ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು: ಬಸವರಾಜ ಅವಂಟಿ

ಚಿತ್ತಾಪುರ: ಅಜ್ಞಾನದ ಅಂಧಕಾರ ತೊಲಗಿಸಿ ಜ್ಞಾನದ ಬೆಳಕನ್ನು ನೀಡುವಲ್ಲಿ ಗುರುತರ ಜವಾಬ್ದಾರಿ ಇರುವ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು ಎಂದು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಿನ್ಸಿಪಾಲ್ ಬಸವರಾಜ ಅವಂಟಿ ಹೇಳಿದರು. ಪಟ್ಟಣದ ಆದರ್ಶ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ವಿದ್ಯಮಾನದಲ್ಲಿ ಶಿಕ್ಷಕರು ಪಠ್ಯಕ್ಕೆ ಸೀಮಿತವಾಗದೆ, ಪಠ್ಯೇತರ ಚಟುವಟಿಕೆಗಳ ಜೊತೆಗೆ ಮಾನವೀಯ ಮೌಲ್ಯಗಳನ್ನು ಬಿತ್ತುವ ಜವಾಬ್ದಾರಿ ವಹಿಸಿಕೊಳ್ಳಬೇಕಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಚಾರ್ಯ […]

Continue Reading

ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಕ್ಕೆ ಶೇ.6 ಮತ್ತು ಅಲೆಮಾರಿ ಸಮುದಾಯಕ್ಕೆ ಶೇ.1 ರಷ್ಟು ಮೀಸಲು ನೀಡಲು ಆಗ್ರಹ

ಚಿತ್ತಾಪುರ: ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಕ್ಕೆ ಶೇ.6, ಅಲೆಮಾರಿ ಸಮುದಾಯಕ್ಕೆ ಶೇ.1ರಷ್ಟು ಮೀಸಲು ನೀಡುವಂತೆ ಆಗ್ರಹಿಸಿ ಬಂಜಾರ, ಭೋವಿ, ಕೊರಚಾ ಮತ್ತು ಕೊರಮ ಸಮಾಜಗಳ ಕ್ಷೇಮಾಭಿವೃದ್ಧಿ ಸಂಘದಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಸಂಘದ ಉಪಾಧ್ಯಕ್ಷ ಚಂದು ಜಾಧವ ಮಾತನಾಡಿ, ಒಳ ಮೀಸಲಾತಿ ಕುರಿತು ನಾಗಮೋಹನ್‌ದಾಸ್ ಆಯೋಗವು ಮಾಡಿರುವ ಶಿಫಾರಸ್ಸು ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರ ಮತ್ತು ಕರ್ನಾಟಕ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಕಾಯ್ದೆ 2022ರ ಸೆಕ್ಷನ್ (1)ರ […]

Continue Reading

ವಿದ್ಯಾರ್ಥಿ ಸ್ನೇಹಿ ಶಿಕ್ಷಕರು ಹೆಚ್ಚಾಗಲಿ

ಕಾಳಗಿ: ವಿದ್ಯಾರ್ಥಿಗಳು ತಮ್ಮ ಮಕ್ಕಳಂತೆ ಕಾಳಜಿ ವಹಿಸಿ, ಅವರಿಗೆ ಜ್ಞಾನ, ಬುದ್ಧಿ, ಕೌಶಲಗಳನ್ನು ನೀಡಿ, ದೇಶದ ಅಮೂಲ್ಯ ಸಂಪತ್ತನ್ನಾಗಿಸುವ ವಿದ್ಯಾರ್ಥಿ ಸ್ನೇಹಿ ಶಿಕ್ಷಕರ ಸಂಖ್ಯೆ ಹೆಚ್ಚಾಗಬೇಕು ಎಂದು ಮುಖ್ಯ ಶಿಕ್ಷಕ ಹಾಗೂ ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ ಹೇಳಿದರು. ತಾಲೂಕಿನ ಕೋರವಾರ ಅಣವೀರಭದ್ರೇಶ್ವರ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗ‌ ಮತ್ತು ಕಾಳಗಿ ಕನ್ನಡ ಸಾಹಿತ್ಯ ಪರಿಷತ್’ನ ತಾಲೂಕಾ ಘಟಕ ಇವುಗಳು ಜಂಟಿಯಾಗಿ ಶುಕ್ರವಾರ ಏರ್ಪಡಿಸಿದ್ದ ‘63ನೇ ರಾಷ್ಟ್ರೀಯ ಶಿಕ್ಷಕರ ದಿನಾಚರಣೆ : ಶಿಕ್ಷಕರಿಗೆ […]

