ವಸಂತ್ ನಾಯ್ಕ್ ಹತ್ಯೆ ಪ್ರಕರಣ: ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಜನ ಆರೋಪಿಗಳ ಜಾಮೀನು ನಿರಾಕರಣೆ

ಸುದ್ದಿ ಸಂಗ್ರಹ ಕಾರವಾರಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪದಲ್ಲಿ ವಸಂತ್ ನಾಯ್ಕ ಹತ್ಯೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಜನ ಆರೋಪಿಗಳಿಗೆ ಶಿರಸಿಯ ಜಿಲ್ಲಾ ಪ್ರಧಾನ ನ್ಯಾಯಾಲಯ ಜಾಮೀನು ನಿರಾಕರಿಸಿದೆ. 2006ರ ಪೆಬ್ರವರಿ ತಿಂಗಳಲ್ಲಿ ಸಿದ್ದಾಪುರದ ಅವರಗುಪ್ಪದಲ್ಲಿ ವಸಂತ್ ನಾಯ್ಕ ಹತ್ಯೆ ನಡೆದಿತ್ತು. ಈ ಪ್ರಕರಣ ಸಂಬಂಧ ಕಮಲಾಕರ್ ಭಟ್, ಸುಚಿತ್ರ ಸೇರಿ ಒಟ್ಟು 9 ಜನ ಆರೋಪಿಗಳಾಗಿದ್ದು, 8 ಜನರನ್ನು ಬಂಧಿಸಲಾಗಿತ್ತು. ಇದರಲ್ಲಿ ಒರ್ವ ನಾಪತ್ತೆಯಾಗಿದ್ದರೆ, ಮತ್ತೋರ್ವನಿಗೆ ಬೇಲ್ […]

Continue Reading

ಅಜ್ಞಾನದ ಕತ್ತಲು ಕಳೆದು ಜ್ಞಾನದ ಬೆಳಕು ನೀಡುವವನೇ ಸದ್ಗುರು: ಡಾ. ಸಿದ್ಧತೋಟೇಂದ್ರ ಶ್ರೀ

ಸುದ್ದಿ ಸಂಗ್ರಹ ಕಲಬುರಗಿ ನಗರದ ಕರುಣೇಶ್ವರ ನಗರದಲ್ಲಿರುವ ನಾಲವಾರ ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಶಾಖಾ ಮಠದಲ್ಲಿ ಬುಧವಾರ ಗುರುಪೂರ್ಣಿಮೆಯ ಪಾವನ ದಿನದಂದು ಭಕ್ತಿ-ಭಾವದ ಅಲೆಯೇ ಎದ್ದಿತ್ತು. ಸುರಿಯುತ್ತಿದ್ದ ಧಾರಾಕಾರ ಮಳೆಯನ್ನೂ ಲೆಕ್ಕಿಸದೆ ರಾಜ್ಯ- ಪರರಾಜ್ಯಗಳಿಂದ ಆಗಮಿಸಿದ ಸಹಸ್ರಾರು ಭಕ್ತರು ನಾಲವಾರ ಶ್ರೀಗಳಿಗೆ ಗುರುವಂದನೆ ಸಲ್ಲಿಸಿದರು. ನಾಲವಾರದ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿ ಡಾ. ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು ಧರ್ಮಸಭೆಯ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಅಜ್ಞಾನದ ಕತ್ತಲೆಯನ್ನು ತೊಡೆದು, ಅಂತರಂಗದಲ್ಲಿ ಜ್ಞಾನದ ದಿವ್ಯ ಜ್ಯೋತಿ […]

Continue Reading

ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಸುದ್ದಿ ಸಂಗ್ರಹ ಚಿತ್ತಾಪುರತಾಲೂಕಿನ ದಿಗ್ಗಾಂವ ಮತ್ತು ಚಿತ್ತಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಇಬ್ಬರನ್ನು ಬಂಧಿಸಿ 1,55,700 ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದಿಗ್ಗಾಂವ ಗ್ರಾಮದ ನಾಗರಾಜ ಸಾಬಣ್ಣ ಭಜಂತ್ರಿ (19) ಮತ್ತು ಅಭಿಷೇಕ ