ರಾಜ್ಯದಲ್ಲಿ ಜೋರಾದ ಮುಂಗಾರು ಪೂರ್ವ ಮಳೆಯಬ್ಬರ: ಹಲವೆಡೆ ವರುಣಾರ್ಭಟಕ್ಕೆ ಅವಾಂತರ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಬ್ಬರ ಜೋರಾಗಿದ್ದು, ಗುಡುಗು ಸಹಿತ ಬಿರುಗಾಳಿ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಬೀದರ್ ತಾಲೂಕಿನ ಅಣದೂರು ವಾಡಿ ಗ್ರಾಮದ ಬಳಿ ಇರುವ ಮಾಂಜ್ರಾ ವಾಟರ್ ಪಾರ್ಕ್ನಲ್ಲಿ ಗೋಡೆ ಕುಸಿದು ಬಿದ್ದು ಅನಾಹುತ ಸಂಭವಿಸಿದೆ. ಮಕ್ಕಳು, ಮಹಿಳೆಯರು ಸೇರಿ 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ. ಸದ್ಯ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಬೀದರ್ ತಾಲೂಕಿನ ಕಮಠಾಣ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮೂವರು ಮಕ್ಕಳು ಗಾಯಗೊಂಡಿದ್ದಾರೆ. ಗದಗ ಜಿಲ್ಲೆಯಲ್ಲಿ ಬಿರುಗಾಳಿ […]

Continue Reading

ಕಲಬುರಗಿ ಜಿ.ಪಂ ಸಿಇಒ ಆಗಿ ಸಂಕನೂರ ನೇಮಕ

ಸುದ್ದಿ ಸಂಗ್ರಹ ಕಲಬುರಗಿಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್‌ ಸಿಂಗ್ ಮೀನಾ ಅವರು ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ರಾಹುಲ್‌ ಸಂಕನೂರ ನೇಮಕಗೊಂಡಿದ್ದಾರೆ. 2017ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್‌ ಅಧಿಕಾರಿಯಾಗಿರುವ ಭಂವರ್‌ ಸಿಂಗ್‌ ಅವರನ್ನು ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ನಿಯೋಜಿಸಲಾಗಿದೆ. 2019ರ ಬ್ಯಾಚ್‌ನ ಕರ್ನಾಟಕ ಕೇಡರ್‌ ಐಎಎಸ್‌ ಅಧಿಕಾರಿಯಾದ ರಾಹುಲ್‌ ಅವರು ಸದ್ಯ ಐಟಿ- ಬಿಟಿ ಇಲಾಖೆಯ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಭಂವರ್‌ ಸಿಂಗ್‌ ಮೀನಾ ಅವರನ್ನು 2023ರ ಜೂನ್‌ನಿಂದ ಕಲಬುರಗಿ ಜಿಲ್ಲಾ ಪಂಚಾಯಿತಿ ಸಿಇಒ ಆಗಿ […]

Continue Reading

ಸಹಸ್ರಾರು ಭಕ್ತರ ನಡುವೆ ಅದ್ಧೂರಿ ರಥೋತ್ಸವ

ಸುದ್ದಿ ಸಂಗ್ರಹ ಯಡ್ರಾಮಿತಾಲೂಕಿನ ಕಾಖಂಡಕಿ ಸದ್ಗುರು ಮಲ್ಲಾರಾಧ್ಯರ ಮತ್ತು ಮಹಾತ್ಮಾ ಕೋರಿಸಿದ್ಧೇಶ್ವರ ಭವ್ಯ ರಥೋತ್ಸವ ರವಿವಾರ ರಾತ್ರಿ ಸಹಸ್ರಾರು ಭಕ್ತರ ನಡುವೆ ಅದ್ಧೂರಿಯಾಗಿ ಜರುಗಿತು. ನಾಲವಾರ- ಕಾಖಂಡಕಿ ಉಭಯ ಮಠಗಳ ಪೀಠಾಧಿಪತಿ ಡಾ.ಸಿದ್ದತೋಟೇಂದ್ರ ಶಿವಾಚಾರ್ಯ ಸ್ವಾಮಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಸಂಜೆ ಭವ್ಯ ರಥೋತ್ಸವ ಜರುಗಿತು. ರಥೋತ್ಸವದಲ್ಲಿ ಪಾಲ್ಗೊಂಡಿದ್ದ ಭಕ್ತರಿಂದ ಮಲ್ಲಾರಾಧ್ಯ ಮಹಾರಾಜ್ ಕೀ, ಕೋರಿಸಿದ್ಧೇಶ್ವರ ಮಹಾರಾಜ್ ಕೀ, ತೋಟೇಂದ್ರ ಮಹಾರಾಜ್ ಕೀ ಜೈ ಎಂಬ ಜಯಘೋಷ ಮುಗಿಲು ಮುಟ್ಟುವಂತಿತ್ತು. ಈ […]

