ವನ್ಯಜೀವಿಗಳಿಂದ ಮಾತ್ರ ಜಗದ ಉಳಿವು: ವಿಜಯಕುಮಾರ ಬಡಿಗೇರ್

ಚಿತ್ತಾಪುರ: ಜಗದ ಉಳಿವು ವನ್ಯಜೀವಿಗಳನ್ನು ಅವಲಂಬಿಸಿವೆ. ಅವುಗಳ ನಾಶವಾದರೆ ನಮಗೆ ಉಳಿಗಾಲವಿಲ್ಲ ಎಂದು ಅರಣ್ಯಾಧಿಕಾರಿ ವಿಜಯಕುಮಾರ್ ಬಡಿಗೇರ್ ಹೇಳಿದರು. ಸಮೀಪದ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಪ್ರಾದೇಶಿಕ ಅರಣ್ಯ ವಿಭಾಗ ಕಲಬುರಗಿ, ಚಿತ್ತಾಪುರ ವಲಯ ಅರಣ್ಯ ವಿಭಾಗ ಮತ್ತು ರಾವೂರ ಸಚ್ಚಿದಾನಂದ ಪ್ರೌಢ ಶಾಲೆಯ ವತಿಯಿಂದ ಲುoಬಿನಿ ಟ್ರಿ ಪಾರ್ಕ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಪ್ರಕೃತಿ ಒಂದು ಅದ್ಭುತ ಸೃಷ್ಟಿ, ಅದರಲ್ಲಿ ಅರಣ್ಯಗಳು ಹಾಗೂ ವನ್ಯಜೀವಿಗಳ […]

Continue Reading

ಸಿಜೆಐ ಮೇಲೆ ಶೂ ಎಸೆದ ವಕೀಲನ ವಿರುದ್ಧ ಕಠಿಣ ಕ್ರಮಕ್ಕೆ ಸಂಜಯ ಬುಳಕರ್ ಆಗ್ರಹ

ಚಿತ್ತಾಪುರ: ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿಯವರ ಮೇಲೆ ವಕೀಲನೊಬ್ಬ ಶೂ ಎಸೆಯುವ ಪ್ರಯತ್ನ ಮಾಡಿರುವ ವಕೀಲನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಂವಿಧಾನ ಹಿತ ರಕ್ಷಣಾ ಸಮಿತಿ ಅಧ್ಯಕ್ಷ ಸಂಜಯ ಬುಳಕರ ನೇತೃತ್ವದಲ್ಲಿ ಬುಧವಾರ ಪ್ರತಿಭಟಸಿದ ಮುಖಂಡರು ರಾಷ್ಟ್ರಪತಿಗಳಿಗೆ ಬರೆದ ಮನವಿ ಪತ್ರವನ್ನು ಗ್ರೇಡ್-2 ತಹಸೀಲ್ದಾರ್ ರಾಜಕುಮಾರ ಮರತೂರ ಅವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಸಂಜಯ ಬುಳಕರ ಮಾತನಾಡಿ, ದೇಶದ ಸರ್ವೋಚ್ಚ ನ್ಯಾಯಮೂರ್ತಿಗಳ ಮೇಲೆ ಕೋರ್ಟ್ […]

Continue Reading

ಯುವಕರು ಸೃಜನಶೀಲತೆ, ಕ್ರೀಯಾಶೀಲತೆ, ಪ್ರಬಲ ಇಚ್ಛಾಶಕ್ತಿ ಬೆಳೆಸಿಕೊಳ್ಳಿ

ಕಲಬುರಗಿ: ಪ್ರಸ್ತುತ ದಿನಗಳಲ್ಲಿ ತೀರ್ವ ಸ್ಪರ್ಧೆ ಎದುರಿಸ ಬೇಕಾಗಿರುವುದರಿಂದ ಯುವಕರು ಪದವಿ ಜೊತೆಗೆ ಸೃಜನಶೀಲ ಗುಣ, ಕ್ರೀಯಾಶೀಲತೆ, ಸಾಧಿಸುವ ಪ್ರಭಲ ಇಚ್ಛಾಶಕ್ತಿ ಮೈಗೂಡಿಸಿಕೊಳ್ಳಬೇಕು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಮಯೂರಕುಮಾರ ಗೋರ್ಮೆ ಹೇಳಿದರು. ನಗರದ ಆಳಂದ ರಸ್ತೆಯ ಶೆಟ್ಟಿ ಕಾಂಪೆಕ್ಸ್ ಎದುರುಗಡೆಯ ಶಾರದಾ ವಿವೇಕ ಮಹಿಳಾ ಪದವಿ ಕಾಲೇಜ್’ನಲ್ಲಿ ಕಲಬುರಗಿಯ ಮೇರಾ ಯುವ ಭಾರತ, ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಕೇಂದ್ರ ಸಂವಹನ ಇಲಾಖೆ, ಶಾರದಾ ವಿವೇಕ ಮಹಿಳಾ ಪದವಿ ಕಾಲೇಜ್, ಸ್ವಾಮಿ […]

