55 ವಿದ್ಯಾರ್ಥಿಗಳು ಅಸ್ವಸ್ಥ: ಪ್ರಾಂಶುಪಾಲ, ವಾರ್ಡನ್ ಅಮಾನತು

ಸುದ್ದಿ ಸಂಗ್ರಹ ಅಫಜಲಪುರತಾಲೂಕಿನ ಕರಜಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಳಪೆ ಆಹಾರ ಸೇವಿಸಿದ ಪರಿಣಾಮ 55 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಾಂಶುಪಾಲ ಶರಣಬಸಪ್ಪ ಪಾಟೀಲ ಮತ್ತು ವಾರ್ಡನ್ ರವಿ ವಾಲಿ ಅವರನ್ನು ಅಮಾನತುಗೊಳಿಸಲಾಗಿದೆ. ಈ ಕುರಿತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಶಿವಸ್ವಾಮಿ ಬಿ ಆದೇಶ ಹೊರಡಿಸಿದ್ದು, ಕರ್ತವ್ಯಲೋಪ ಮತ್ತು ಬೇಜವಾಬ್ದಾರಿತನ ತೋರಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಆರೋಗ್ಯದ ಸುರಕ್ಷತೆ ಹಾಗೂ […]

Continue Reading

ಚಿತ್ತಾಪುರ ಎಸ್‌ಐಆರ್ ಕುರಿತು ಗ್ರಾಮಸಭೆ ಇಂದಿನಿಂದ ಆಯೋಜನೆ ಮಾಡಲಾಗಿದೆ

ಸುದ್ದಿ ಸಂಗ್ರಹ ಚಿತ್ತಾಪುರಚಿತ್ತಾಪುರ, ವಾಡಿ ಪುರಸಭೆ ವ್ಯಾಪ್ತಿಯಲ್ಲಿ ಮತ್ತು ಚಿತ್ತಾಪುರ ಮತಕ್ಷೇತ್ರ ವ್ಯಾಪ್ತಿಯಲ್ಲಿನ ಚಿತ್ತಾಪುರ, ಶಹಾಬಾದ್, ಕಾಳಗಿ ತಾಲೂಕಿನ ಗ್ರಾಮಗಳ ಮತಗಟ್ಟೆ ವ್ಯಾಪ್ತಿಯಲ್ಲಿ ಎಸ್‌ಐಆರ್ ಕುರಿತು ಗ್ರಾಮಸಭೆ ಆಯೋಜನೆ ಮಾಡಲಾಗಿದೆ ಎಂದು ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರು ಹೇಳಿದ್ದಾರೆ. ತಾಲೂಕು ಪಂಚಾಯಿತಿ ಅಧಿಕಾರಿ ಮೂಲಕ ಈಗಾಗಲೆ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದ್ದಾರೆ. ಬೆಳಗ್ಗೆ 8.30ಕ್ಕೆ ಗ್ರಾಮಸಭೆ ಶುರುವಾಗುತ್ತದೆ. ಸಭೆಯಲ್ಲಿ ಪಿಡಿಒ, ಬಿಎಲ್ಒ, ಬಿಎಲ್ಎ, ಮೇಲ್ವಿಚಾರಕರು, ನೋಡಲ್ ಅಧಿಕಾರಿ ಉಪಸ್ಥಿತರಿರುತ್ತಾರೆ. ಪ್ರತಿ […]

