಂದ ಜರುಗಿತು. ಆಗಮಿಸಿದ್ದ ಭಕ್ತಾದಿಗಳಿಗೆ ಪ್ರಸಾದ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು. ದೇವಸ್ಥಾನದ ಅರ್ಚಕರಿಂದ ವಿಶೇಷ ಪೂಜೆ […]

Continue Reading

ಮತಗಳ್ಳತನದ ಬಗ್ಗೆ ದಾಖಲಾತಿ ಇವೆ, ರಾಹುಲ್ ಗಾಂಧಿ ಬಿಡುಗಡೆ ಮಾಡುತ್ತಾರೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಮತಗಳ್ಳತನದ ಬಗ್ಗೆ ದಾಖಲಾತಿಗಳು ಇವೆ. ನಾಳೆ ರಾಹುಲ್ ಗಾಂಧಿ ಅದನ್ನು ಬಿಡುಗಡೆ ಮಾಡುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಮಂಗಳವಾರ ರಾಹುಲ್ ಗಾಂಧಿ ಪ್ರತಿಭಟನೆ ಮಾಡುವ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಹುಲ್ ಗಾಂಧಿ ಮತಗಳವು ಬಗ್ಗೆ ಹೇಳಿದ್ದರು. ಅದರ ಬಗ್ಗೆ ಇಂದು ಸುದ್ದಿಗೋಷ್ಠಿ ಮಾಡಬೇಕಿತ್ತು. ಆದರೆ ಜಾರ್ಖಂಡ್ ಸಿಎಂ ಶಿಬು ಸೊರೇನ್ ಅವರು ತೀರಿಕೊಂಡಿದ್ದಾರೆ. ಹೀಗಾಗಿ ಸುದ್ದಿಗೋಷ್ಠಿ ಮುಂದೂಡಿಕೆಯಾಗಿರಬಹುದು. ಇಲ್ಲದಿದ್ದರೆ ದಾಖಲೆ ಬಿಡುಗಡೆ ಮಾಡುತ್ತಿದ್ದರು ಎಂದರು. ರಾಹುಲ್ ಗಾಂಧಿ ಪ್ರತಿಭಟನೆ ಮಾಡ್ತಾರೆ. […]

Continue Reading

ರುದ್ರಾಕ್ಷಿ ಧಾರಣೆಯಿಂದ ಆಧ್ಯಾತ್ಮಿಕ ಮತ್ತು ಭೌತಿಕ ಲಾಭ: ಚರಲಿಂಗ ಶ್ರೀ

ಕಲಬುರಗಿ: ರುದ್ರಾಕ್ಷಿ ಒಂದು ಪವಿತ್ರ ವಸ್ತುವಾಗಿದ್ದು, ಇದನ್ನು ಧರಿಸುವುದರಿಂದ ಆಧ್ಯಾತ್ಮಿಕ ಮತ್ತು ಭೌತಿಕ ಪ್ರಯೋಜನ ಪಡೆಯಬಹುದು ಎಂದು ಗದ್ದುಗೆ ಮಠದ ಪೂಜ್ಯ ಶ್ರೀ ಚರಲಿಂಗ ಮಹಾಸ್ವಾಮಿಗಳು ಹೇಳಿದರು. ನಗರದ ಬಸವೇಶ್ವರ ಆಸ್ಪತ್ರೆ ಎದುರುಗಡೆಯ ವಿದ್ಯಾನಗರ ಕಾಲೋನಿಯಲ್ಲಿ ಇಂದು ಬೆಳಿಗ್ಗೆ 7 ಗಂಟೆಯಿಂದ 8ರ ವರೆಗೆ ವೆಲ್‌ಫೇರ ಸೊಸೈಟಿಯ ಭಕ್ತರ ಮನೆಗಳಿಗೆ ಹೋಗಿ ರುದ್ರಾಕ್ಷಿ ಧಾರಣೆ ಮಾಡಿ ಮಾತನಾಡಿದದ ಅವರು, ರಕ್ತದೊತ್ತಡ ಮತ್ತು ಚರ್ಮದ ಸಮಸ್ಯೆಗಳಿಗೆ ಪರಿಹಾರ ಇದರಲ್ಲಿವೆ. ಇದು ಆಧ್ಯಾತ್ಮಿಕ ಪ್ರಗತಿಗೆ ಸಹಾಯ ಮಾಡುತ್ತದೆ. ಧ್ಯಾನ ಮತ್ತು […]