Continue Reading

ಭೂತಾಯಿಯ ಸೀಮಂತದ ಪ್ರತೀಕ ಸೀಗೆ ಹುಣ್ಣಿಮೆ

ಕಲಬುರಗಿ: ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ಕೃಷಿ ಹಾಗೂ ರೈತರೇ ದೇಶದ ಬೆನ್ನೆಲುಬು. ನಮ್ಮ ದೇಶ ತಾಯಿಯ ಸ್ವರೂಪದಲ್ಲಿ ಕಾಣಲಾಗುತ್ತದೆ. ಮಹಿಳೆ ಗರ್ಭವತಿಯಾದಾಗ ಸೀಮಂತ ಮಾಡುವಂತೆ, ಭೂಮಿಯನ್ನು ತಾಯಿ, ದೇವರೆಂದು ನಂಬಿ ಕಾಯಕ ಮಾಡುವ ಶ್ರಮಜೀವಿಯಾದ ರೈತ, ತಾನು ಬೆಳೆದ ಫಸಲಿಗೆ ಪೂಜೆ, ಗೌರವ ಸಲ್ಲಿಸಿ ಸೀಮಂತದ ಕಾರ್ಯಕ್ರಮದಂತೆ ಪೂಜಿಸಿ, ಆರಾಧಿಸುವ ಪ್ರತೀಕ ಸೀಗೆ ಹುಣ್ಣಿಮೆಯಾಗಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ಸುಂಟನೂರ ಗ್ರಾಮದ ರಾಮಚಂದ್ರ ಬಬಲಾದಿಯವರ ತೊಗರಿ ಹೊಲದಲ್ಲಿ ಬಸವೇಶ್ವರ ಸಮಾಜ ಸೇವಾ […]

Continue Reading

ಯಲ್ಲಮ್ಮ ದೇವಿ ಜಾತ್ರೆ, ಪಲ್ಲಕ್ಕಿ ಉತ್ಸವ

ಚಿತ್ತಾಪುರ: ಸೀಗಿ ಹುಣ್ಣಿಮೆಯಂದು ಪಟ್ಟಣದ ಐತಿಹಾಸಿಕ ಕ್ಷೇತ್ರ ನಾಗಾವಿಯಲ್ಲಿರುವ ಯಲ್ಲಮ್ಮ ದೇವಿಯ ಜಾತ್ರೆ ನಿಮಿತ್ತ ಪಲ್ಲಕ್ಕಿ ಉತ್ಸವವು ಶ್ರದ್ಧಾಭಕ್ತಿ, ಸಂಭ್ರಮ, ಸಡಗರ, ಹರ್ಷೋದ್ಘಾರದೊಂದಿಗೆ ಅದ್ದೂರಿಯಾಗಿ ಜರುಗಿತು. ಪಟ್ಟಣದ ಸರಾಫ್ ಲಚ್ಚಪ್ಪ ನಾಯಕ ಅವರ ಮನೆಯಲ್ಲಿ ದೇವಸ್ಥಾನ ಸಮಿತಿ ಅಧ್ಯಕ್ಷ ಹಾಗೂ ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರ ಉಪಸ್ಥಿತಿಯಲ್ಲಿ ಮಂಗಳವಾರ ಮಧ್ಯಾಹ್ನ ವಿಶ್ವೇಶ್ವರ ಪೂಜೆ, ಗುರುಪೂಜೆ, ದೇವಿಯ ಪಲ್ಲಕ್ಕಿ ಪೂಜೆ ಜರುಗಿತು, ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ತಹಸೀಲ್ದಾರ್ ಅವರು ಮಂಗಳಾರತಿ ಮಾಡಿ ಪಲ್ಲಕ್ಕಿ ಹೊತ್ತುಕೊಂಡು ಉತ್ಸವದ […]