Continue Reading

ಜಾಲಹಳ್ಳಿ ದುರ್ಗಾದೇವಿ ದೇವಸ್ಥಾನದಲ್ಲಿ ಆಭರಣ ಕಳವು

ಸುದ್ದಿ ಸಂಗ್ರಹ ಜಾಲಹಳ್ಳಿಸಮೀಪದ ಚಿಂಚೋಡಿ ಗ್ರಾ.ಪಂ ವ್ಯಾಪ್ತಿಯ ಬಸ್ಸಾಪುರ ಗ್ರಾಮದ ದುರ್ಗಾದೇವಿ ದೇವಸ್ಥಾನದಲ್ಲಿ ಕಳ್ಳರು ಸುಮಾರು 70 ಸಾವಿರ ಬೆಲೆ ಬಾಳುವ ದೇವಿಯ ಬೆಳ್ಳಿಯ ಆಭರಣಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ. ದೇವಸ್ಥಾನದ ಪೂಜಾರಿ ಯಂಕೋಬ ನಾಯಕ ತೋಟದ್ ಅವರು ಜುಲೈ 29ರಂದು ಬೆಳಿಗ್ಗೆ ಪೂಜೆ ಮುಗಿಸಿ ದೇವಸ್ಥಾನಕ್ಕೆ ಬೀಗ ಹಾಕಿಕೊಂಡು ಮನೆಗೆ ತೆರಳಿದ್ದರು. ಮರುದಿನ ಜುಲೈ 30ರಂದು ಬೆಳಿಗ್ಗೆ ದೇವಸ್ಥಾನಕ್ಕೆ ಬಂದಾಗ ಗರ್ಭಗುಡಿಯಲ್ಲಿದ್ದ ದೇವಿಯ ಬೆಳ್ಳಿಯ ಆಭರಣಗಳು ಕಳುವಾಗಿರುವುದು ಕಂಡುಬಂದಿದೆ. ತಕ್ಷಣ ಪೊಲೀಸ್ ಠಾಣೆಗೆ ತೆರಳಿ […]

Continue Reading

ರಾಜ್ಯದಲ್ಲಿ ಮತಪಟ್ಟಿಯಿಂದ 1 ಕೋಟಿ ಮತದಾರರಿಗೆ ಶಾಕ್

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದಲ್ಲಿ 1 ಕೋಟಿ 5 ಲಕ್ಷದ ಮತದಾರರ ಹೆಸರು ಡಿಲೀಟ್ ಆಗಿದೆ. ಎಸ್‌ಐಆರ್ (SIR) ನಡೆಸುತ್ತಿರುವ ಚುನಾವಣಾ ಆಯೋಗ 1,05,12,457 ಮತದಾರರನ್ನು ಎಎಸ್‌ಡಿಡಿಓ-ಅಂದರೆ ಆಬ್ಸೆಂಟ್, ಶಿಫ್ಟ್, ಡೆತ್, ಡುಪ್ಲಿಕೇಟ್ ಮತ್ತು ಅದರ್ ರೀಸನ್ ಅಂತ ಮಾರ್ಕ್ ಮಾಡಲಾಗಿದೆ. ಇದಕ್ಕೆ ಆಕ್ಷೇಪಣೆ ಸಲ್ಲಿಸಲು, ಸರಿಪಡಿಸಿಕೊಳ್ಳಲು ಅವಕಾಶ ಇದೆ. ಆಂಧ್ರಪ್ರದೇಶ ಮತ್ತು ಹರಿಯಾಣದ ಮತದಾರರ ಕರಡುಪಟ್ಟಿ ಶುಕ್ರವಾರ ಪ್ರಕಟವಾಗಿದ್ದು, ಡಿಲೀಟ್ ಮಾಡಲಾದ ಹೆಸರುಗಳ ಸಂಖ್ಯೆ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆಯ ಮೂರನೇ ಹಂತದ ಬಳಿಕ ಒಂದು ಕೋಟಿ […]

Continue Reading

ಉತ್ತಮ ಶಿಕ್ಷಕರಿಂದ ಮಾತ್ರ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ: ಸಿದ್ದಲಿಂಗ ಶ್ರೀ

ಸುದ್ದಿ ಸಂಗ್ರಹ ಶಹಾಬಾದ್ಶೈಕ್ಷಣಿಕ ವ್ಯವಸ್ಥೆಯಲ್ಲಿ ಉತ್ತಮ ಶಿಕ್ಷಕರಿಂದ ಮಾತ್ರ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ. ಎಂದು ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಹೇಳಿದರು.  ತಾಲೂಕಿನ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ 2025-26ನೇ ಸಾಲಿನ ಹತ್ತನೇ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಶಿಕ್ಷಕರು ಕ್ರಿಯಾಶೀಲತೆ ಬೆಳೆಸಿಕೊಳ್ಳಬೇಕು, ನಿರಂತರ ಅಧ್ಯಯನ ಶೀಲರಾಗಬೇಕು ಅಂದಾಗ ಮಾತ್ರ ಮಕ್ಕಳ ಭವಿಷ್ಯ ರೂಪಿಸಲು ಸಾಧ್ಯ ಎಂದರು.    ಪ್ರತಿಭಾವಂತ […]