Continue Reading

ಶಿಕ್ಷಕರ ಕೈಯಲ್ಲಿ ಮಕ್ಕಳ ಭವಿಷ್ಯವಿದೆ: ಡಾ. ಚಂದ್ರಕಾಂತ ಕೆಳಮನಿ

ಸುದ್ದಿ ಸಂಗ್ರಹ ಚಿತ್ತಾಪುರ ಶಿಕ್ಷಕ ಕೇವಲ ವ್ಯಕ್ತಿಯಲ್ಲ ಮಕ್ಕಳ ಭವಿಷ್ಯ ರೂಪಿಸುವ ಶಕ್ತಿ ಎಂದು ಗುಲ್ಬರ್ಗ ವಿಶ್ವವಿದ್ಯಾಲಯದ ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ. ಚಂದ್ರಕಾಂತ ಕೆಳಮನಿ ಹೇಳಿದರು. ಸಮೀಪದ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರು ಮಕ್ಕಳಲ್ಲಿ ನಕಾರಾತ್ಮಕ ಭಾವನೆಗಳು ತುಂಬದೆ ನಿಮ್ಮಿoದ ಎಲ್ಲವೂ ಸಾಧ್ಯವೆಂಬ ಸಕಾರಾತ್ಮಕ ಭಾವನೆ ತುಂಬುವ ಕೆಲಸ ಮಾಡಬೇಕು. ಶಿಕ್ಷಕ […]

Continue Reading

ಅತಿಯಾದ ಮಳೆಯಿಂದ ಬಳವಡಗಿ ಗ್ರಾಮ ಜಲಾವೃತ: ಅಗ್ನಿಶಾಮಕ ಸಿಬ್ಬಂದಿಯಿಂದ 20 ಜನರ ರಕ್ಷಣೆ

ಸುದ್ದಿ ಸಂಗ್ರಹ ಚಿತ್ತಾಪುರ ತಾಲೂಕಿನ ಬಳವಡಗಿ ಗ್ರಾಮದಲ್ಲಿ ಅತಿ ಹೆಚ್ಚು ಮಳೆಯಾದ ಪರಿಣಾಮ ಗ್ರಾಮದ ಕೆಲಭಾಗ ಜಲಾವೃತಗೊಂಡಿತ್ತು, ಕೂಡಲೇ ಕಲಬುರಗಿ ಅಗ್ನಿಶಾಮಕ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ 20 ಜನರ ರಕ್ಷಣೆ ಮಾಡಿದರು. ಕಲಬುರಗಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಮಲ್ಲಿಕಾರ್ಜುನ ನೇತೃತ್ವದಲ್ಲಿ ಎಸ್‌ಎಸ್‌ಓ ಆಂಜನೇಯ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳಾದ ಸತೀಶ ಎಲ್.ಎಫ್, ನೈಮೋದಿನ್, ಗಬ್ಬರ್ ಸಿಂಗ್, ಶಂಕರ ಲಿಂಗ, ಮಲ್ಲಪ್ಪ, ಅಮಿತ, ಬಸವರಾಜ, ಶಂಭುಲಿಂಗಪ್ಪ ಮತ್ತು ರಾಮಾಜಿ ರಕ್ಷಣಾ ಕಾರ್ಯದಲ್ಲಿ ತೊಡಗಿ ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿದರು. […]

