ಸಿಎಂ ಒತ್ತಡಕ್ಕೆ ಸಭಾಪತಿ ಹೊರಟ್ಟಿ ರಾಜೀನಾಮೆ: ಅಂಗೀಕರಿಸದಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ

ಸುದ್ದಿ ಸಂಗ್ರಹ ಬೆಂಗಳೂರುಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಕೊಡಿಸಲಾಗಿದೆ. ಹೊರಟ್ಟಿ ರಾಜೀನಾಮೆಯನ್ನು ಅಂಗೀಕರಿಸಬಾರದು ಎಂದು ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು ಸಲ್ಲಿಸಿದೆ. ಛಲವಾದಿ ನಾರಾಯಣಸ್ವಾಮಿ, ಶರವಣ ನೇತೃತ್ವದಲ್ಲಿ ಲೋಕಭವನಕ್ಕೆ ತೆರಳಿದ ಬಿಜೆಪಿ-ಜೆಡಿಎಸ್ ನಿಯೋಗ, ಹೊರಟ್ಟಿ ಅವರ ರಾಜೀನಾಮೆ ಅಂಗೀಕರಿಸದಂತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದೆ. ಸದನ ನಡಾವಳಿ ಪ್ರಕಾರ ರಾಜೀನಾಮೆ ಸಲ್ಲಿಕೆ ಆಗಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದೆ. ಕಾಂಗ್ರೆಸ್ ಲೆಟರ್‌ಹೆಡ್‌ನಲ್ಲಿ ಸಭಾಧ್ಯಕ್ಷ, ಸಭಾಪತಿಗಳ ಹೆಸರುಗಳ ಆಯ್ಕೆ ಬಗ್ಗೆಯೂ ರಾಜ್ಯಪಾಲರಿಗೆ ನಿಯೋಗ […]

Continue Reading

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಸಭೆಯಲ್ಲಿ ಗಲಾಟೆ: ವೀಕ್ಷಕರ ಎದುರೆ ಕಾರ್ಯಕರ್ತರ ಫೈಟಿಂಗ್

ಸುದ್ದಿ ಸಂಗ್ರಹ ಶಿವಮೊಗ್ಗನಗರದ ಕಾಂಗ್ರೆಸ್‌ ಭವನದಲ್ಲಿ ಪಕ್ಷದ ಜಿಲ್ಲಾ ಅಧ್ಯಕ್ಷರ ಆಯ್ಕೆ ಸಂಬಂಧ ನಡೆದ ಸಭೆಯಲ್ಲಿ ಕಾರ್ಯಕರ್ತರ ನಡುವೆ ಗಲಾಟೆಯಾಗಿದೆ. ಎಐಸಿಸಿ ವೀಕ್ಷಕ ಶರತ್ ಎದುರಲ್ಲೆ ಕಾಂಗ್ರೆಸ್ ಕಾರ್ಯಕರ್ತರು ಕೈ-ಕೈ ಮಿಲಾಯಿಸಿಕೊಂಡಿದ್ದಾರೆ. ಸಭೆ ನಡೆಯುತ್ತಿದ್ದ ವೇಳೆ ಮುಖಂಡ ರಂಗೇಗೌಡರನ್ನು ಕಾಂಗ್ರೆಸ್ ಕಚೇರಿ ಸಭಾಂಗಣಕ್ಕೆ ಬಿಡದೆ ತಡೆಯಲಾಗಿದೆ. ಇದೆ ವಿಚಾರಕ್ಕೆ ದಕ್ಷಿಣ ಬ್ಲಾಕ್ ಅಧ್ಯಕ್ಷ ಕಲಿಂ ಪಾಷಾ ಬೆಂಬಲಿಗರು ಹಾಗೂ ಕಾಂಗ್ರೆಸ್ ಮುಖಂಡ ರಂಗೇಗೌಡ ಬೆಂಬಲಿಗರ ನಡುವೆ ವಾಗ್ವಾದ ನಡೆದಿದೆ. ಈ ಸಂದರ್ಭ ಕಲಿಂ ಪಾಷಾ ಬೆಂಬಲಿಗರು ರಂಗೇಗೌಡರ […]