Continue Reading

ಸಾರಿಗೆ ಸಂಘಟನೆ ನೌಕರರಲ್ಲೆ ಒಡಕು: ಮುಷ್ಕರದಿಂದ ಹಿಂದೆ ಸರಿದ KSRTC ನೌಕರರ ಸಂಘ

ಸುದ್ದಿ ಸಂಗ್ರಹ ಬೆಂಗಳೂರುಸಾರಿಗೆ ನೌಕರರು ಕರೆ ಕೊಟ್ಟ ಮುಷ್ಕರದ ಡೆಡ್‌ಲೈನ್ ಇಂದಿಗೆ ಅಂತ್ಯವಾಗುತ್ತಿದೆ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನೌಕರರು ಮೇ.20 ರಿಂದ ಮುಷ್ಕರಕ್ಕೆ ಕರೆ ಕೊಟ್ಟಿದ್ದು, ಸರ್ಕಾರಕ್ಕೆ ಸಂಜೆಯೊಳಗೆ ಡೆಡ್‌ಲೈನ್‌ ನೀಡಲಾಗಿದೆ. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ ಅಂದುಕೊಂಡಿರುವಾಗಲೇ ಮುಷ್ಕರಕ್ಕೆ ಕರೆಕೊಟ್ಟ ಜಂಟಿ ಕ್ರಿಯಾ ಸಮಿತಿಗೆ ಶಾಕ್‌ ಎದುರಾಗಿದೆ. ಮುಷ್ಕರದಿಂದ ಹಿಂದೆ ಸರಿಯಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘ ನಿರ್ಧರಿಸಿದೆ. ಈ ಬಗ್ಗೆ ಅಧ್ಯಕ್ಷ ಕೆ.ಆರ್‌ ಜಗದೀಶ್ ಅಧಿಕೃತ ಪತ್ರಿಕಾ ಹೇಳಿಕೆ ಬಿಡುಗಡೆ […]

Continue Reading

ಕಲಬುರಗಿಯ ನೂತನ ಮೃಗಾಲಯ ಲೋಕಾರ್ಪಣೆ: ಬನ್ನೇರುಘಟ್ಟದಿಂದ ಬಂದ ಸಿಂಹಗಳೆ ಆಕರ್ಷಣೆ

ಸುದ್ದಿ ಸಂಗ್ರಹ ಕಾಳಗಿತಾಲೂಕಿನ ಮಾಡಬೂಳ ಗ್ರಾಮದ ವ್ಯಾಪ್ತಿಯಲ್ಲಿ ಅಂದಾಜಯ 35 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಕಲಬುರಗಿ ‌ಮೃಗಾಲಯವನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಿದರು. ಕಲಬುರಗಿ ನಗರದಲ್ಲಿ 1988ರಲ್ಲಿ ಸ್ಥಾಪಿಸಿದ್ದ‌ ಕಿರು ಮೃಗಾಲಯವನ್ನು ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಸೆಕ್ಷನ್ 38(1) ಅಡಿಯಲ್ಲಿ ಮೃಗಾಲಯ ಸ್ಥಾಪನೆಗೆ ಕೇಂದ್ರ ಮೃಗಾಲಯ ಪ್ರಾಧಿಕಾರ ಮತ್ತು ರಾಜ್ಯ ಕೇಂದ್ರ ಮೃಗಾಲಯ ಪ್ರಾಧಿಕಾರದಿಂದ ಅನುಮತಿಯೊಂದಿಗೆ ದೊಡ್ಡ ‌ಪ್ರಮಾಣದಲ್ಲಿ ಉನ್ನತೀಕರಿಸಿ ಮತ್ತು ವಿಸ್ತರಿಸಲಾಗಿದೆ. ಹೊಸ ಮೃಗಾಲಯದಲ್ಲಿ […]