Continue Reading

ನಿಜಶರಣ ಅಂಬಿಗರ ಚೌಡಯ್ಯನವರ ಬಗ್ಗೆ ನಾಯಕ ಸಮುದಾಯದವರ ಅವಹೇಳನಕಾರಿ ಮಾತು ಖಂಡನೀಯ

ಚಿತ್ತಾಪುರ: ಕೋಲಿ ಸಮಾಜದ ಗುರು ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಬಗ್ಗೆ ನಾಯಕ ಸಮುದಾಯದವರು ಅವಹೇಳನಕಾರಿ ಮಾತನಾಡಿರುವುದು ತಾಲೂಕು ಕೋಲಿ ಸಮಾಜ ಖಂಡಿಸುತ್ತದೆ ಎಂದು ಕೋಲಿ ಸಮಾಜದ ತಾಲೂಕು ಅಧ್ಯಕ್ಷ ನಿಂಗಣ್ಣಾ ಹೆಗಲೇರಿ ಮತ್ತು ಗೌರವಾಧ್ಯಕ್ಷ ರಾಮಲಿಂಗ ಬಾನರ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚೌಡಯ್ಯನವರ ಬಗ್ಗೆ ಅವಹೇಳನಕಾರಿ ಮಾತನಾಡಿರುವ ಬಗ್ಗೆ ದಾಖಲಾಗಿರುವ ಪ್ರಕರಣದಡಿ ಎಲ್ಲಾ ಆರೋಪಿಗಳನ್ನು ಬಂಧಿಸಬೇಕು ಮತ್ತು ರಾಜ್ಯದಿಂದ ಗಡಿಪಾರು‌ ಮಾಡಬೇಕು ಎಂದು ಕೋಲಿ ಸಮಾಜ ಒತ್ತಾಯಿಸುತ್ತದೆ ಎಂದರು. ಈ ಘಟನೆಯನ್ನು ಖಂಡಿಸಿ ಮತ್ತು […]

Continue Reading

ಚಿತ್ತಾಪುರ: ಭಂಕಲಗಾ ಗ್ರಾಮದಲ್ಲಿ ಕೊಟ್ಟಿಗೆ ಕುಸಿದು 40 ಮೇಕೆಗಳು ಸಾವು

ಚಿತ್ತಾಪುರ: ಧಾರಾಕಾರ ಮಳೆಗೆ ಕೊಟ್ಟಿಗೆ ಕುಸಿದು ಬಿದ್ದು ಕೊಟ್ಟಿಗೆಯಲ್ಲಿದ್ದ ನಲವತ್ತು ಮೇಕೆಗಳು ಮೃತಪಟ್ಟಿರುವ ಘಟನೆ ತಾಲೂಕಿನ ಭಂಕಲಗಾ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಗ್ರಾಮದ ಮಾಳಪ್ಪಾ ಧೂಳಪ್ಪಾ ಪೂಜಾರಿ ಅವರಿಗೆ ಸೇರಿದಮೇಕೆಗಳು ಕೊಟ್ಟಿಗೆಯ ಮಾಳಿಗೆ ಮತ್ತು ಕಟ್ಟಡದ ಅವಶೇಷಗಳಡಿ ಸಿಲುಕಿ ಮೃತಪಟ್ಟಿವೆ. ಮೇಕೆಗಳ ಸಾವಿನಿಂದ ಮಾಳಪ್ಪಾ ಅವರು ಲಕ್ಷಾಂತರ ರೂ ನಷ್ಟ ಅನುಭವಿಸಿದ್ದಾರೆ. ಘಟನೆಯ ಸುದ್ದಿ ತಿಳಿದು ಕಂದಾಯ ಇಲಾಖೆಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪಶು ವೈದ್ಯಾಧಿಕಾರಿಗೆ ಮಾಹಿತಿ ನೀಡಿ ಮೃತಪಟ್ಟಿರುವ ಆಡುಗಳ […]

Continue Reading

ಅತಿವೃಷ್ಟಿಯಿಂದ ಬೆಳೆ ಹಾನಿ, ಎಕರೆಗೆ 25 ಸಾವಿರ ಪರಿಹಾರ ನೀಡಲು ಕರವೇ ಆಗ್ರಹ

ಚಿತ್ತಾಪುರ: ಅತಿವೃಷ್ಟಿಯಿಂದ ಮುಂಗಾರು ಬೆಳೆಗಳು ಹಾನಿಯಾಗಿವೆ. ಹೀಗಾಗಿ ಎಕರೆಗೆ 25 ಸಾವಿರ ಪರಿಹಾರ ನೀಡಬೇಕು ಮತ್ತು ಹೆಸರು, ಉದ್ದು ಬೆಳೆಗೆ ಸರ್ಕಾರದಿಂದ ಯೋಗ್ಯ ಬೆಲೆಯಲ್ಲಿ ಖರೀದಿಸಬೇಕು ಎಂದು ಕರವೇ ನಾರಾಯಣಗೌಡ ಬಣದ ತಾಲೂಕು ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಆಗ್ರಹಿಸಿ ತಹಸೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ತಾಲೂಕು ಅಧ್ಯಕ್ಷ ಚಂದರ್ ಚವ್ಹಾಣ ಮಾತನಾಡಿ, ಎರಡು ತಿಂಗಳುಗಳಿಂದ ಸುರಿದ ಭಾರಿ ಮಳೆಯಿಂದ ಮುಂಗಾರು ಬೆಳೆಗಳು ಸಂಪೂರ್ಣ ನಾಶವಾಗಿವೆ. ಇದರಿಂದ ರೈತರು ಬಹಳ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಅತಿವೃಷ್ಟಿಯಿಂದ ತಾಲೂಕಿನ ಬೆಳೆಗಳು […]