Continue Reading

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ? – ಜಸ್ಟ್‌ 10 ಸೆಕೆಂಡ್‌ನಲ್ಲಿ ಚೆಕ್‌ ಮಾಡಿ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದ್ದು ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ವೋ ಎನ್ನುವ ಪ್ರಶ್ನೆ, ಆತಂಕ ನಿಮ್ಮನ್ನು ಕಾಡುತ್ತಿರಬಹುದು. ಆದರೆ ನೀವು ಚಿಂತೆ ಮಾಡಬೇಕಾದ ಅಗತ್ಯವಿಲ್ಲ. ಚುನಾವಣಾ ಆಯೋಗ ಎಸ್‌ಐಆರ್‌ ಪ್ರಕ್ರಿಯೆಯ ಬಳಿಕ ವೆಬ್‌ಸೈಟ್‌ ರೂಪಿಸಿದೆ. ಈ ವೆಬ್‌ಸೈಟ್‌ನಲ್ಲಿ ನೀವು ನಿಮ್ಮ ಎಪಿಕ್‌ ನಂಬರ್‌ ನಮೂದಿಸುವ ಮೂಲಕ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಬಹುದು. ಒಂದು ವೇಳೆ ಈ ಸೈಟ್‌ನಲ್ಲಿ ಹೆಸರು ASDDO ಪಟ್ಟಿಗೆ ಸೇರ್ಪಡೆಯಾಗಿದ್ದರೆ ಮತದಾರರು […]

Continue Reading

ಸಚಿವ ಸ್ಥಾನ ಬಿಟ್ಟು ಪಕ್ಷದ ಕೆಲಸ ಮಾಡಿ ಅಂತ ಹೈಕಮಾಂಡ್ ಹೇಳಿದ್ರೆ ಎಲ್ಲರೂ ಮಾಡಬೇಕು: ಪ್ರಿಯಾಂಕ್ ಖರ್ಗೆ

ಸುದ್ದಿ ಸಂಗ್ರಹ ಬೆಂಗಳೂರುಹೈಕಮಾಂಡ್ ಸಚಿವ ಸ್ಥಾನ ಬಿಟ್ಟು ಪಕ್ಷದ ಕೆಲಸ ಮಾಡಬೇಕು ಅಂದರೆ ನಾನು ಸೇರಿ ಎಲ್ಲರೂ ಮಾಡಬೇಕಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ನೂತನ ಸಚಿವರಿಗೆ ಖಾತೆ ಹಂಚಿಕೆ ಆಗದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯಾವ ಮಂತ್ರಿಗೆ ಯಾವ ಜವಾಬ್ದಾರಿ ಕೊಡಬೇಕು ಅನ್ನೋದು ಸಿಎಂ ವಿವೇಚನೆ. ಹೈಕಮಾಂಡ್ ಜೊತೆ ಮಾತಾಡಿ ಸಿಎಂ ಅವರು ಸರ್ಕಾರ ಯಾರಿಗೆ ಜವಾಬ್ದಾರಿ ಕೊಟ್ಟರೆ ಉತ್ತಮ ಅಂತ ತೀರ್ಮಾನ ಮಾಡ್ತಾರೆ. ಇದರಲ್ಲಿ ಯಾವುದೆ ಗೊಂದಲ ಇಲ್ಲ ಎಂದರು. ಈಗಿರುವ […]

Continue Reading

ಬೆಂಗಳೂರಲ್ಲಿ 1 ಕೋಟಿ ಮತದಾರರಲ್ಲಿ ಅರ್ಧಕ್ಕರ್ಧ ಔಟ್: ಎಸ್‌ಐಆರ್‌ನಲ್ಲಿ ಮಹಾ ಲೋಪವೆಂದ ಕಾಂಗ್ರೆಸ್

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದಲ್ಲಿ ಎಸ್‌ಐಆರ್ ನಾಳೆಗೆ (ಆ.7) ಅಂತ್ಯವಾಗಲಿದೆ. ರಾಜ್ಯದಲ್ಲಿ ಈಗಾಗಲೆ 1.11 ಕೋಟಿ ಮತದಾರರ ಹೆಸರು ಪಟ್ಟಿಯಿಂದ ಡಿಲೀಟ್‌ ಆಗುವ ಸಾಧ್ಯತೆ ಇದೆ ಎಂದು ರಾಜ್ಯ ಚುನಾವಣಾ ಆಯೋಗ ಹೇಳಿದೆ. ಈ ಪೈಕಿ ಬೆಂಗಳೂರಿನ ಜಿಬಿಎ ವ್ಯಾಪ್ತಿಯಲ್ಲಿ ಅರ್ಧಕ್ಕರ್ಧ ಮತದಾರರಿಗೆ ಕೊಕ್ ಆಗಲಿದೆ ಎಂದು ದತ್ತಾಂಶ ಹೇಳುತ್ತಿದೆ. ಬೆಂಗಳೂರಿನಲ್ಲಿ 1.3 ಕೋಟಿ ಮತದಾರರಿದ್ದು, ಈ ಪೈಕಿ 49.53 ಲಕ್ಷ ಮತದಾರರಿಗೆ ಕೊಕ್ ಬೀಳಲಿದೆ. ಗೈರು, ಸ್ಥಳಾಂತರ, ಮರಣ ಹೊಂದಿದ, ನಕಲು ಮತ್ತು ಇತರೆ ಮತದಾರರನ್ನು ಚುನಾವಣಾ […]