Continue Reading

ವಿಜಯೇಂದ್ರ ಮೆಟ್ರೋ‌ ಪ್ರಯಾಣ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಸುದ್ದಿ ಸಂಗ್ರಹ ಚಿತ್ತಾಪುರ ವಿಜಯೇಂದ್ರ ಮೆಟ್ರೋ ಹತ್ತಿರುವ ಬಗ್ಗೆ ಮಾದ್ಯಮಗಳು ಪದೆ ಪದೆ ಸುದ್ದಿ ಬಿತ್ತರಿಸುತ್ತಿದ್ದು, ಆದರೆ ಈ ಪರಿಸ್ಥಿತಿಗೆ ಯಾರು ಕಾರಣ ಎಂದು ಯಾಕೆ ಕೇಳುತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು‌ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದರು. ಮಾಡಬೂಳ ಗ್ರಾಮದ ಬಳಿ ನಿರ್ಮಾಣವಾಗಿರುವ ನೂತನ ಮೃಗಾಲಯ ಉದ್ಘಾಟನೆ ನೆರವೇರಿಸಿದ‌ ನಂತರ ಮಾಧ್ಯಮದ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,‌ ಮೋದಿ ವಿದೇಶದಿಂದ ತಂದ ಪ್ರಾಣಿಗಳು ಸತ್ತು ಹೋದವು. ಈಗ ನಾವು ತರುವ […]

Continue Reading

ಕಲ್ಯಾಣದಲ್ಲಿ ಹಸಿರು ಹೆಚ್ಚಿಸಲು ಆದ್ಯತೆ: ಈಶ್ವರ ಖಂಡ್ರೆ

ಸುದ್ದಿ ಸಂಗ್ರಹ ಚಿತ್ತಾಪುರಭೂಭಾಗದ ಶೇ 33ರಷ್ಟು ಹಸಿರು ಇರಬೇಕು ಎಂದು ತಜ್ಞರು ಹೇಳುತ್ತಾರೆ. ಆದರೆ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಸಿರು ಹೊದಿಕೆ ಬಹಳ ಕಡಿಮೆಯಿದ್ದು, ಅದನ್ನು ಹೆಚ್ಚಿಸಲು ಇನ್ನಷ್ಟು ಆದ್ಯತೆ ನೀಡಲಾಗುವುದು’ ಎಂದು ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು. ತಾಲೂಕಿನ ಮಾಡಬೂಳ ಗ್ರಾಮದಲ್ಲಿ ಜಿಲ್ಲಾಡಳಿತ, ಅರಣ್ಯ ಇಲಾಖೆ, ಕೆಕೆಆರ್‌ಡಿಬಿ ಹಾಗೂ ಮೂರ್ತಿ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಸೋಮವಾರ ಸುಮಾರು 42 ಎಕರೆ 38 ಪ್ರದೇಶದ ವಿಸ್ತೀರ್ಣದಲ್ಲಿ 37.31 ಕೋಟಿ ವೆಚ್ಚದಲ್ಲಿ ನಿರ್ಮಾಣ […]