Continue Reading

ಶಾಲೆಗಳ ದಸರಾ ರಜೆ ವಿಸ್ತರಣೆಗೆ ಸರಕಾರಿ ನೌಕರರ ಸಂಘ ಸ್ವಾಗತ

ಕಲಬುರಗಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ದಸರಾ ರಜೆ ಅವಧಿ ಅ.18ರ ವರೆಗೆ ವಿಸ್ತರಿಸಿದ ಸರಕಾರದ ಆದೇಶಕ್ಕೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಸ್ವಾಗತಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕಾ ನೀಡಿರುವ ಅವರು, ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ-2025ರ ಗಣತಿ ಕಾರ್ಯದಲ್ಲಿ ರಾಜ್ಯಾದಾದ್ಯಂತ ಸರ್ಕಾರಿ ಶಾಲೆಗಳ ಶಿಕ್ಷಕರುಗಳಿಗೆ ಸೆ.22 […]

Continue Reading

ಬಿಗ್‌ಬಾಸ್‌ ಶೋ ಬಂದ್‌: ರಾತ್ರೋರಾತ್ರಿ ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ

ರಾಮನಗರ: ಪರಿಸರ ನಿಯಮ ಉಲ್ಲಂಘನೆ ಆರೋಪದಲ್ಲಿ ಜಾಲಿವುಡ್‌ ಸ್ಟುಡಿಯೋಸ್‌ಗೆ ಬೀಗ ಬಿದ್ದಿದ್ದು, ಅಲ್ಲಿ ನಡೆಯುವ ಬಿಗ್‌ಬಾಸ್‌ ಶೋ ಕೂಡ ಬಂದ್‌ ಆಗಿದೆ. ಬಿಗ್‌ಬಾಸ್‌ ಸ್ಪರ್ಧಿಗಳು ಮನೆಯಿಂದ ಹೊರಬಂದಿದ್ದಾರೆ. ಅಧಿಕೃತವಾಗಿ ಬಿಗ್‌ಬಾಸ್‌ ಮನೆಗೆ ಬೀಗ ಹಾಕಲಾಗಿದೆ. ಸ್ಪರ್ಧೆಯಲ್ಲಿದ್ದ ಎಲ್ಲರನ್ನೂ ರಾತ್ರಿ ಮನೆಯಿಂದ ಹೊರಹಾಕಲಾಗಿದೆ. ಸ್ವತಃ ತಹಸೀಲ್ದಾರ್‌ ತೇಜಸ್ವಿನಿಯವರು ಮುಂದೆ ನಿಂತು ಸ್ಪರ್ಧಿಗಳನ್ನು ಹೊರಗೆ ಕರೆತಂದಿದ್ದಾರೆ. ಬಿಗ್‌ಬಾಸ್‌ ದಿಢೀರ್‌ ಸ್ಥಗಿತದಿಂದ ಸ್ಪರ್ಧಿಗಳು, ತಂತ್ರಜ್ಞರು ಸೇರಿದಂತೆ 700 ಕ್ಕೂ ಹೆಚ್ಚು ಜನರು ಮನೆಗೆ ವಾಪಸ್‌ ಆಗುವಂತಾಗಿದೆ. ಆರು ತಿಂಗಳ ಕಾಲ ಮೂರು […]

Continue Reading

ಜಾಲಿವುಡ್‌ ಸ್ಟುಡಿಯೋಸ್‌ಗೆ ಬಿತ್ತು ಬೀಗ: ಬಿಗ್‌ ಬಾಸ್‌ ಸ್ಥಗಿತಕ್ಕೆ ಸೂಚನೆ

ರಾಮನಗರ: ಪರಿಸರ ನಿಯಮ ಉಲ್ಲಂಘನೆ ಆರೋಪದಲ್ಲಿ ಜಾಲಿವುಡ್‌ ಸ್ಟುಡಿಯೋಸ್‌ಗೆ ಬೀಗ ಬಿದ್ದಿದೆ. ಬಿಗ್‌ ಬಾಸ್‌ ನಡೆಯುತ್ತಿರುವ ಜಾಗಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ನಿಯಮ ಮೀರಿ ಜಾಲಿವುಡ್‌ ಸ್ಟುಡಿಯೋಸ್‌ ನಡೆಸುತ್ತಿರುವ ಬಗ್ಗೆ ನೋಟಿಸ್‌ ನೀಡಲಾಗಿತ್ತು. ಆದರೆ ಯಾವುದೆ ಪಾಲನೆಯಾಗದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಇಂದು ಸಂಜೆ ಸ್ಟುಡಿಯೋಸ್‌ಗೆ ಭೇಟಿ ನೀಡಿದರು. ರಾಮನಗರ ತಹಸೀಲ್ದಾರ್‌ ತೇಜಸ್ವಿನಿ, ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಜಾಲಿವುಡ್‌ ಒಳಗೆ ಪರಿಶೀಲನೆ ನಡೆಸಿದರು. ನೋಟಿಸ್ ತೆಗೆದುಕೊಳ್ಳಲು […]