Continue Reading

ಮಳೆಗಾಲದಲ್ಲಿ ಒಗೆದ ಬಟ್ಟೆಗಳ ಕೆಟ್ಟ ವಾಸನೆಯನ್ನು ಹೋಗಲಾಡಿಸಲು ಈ ತಂತ್ರ ಪಾಲಿಸಿ

ಬಟ್ಟೆಗಳನ್ನು ಒಣಗಿಸುವುದು ಮತ್ತು ಒಗೆದ ಬಟ್ಟೆಗಳು ವಾಸನೆ ಬರದಂತೆ, ಫ್ರೆಶ್‌ ಆಗಿ ಇಟ್ಟುಕೊಳ್ಳುವುದು ಮಳೆಗಾಲದಲ್ಲಿ ದೊಡ್ಡ ಸವಾಲಿನ ಕೆಲಸವಾಗಿದೆ. ಬಿಸಿಲಿನ ಕೊರತೆ, ಮತ್ತು ಗಾಳಿಯಲ್ಲಿ ಅತಿಯಾದ ಆರ್ದ್ರತೆಯಿಂದಾಗಿ, ಮಳೆಗಾಲದಲ್ಲಿ ಬಟ್ಟೆಗಳು ಸರಿಯಾಗಿ ಒಣಗುವುದಿಲ್ಲ. ಕೆಲವೊಮ್ಮೆ, ಉತ್ತಮ ಡಿಟರ್ಜೆಂಟ್‌ನಿಂದ ಡ್ರೆಸ್‌ ವಾಶ್‌ ಮಾಡಿದ್ರೂ, ಬಟ್ಟೆಗಳಿಂದ ದುರ್ವಾಸನೆ ಹೊರಸೂಸಲು ಪ್ರಾರಂಭಿಸುತ್ತವೆ. ಈ ವಾಸನೆ ಬರುವ ಬಟ್ಟೆಯನ್ನು ಧರಿಸಿದರೆ ಖಂಡಿತ ಮುಜುಗರ ಉಂಟಾಗುತ್ತದೆ. ಆದ್ದರಿಂದ ಈ ಕೆಲವೊಂದು ಪದಾರ್ಥಗಳ ಸಹಾಯದಿಂದ ಬಟ್ಟೆ ಒಗೆಯುವ ಮೂಲಕ ಒಗೆದ ಬಟ್ಟೆಗಳು ವಾಸನೆ ಬರದಂತೆ, ತಾಜಾ […]

Continue Reading

ಕಲಬುರಗಿ ಅಂಚೆ ವಿಭಾಗದಲ್ಲಿ ಫ್ರಾಂಚೈಸಿ ಮಳಿಗೆಗಳಿಗೆ ಅರ್ಜಿ ಆಹ್ವಾನ

ಸುದ್ದಿ ಸಂಗ್ರಹ ಕಲಬುರಗಿಭಾರತ ಸರ್ಕಾರದ ಅಂಚೆ ಇಲಾಖೆಯು ಸಾರ್ವಜನಿಕರಿಗೆ ಅಂಚೆ ಸೇವೆಗಳನ್ನು ಇನ್ನಷ್ಟು ಸುಲಭವಾಗಿ ಮತ್ತು ಸಮೀಪದಲ್ಲಿ ಒದಗಿಸುವ ಉದ್ದೇಶದಿಂದ ಕಲಬುರಗಿ ಅಂಚೆ ವಿಭಾಗದ ವ್ಯಾಪ್ತಿಯ ಆಯ್ದ ಸ್ಥಳಗಳಲ್ಲಿ ಅಂಚೆ ಕಚೇರಿ ಫ್ರಾಂಚೈಸಿ ಮಳಿಗೆಗಳನ್ನು ಆರಂಭಿಸಲು ಅರ್ಜಿ ಆಹ್ವಾನಿಸಿದೆ ಎಂದು ಕಲಬುರಗಿ ಅಂಚೆ ವಿಭಾಗದ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಿಂದ ಕಚೇರಿ ವೇಳೆಯಲ್ಲಿ ಪಡೆಯಲು ಅಥವಾ ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ದಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ […]