Continue Reading

ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಪಾಲಕರ ಸಭೆ ಪೂರಕ

ಕಲಬುರಗಿ: ಶೈಕ್ಷಣಿಕ ಗುಣಮಟ್ಟದ ಸುಧಾರಣೆಗೆ ಪಾಲಕರ ಸಭೆಗಳು ಪೂರಕವಾಗಿ ಕಾರ್ಯ ನಿರ್ವಹಿಸುತ್ತವೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ಜೇವರ್ಗಿ ಪಟ್ಟಣದ ಕೋರ್ಟ್ ಸಮೀಪದ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗುರುವಾರ ಜರುಗಿದ ‘ಪಾಲಕರ ಸಭೆ’ ಉದ್ಘಾಟಿಸಿ ಮಾತನಾಡಿದ ಅವರು, ಪಾಲಕರ ಸಭೆಗಳು ಮಕ್ಕಳ ಶಿಕ್ಷಣಕ್ಕೆ ನಿರ್ಣಾಯಕವಾಗಿವೆ. ಏಕೆಂದರೆ ಪಾಲಕರು ಮತ್ತು ಶಿಕ್ಷಕರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತವೆ. ಮಗುವಿನ ಶೈಕ್ಷಣಿಕ, ಸಾಮಾಜಿಕ ಮತ್ತು ಭಾವನಾತ್ಮಕ ಪ್ರಗತಿಯನ್ನು ಚರ್ಚಿಸಲು ಅವಕಾಶ ಒದಗಿಸುತ್ತವೆ. ಈ ಸಭೆಗಳು ಪೋಷಕರು ತಮ್ಮ […]

Continue Reading

ಕಾಗಿಣಾ- ಭೀಮಾ ನದಿಗಳ ಸಂಗಮವು ಕನ್ನಡ ಸಾಹಿತ್ಯ ಸಂಸ್ಕೃತಿಗೆ ಪ್ರೇರಣೆ: ಮುಡುಬಿ ಗುಂಡೇರಾವ

ಚಿತ್ತಾಪುರ: ಕಾಗಿಣಾ- ಭೀಮಾ ನದಿಗಳ ಸಂಗಮವು ಕನ್ನಡ ಸಾಹಿತ್ಯ ಸಂಸ್ಕೃತಿಗೆ ಪ್ರೇರಣೆ ನೀಡಿದೆ ಎಂದು ಸಂಶೋಧಕ ಮುಡುಬಿ ಗುಂಡೇರಾವ ಅಭಿಮತವ್ಯಕ್ತ ಪಡಿಸಿದರು. ತಾಲೂಕಿನ ಕುಂದನೂರು- ಹೊನಗುಂಟಿ ಸಮೀಪದ ಕೂಡಲ ಸಂಗಮನಾಥ ದೇವಾಲಯದಲ್ಲಿ ಗ್ರಾಮದ ಬಸವೇಶ್ವರ ಸೇವಾ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-35ದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಕೊಂದನೂರು, ಹೊನಗುಂಟಾ, ಶಹಬಾದ, ಭಂಕೂರ, ಮರತೂರ, ಮಾಲಗತ್ತಿ ಮುಂತಾದ ಗ್ರಾಮಗಳು ಪ್ರಾಚೀನ ಕಾಲದಲ್ಲಿ ಪ್ರಸಿದ್ದಿ ಹೊಂದಿದ್ದವು. ಧರ್ಮ, ಆಧ್ಯಾತ್ಮ, ಶಿಕ್ಷಣ, ಕಲೆ, […]

Continue Reading