Continue Reading

ಚಿತ್ತಾಪುರ: 49,044 ಮತದಾರರು ಕರಡು ಮತದಾರರ ಪಟ್ಟಿಯಿಂದ ಹೊರಕ್ಕೆ

ಸುದ್ದಿ ಸಂಗ್ರಹ ಚಿತ್ತಾಪುರಕಳೆದ ಒಂದು ತಿಂಗಳಿಂದ ಮತಕ್ಷೇತ್ರ ವ್ಯಾಪ್ತಿಯ 257 ಮತಗಟ್ಟೆಗಳ ವ್ಯಾಪ್ತಿಯಲ್ಲಿ ನಡೆದಿರುವ ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಜು.31ರ ವರೆಗೆ 2,51,226 ಮತದಾರರ ಪೈಕಿ 1,93,767 ಮತದಾರರ ಮಾಹಿತಿ ಡಿಜಿಟಲೈಸ್ ಮಾಡಿದ್ದು ಒಟ್ಟು 49,044 ಮತದಾರರ ಹೆಸರು ಕರಡು ಮತದಾರ ಪಟ್ಟಿಯಿಂದ ಹೊರಗುಳಿಯಲಿವೆ ಎಂದು ತಹಸೀಲ್ದಾರ್ ನಾಗಯ್ಯ ಹಿರೇಮಠ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 95 ಮತಗಟ್ಟೆಗಳಲ್ಲಿ ಶೇ. 100ರಷ್ಟು ಸಾಧನೆಯಾಗಿದೆ. ಆ.1ರಿಂದ 5ರವರೆಗೆ ವಾರ್ಡ್‌ವಾರು ಗ್ರಾಮ ಸಭೆ ನಡೆಸಲು ವೇಳಾಪಟ್ಟಿ […]

Continue Reading

ಪೇಪರ್ ಲೀಕ್ ತಡೆಗೆ ಐತಿಹಾಸಿಕ ಕಾನೂನು: ಸಾರ್ವಜನಿಕ ಪರೀಕ್ಷಾ ತಿದ್ದುಪಡಿ ಕಾಯ್ದೆ 2026ಕ್ಕೆ ರಾಷ್ಟ್ರಪತಿ ಅಂಕಿತ

ಸುದ್ದಿ ಸಂಗ್ರಹ ನವದೆಹಲಿಇತ್ತೀಚಿನ ನೀಟ್ (NEET)ಸೇರಿದಂತೆ ಪ್ರಮುಖ ಪರೀಕ್ಷಾ ಅಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ದೇಶಾದ್ಯಂತ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪೇಪರ್ ಲೀಕ್, ನಕಲು ಮತ್ತು ಅಕ್ರಮಗಳನ್ನು ಸಂಪೂರ್ಣವಾಗಿ ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ತಂದಿರುವ ‘ಸಾರ್ವಜನಿಕ ಪರೀಕ್ಷೆಗಳ (ಅನುಚಿತ ಮಾರ್ಗಗಳ ತಡೆ) ತಿದ್ದುಪಡಿ ಕಾಯ್ದೆ, 2026’ಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದ ಈ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಗಳ ಅಂಕಿತ ಸಿಗುವುದರೊಂದಿಗೆ, ಇದು ತಕ್ಷಣದಿಂದಲೇ ದೇಶಾದ್ಯಂತ ಜಾರಿಗೆ ಬಂದಿದೆ. ಹೊಸ ಕಾಯ್ದೆಯ ಪ್ರಮುಖ ಮುಖ್ಯಾಂಶಗಳೇನು ? […]

Continue Reading

ಆ.2ಕ್ಕೆ ಕಾನ್‌ಸ್ಟೇಬಲ್‌ ಪರೀಕ್ಷೆ: 3,991 ಹುದ್ದೆಗೆ 4.54 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ

ಸುದ್ದಿ ಸಂಗ್ರಹ ಬೆಂಗಳೂರುಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಒಟ್ಟು 3,991 ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್‌ ಹುದ್ದೆಗಳ ಭರ್ತಿಗೆ ಆಗಸ್ಟ್ 2ರಂದು ಲಿಖಿತ ಪರೀಕ್ಷೆ ನಡೆಸುತ್ತಿದ್ದು, ಬಿಗಿ ಭದ್ರತಾ ಕ್ರಮ ಕೈಗೊಂಡಿದೆ. ರಾಜ್ಯದ ಒಟ್ಟು 884 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಈ ಪರೀಕ್ಷೆಯನ್ನು ಭಾರಿ ಸಂಖ್ಯೆ ಅಂದರೆ 4,54,532 ಜನರು ಬರೆಯುತ್ತಿದ್ದು, ಎಲ್ಲೆಡೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ತಿಳಿಸಿದ್ದಾರೆ. ಉಳಿಕ ಮೂಲ ವೃಂದದ 3,395 ಹುದ್ದೆ ಹಾಗೂ ಕಲ್ಯಾಣ ಕರ್ನಾಟಕ ವೃಂದದ […]

Continue Reading

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: ತಪ್ಪಿದ ಅನಾಹುತ

ಸುದ್ದಿ ಸಂಗ್ರಹ ಕಮಲಾಪುರತಾಲೂಕಿನ ಮಹಾಗಾಂವ ಕ್ರಾಸ್ ಸಮೀಪದ ಸಿದ್ಧಭಾರತಿ ವಿದ್ಯಾಮಂದಿರ ಬಳಿ ಶುಕ್ರವಾರ ಬೆಳಿಗ್ಗೆ ಕೆಕೆಆರ್’ಟಿಸಿ ಬಸ್ ಪಲ್ಟಿಯಾಗಿದೆ. ಬೀದರ್ ನಿಂದ ಕಲಬುರಗಿಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಕಂದಕಕ್ಕೆ ಉರುಳಿದೆ. ಬಸ್ ನಲ್ಲಿ ಕೇವಲ ಐವರು ಪ್ರಯಾಣಿಕರಿದ್ದರು. ಹೀಗಾಗಿ ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ. ಚಾಲಕ ನಿರ್ವಾಹಕ ಸೇರಿದಂತೆ ಸುಮಾರು ಐವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Continue Reading

ಕೊಲೆ ಪ್ರಕರಣ: ಕಲಬುರಗಿ ಜಿಲ್ಲಾ ಕೋರ್ಟ್‌ನಿಂದ ಜೀವಾವಧಿ ಶಿಕ್ಷೆ

ಸುದ್ದಿ ಸಂಗ್ರಹ ಕಲಬುರಗಿಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊನ್ನಕಿರಣಗಿಯ ವ್ಯಕ್ತಿಗೆ ಇಲ್ಲಿನ ಜಿಲ್ಲಾ ಕೋರ್ಟ್‌ ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಿದೆ. ತಾಲೂಕಿನ ಹೊನ್ನಕಿರಣಗಿಯ ನಿವಾಸಿ ನಾಗಯ್ಯ ಸ್ವಾಮಿ (40) ಜೈಲು ಶಿಕ್ಷೆಗೆ ಗುರಿಯಾದ ಅಪರಾಧಿ. 2024ರ ಏಪ್ರಿಲ್‌ 17ರಂದು ಈರಣ್ಣ ನೀರು ತರಲು ಹೋದಾಗ ನಾಗಯ್ಯ ಆತನ ತಲೆ ಮೇಲೆ ಪರ್ಸಿ ಕಲ್ಲು ಎತ್ತಿಹಾಕಿ ಕೊಂದಿದ್ದ. ಈ ಕುರಿತು ಫರಹತಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್‌ಸ್ಪೆಕ್ಟರ್‌ಗಳಾದ ಬಾಲಚಂದ್ರ ಹಾಗೂ ಮಲ್ಲಿಕಾರ್ಜುನ ಇಕ್ಕಳಕಿ ಅವರು ನ್ಯಾಯಾಲಯಕ್ಕೆ […]

Continue Reading