Continue Reading

ಸಿಎಂ ಪದಕ ಪುರಸ್ಕೃತ ಪ್ರಶಾಂತ ದೇಶೆಟ್ಟಿಗೆ ಅಭಿನಂದನೆ

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಪೊಲೀಸ್ ಠಾಣೆಯ ರೈಟರ್ ಪ್ರಶಾಂತ ಎಸ್ ದೇಶೆಟ್ಟಿ ಅವರಿಗೆ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸತ್ಕರಿಸಿ, ಅಭನಂದಿಸಲಾಯಿತು. ನಗರದ ಖಾಸಗಿ ಸಭಾಂಗಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಸಮಾಜ ಸೇವಕ ಸೋಮಶೇಖರ ಬಿ ಮುಲಗೆ ಮಾತನಾಡಿ, ದೇಶೆಟ್ಟಿ ಅವರು ಇಲಾಖೆಯಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಮುಖ್ಯಮಂತ್ರಿ ಪದಕ ದೊರೆತಿರುವದು ಸೂಕ್ತವಾಗಿದೆ. ಕಾರ್ಯನಿರ್ವಹಿಸಲು ಪ್ರಶಸ್ತಿ ಮತ್ತಷ್ಟು ಪ್ರೇರಣೆ ನೀಡುತ್ತದೆ ಎಂದರು. ಕಾರ್ಯಕ್ರಮದಲ್ಲಿ ಮುಖಂಡರಾದ ಎಚ್.ಬಿ ಪಾಟೀಲ, ಶಿವಯೋಗೆಪ್ಪಾ ಎಸ್. ಬಿರಾದಾರ, ರವಿ ಬಿರಾದಾರ, ಶ್ರೀಶೈಲ ಕುಂಬಾರ, […]

Continue Reading

ಪವಿತ್ರ ಪಾಟೀಲರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ಅಂಗನವಾಡಿ ಕಾರ್ಯಕರ್ತೆ ಪಾರ್ವತಿ ಕಲ್ಯಾಣರಾವಡೊಣ್ಣೂರ ಅವರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ಸನ್ಮಾನ ಕಾಳಗಿ : ತಾಲೂಕಿನ ಡೊಣ್ಣೂರ್ ಗ್ರಾಮದ ಅಂಗನವಾಡಿಕಾರ್ಯಕರ್ತೆ ಪಾರ್ವತಿ ಡೊಣ್ಣೂರ್ ಅವರಿಗೆ ಜುಲೈ2024ಮತ್ತು ಸೆಪ್ಟೆಂಬರ್ 2024ರ ಸಾಲಿನಲ್ಲಿ ನಡೆದಸಂಪೂರ್ಣ ಅಭಿಯಾನ ಕಾರ್ಯಕ್ರಮದಲ್ಲಿ ಸಮರ್ಪಿತ ಸೇವೆ ಮತ್ತು ಕಠಿಣ ಪರಿಶ್ರಮಕ್ಕಾಗಿ ಸೇವೆ ಸಲ್ಲಿಸಿದಕ್ಕೆ ಪಾರ್ವತಿ ಕಲ್ಯಾಣ ಅವರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕಲ್ಬುರ್ಗಿ ದಕ್ಷಿಣ ಮತ್ ಕ್ಷೇತ್ರ ಶಾಸಕರಾದಅಲ್ಲಮಪ್ರಭು ಪಾಟೀಲ್ ಜಿಲ್ಲಾ ಮಹಿಳಾ […]

Continue Reading