Continue Reading

ಕಾಖಂಡಕಿಯಲ್ಲಿ ತನಾರತಿ ಉತ್ಸವ: ಭಕ್ತರಿಂದ ಹರಕೆ ಸಮರ್ಪಣೆ

ಸುದ್ದಿ ಸಂಗ್ರಹ ಕಲಬುರಗಿಯಡ್ರಾಮಿ ತಾಲೂಕಿನ ಶ್ರೀಕ್ಷೇತ್ರ ಕಾಖಂಡಕಿ ಸದ್ಗುರು ಮಲ್ಲಾರಾಧ್ಯ ಕೋರಿಸಿದ್ದೇಶ್ವರ ಜಾತ್ರಾ ಮಹೋತ್ಸವದ ನಿಮಿತ್ತ ಶನಿವಾರ ಮಧ್ಯರಾತ್ರಿ ಭಕ್ತರು ತನಾರತಿ ಹೊತ್ತು ಗುರುದ್ವಯರಿಗೆ ತಮ್ಮ ಹರಕೆಯನ್ನು ತೀರಿಸಿದರು ಎಂದು ನಾಲವಾರ ಶ್ರೀ ಮಠದ ವಕ್ತಾರ ಮಹಾದೇವ ಗಂವ್ಹಾರ ತಿಳಿಸಿದ್ದಾರೆ. ನಾಲವಾರ- ಕಾಖಂಡಕಿ ಮಠಗಳ ಪೀಠಾಧಿಪತಿ ಡಾ.ಸಿದ್ದತೋಟೆಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ಬಾದಾಮಿ ಅಮಾವಾಸ್ಯೆ ನಿಮಿತ್ತ ದಕ್ಷಿಣ ಭಾರತದ ಮಹಾದೀಪಮೇಳವೆಂದೆ ಪ್ರಖ್ಯಾತವಾದ ನಾಲವಾರ ಮಠದ ಪರಂಪರೆಯ ತನಾರತಿ ಉತ್ಸವಕ್ಕೆ ಭಕ್ತರು […]

Continue Reading

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಎಚ್ಚರಿಕೆ

ಸುದ್ದಿ ಸಂಗ್ರಹ ಬೆಂಗಳೂರುಮುಂದಿನ 7 ದಿನಗಳ ಕಾಲ ರಾಜ್ಯದಾದ್ಯಂತ ವಾತಾವರಣದಲ್ಲಿ ಭಾರಿ ಏರುಪೇರಾಗಲಿದ್ದು, ದಕ್ಷಿಣ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಗರಿಷ್ಠ ತಾಪಮಾನ 35°C ಮತ್ತು ಕನಿಷ್ಠ ತಾಪಮಾನ 24°C ಇರಲಿದ್ದು, ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಮುಖ್ಯಾಂಶಗಳು ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಭಾರಿ […]

Continue Reading

ಶಹಾಬಾದ್: ರಸ್ತೆ ಅಪಘಾತದಲ್ಲಿ ಬೈಕ್ ಹಿಂಬದಿ ಸವಾರನ ಸಾವು

ಸುದ್ದಿ ಸಂಗ್ರಹ ಶಹಾಬಾದ್ರಾವೂರಯಿಂದ ಶಹಾಬಾದ್ ಕಡೆಗೆ ಬರುವಾಗ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್’ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಬೈಕ್‌ ಹಿಂಬದಿ ಸವಾರ ಮೃತಪಟ್ಟಿದ್ದಾರೆ. ರಾವೂರ ಮತ್ತು ಮಾಲಗತ್ತಿಯ ರಾಜ್ಯ ಹೆದ್ದಾರಿ–150ರಲ್ಲಿ ಘಟನೆ ಜರುಗಿದೆ. ಹಳೆಯ ಶಹಾಬಾದ್ ನಿವಾಸಿ ಮಹ್ಮದ್ ಕಾಸಿಂ ತಂದೆ ಮಹ್ಮದ್ ಇಬ್ರಾಹಿಂ (22) ಮೃತರು. ಕಾಸಿಂ ಅವರು ತನ್ನ ಸ್ನೇಹಿತ ಅಬ್ದುಲ್ ಹಕೀಮ್ ಜೊತೆ ಸೇರಿ ಬೈಕ್‌ನಲ್ಲಿ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಬೈಕ್ ನಡೆಸುತ್ತಿದ್ದ ಅಬ್ದುಲ್ ಹಕೀಮ್ ಎಂಬಾತನಿಗೆ […]

Continue Reading