Continue Reading

2,000 ರೂ. ಗಿಂತಲೂ ಹೆಚ್ಚಿನ UPI ಪಾವತಿಗೆ ಶುಲ್ಕ: ಲೋಕಸಭೆಯಲ್ಲಿ ಮಸೂದೆ ಪಾಸ್‌

ಸುದ್ದಿ ಸಂಗ್ರಹ ನವದೆಹಲಿಏಕೀಕೃತ ಪಾವತಿ ವ್ಯವಸ್ಥೆ (UPI) ಸೇರಿದಂತೆ ಡಿಜಿಟಲ್ ಪಾವತಿ ವ್ಯವಸ್ಥೆಗಳ ಮೇಲೆ ಭವಿಷ್ಯದಲ್ಲಿ ಶುಲ್ಕ ವಿಧಿಸಲು ಕೇಂದ್ರ ಸರ್ಕಾರಕ್ಕೆ ಕಾನೂನುಬದ್ಧ ಅಧಿಕಾರ ನೀಡುವ ಮಹತ್ವದ ತಿದ್ದುಪಡಿ ಮಸೂದೆಯನ್ನು ಲೋಕಸಭೆ ಇಂದು ಅಂಗೀಕರಿಸಿದೆ. ತೆರಿಗೆ ಮತ್ತು ಇತರ ಕಾನೂನುಗಳ (ತಿದ್ದುಪಡಿ) ಮಸೂದೆ, 2026 (Taxation and Other Laws (Amendment) Bill, 2026.) ಅನ್ನು ಧ್ವನಿ ಮತದ ಮೂಲಕ ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. ಸದನದಲ್ಲಿ ಗದ್ದಲದ ನಡುವೆಯೇ ಮಧ್ಯಾಹ್ನ 2 ಗಂಟೆಗೆ ಕಲಾಪ ಪುನರಾರಂಭವಾದ ಬಳಿಕ ಯಾವುದೆ […]

Continue Reading

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ: ಸಚಿವ ಪ್ರಿಯಾಂಕ್ ಖರ್ಗೆ

ಸುದ್ದಿ ಸಂಗ್ರಹ ಬೆಂಗಳೂರುಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಸರ್ಕಾರ ತಾತ್ಕಾಲಿಕವಾಗಿ ಮುಂದೂಡಿದೆ. ಆಗಸ್ಟ್ 8 ಮತ್ತು 9 ರಂದು ನಡೆಯಬೇಕಿದ್ದ ಲಿಖಿತ ಪರೀಕ್ಷೆಯನ್ನು ಮುಂದೂಡುವ ಮೂಲಕ ವಿದ್ಯಾರ್ಥಿಗಳ ಹೋರಾಟಕ್ಕೆ ಜಯ ಸಿಕ್ಕಿದೆ. ಕೃಷಿ ಅಧಿಕಾರಿ ಹುದ್ದೆ ನೇಮಕಾತಿ ನಿಯಮಗಳ ಸಂಬಂಧ ಪ್ರತಿಭಟನೆ ಫ್ರೀಡಂ ಪಾರ್ಕಿನಲ್ಲಿ ನಡೆಯುತ್ತಿದ್ದ ಮುಷ್ಕರ ನಿರತರಾಗಿರುವ ಜಿಕೆವಿಕೆ ಕೃಷಿ ವಿಶ್ವವಿದ್ಯಾಲಯ ವಿದ್ಯಾರ್ಥಿಗಳನ್ನು ಇಂದು ಸಚಿವ ಪ್ರಿಯಾಂಕ್ ಖರ್ಗೆ ಭೇಟಿಯಾದ್ರು. ವಿದ್ಯಾರ್ಥಿಗಳ ಬೇಡಿಕೆಗಳನ್ನು ಆಲಿಸಿದ […]

Continue Reading

ಯಡ್ರಾಮಿ ಪಂಪ್‌ಸೆಟ್, ಕೇಬಲ್ ಕಳ್ಳರ ಬಂಧನ: ಇಬ್ಬರು ಆರೋಪಿಗಳು ಸೆರೆ

ಸುದ್ದಿ ಸಂಗ್ರಹ ಯಡ್ರಾಮಿನೀರಿನ ಪಂಪ್‌ಸೆಟ್, ಮೋಟಾರ್ ಸ್ಟಾರ್ಟರ್ ಮತ್ತು ಕೇಬಲ್ ವೈರ್ ಕಳ್ಳತನ ಪ್ರಕರಣಗಳನ್ನು ಯಡ್ರಾಮಿ ಪೊಲೀಸರು ಭೇದಿಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಶಹಾಪುರ ತಾಲೂಕಿನ ಗೋಗಿ ತಾಂಡಾದ ಕಿಶನ್ ಟೋಪು ಜಾಧವ ಬಂಧಿತ ಆರೋಪಿ. ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಐದು ನೀರೆತ್ತುವ ಮೋಟಾರ್‌, ಮೂರು ಸ್ಟಾರ್ಟ್‌ರ್‌ಗಳು ಮತ್ತು ಕೇಬಲ್, ವೈರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಯಡ್ರಾಮಿ ಮತ್ತು ನೆಲೋಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೇ.10 ರಂದು ಕಾಚಾಪುರ, ಜೂನ್ 18ರಂದು ತೆಲಗಬಾಳ ಹಾಗೂ ಜ.1ರಂದು ಹರವಾಳ […]

Continue Reading