Continue Reading

ವಾಟ್ಸಾಪ್​​ನಲ್ಲಿ ಮದುವೆ ಇನ್ವಿಟೇಶನ್ ಬಂದರೆ ಓಪನ್ ಮಾಡಬೇಡಿ, ಖಾತೆಯಲ್ಲಿರುವ ಅಷ್ಟೂ ಹಣ ಹೋಗಬಹುದು ಎಚ್ಚರ

ಗುರುಗ್ರಾಮ: ತಂತ್ರಜ್ಞಾನ ಬದಲಾದಂತೆ ಸೈಬರ್ ಅಪರಾಧಿಗಳು ಕೂಡ ಹಣ ವಸೂಲಿಗೆ ಹಲವು ಹೊಸ ಟ್ರಿಕ್​ ಅಳವಡಿಸಿಕೊಳ್ಳುತ್ತಿದ್ದಾರೆ. ಜನರಿಗೆ ಅನುಮಾನ ಬರದಂತೆ ಹಣವನ್ನು ಲೂಟಿ ಮಾಡುತ್ತಿದ್ದಾರೆ. ವಾಟ್ಸಾಪ್​ನಲ್ಲಿ ಬಂದ ಮದುವೆ ಇನ್ವಿಟೇಷನ್ ಓಪನ್ ಮಾಡಿ ವ್ಯಕ್ತಿಯೊಬ್ಬ 97 ಸಾವಿರ ರೂ. ಕಳೆದುಕೊಂಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಪರಿಚಯ ಇರುವವರಿಂದ ಅಲ್ಲ, ಅಪರಿಚಿತ ದೂರವಾಣಿ ಸಂಖ್ಯೆಯಿಂದ ಮದುವೆ ಆಮಂತ್ರಣ ಬಂದರೆ ಅದನ್ನು ಓಪನ್ ಮಾಡಲೇಬೇಡಿ. ಅಂತಹ ಲಿಂಕ್​ಗಳನ್ನು ಓಪನ್ ಮಾಡಿದರೆ ನಿಮಗೆ ಅರಿವಿಲ್ಲದೆ ಸೈಬರ್ ವಂಚಕರು ನಿಮ್ಮ ಖಾತೆಯಿಂದ ಹಣ […]

Continue Reading

ವಿದ್ಯಾರ್ಥಿಗಳಿಗೆ ಶಾಕ್‌ ಕೊಟ್ಟ ರಾಜ್ಯ ಸರ್ಕಾರ: ಪರೀಕ್ಷಾ ಶುಲ್ಕ 710 ರೂ.ವರೆಗೆ ಹೆಚ್ಚಳ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಶಾಕ್‌ ಕೊಟ್ಟಿದೆ. 2025-26ನೇ ಸಾಲಿನ ಪರೀಕ್ಷಾ ಶುಲ್ಕ 5% ಏರಿಕೆ ಮಾಡಿ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಆದೇಶ ಹೊರಡಿಸಿದೆ. ಅದರನ್ವಯ 2025-26ನೇ ಸಾಲಿನಲ್ಲಿ ನಡೆಯಲಿರುವ ಎಲ್ಲಾ ಪರೀಕ್ಷೆಗಳಿಗೆ ಪ್ರಸ್ತುತ ಇರುವ ದರಕ್ಕೆ ಶೇ.5 ರಷ್ಟು ಸೇರಿಸಿ ಶುಲ್ಕ ವಿಧಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. 2025-26ನೇ ಸಾಲಿನ SSLC ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಪರಿಷ್ಕೃತ ಪರೀಕ್ಷಾ ಶುಲ್ಕ * ಪ್ರಥಮ ಬಾರಿ […]

Continue Reading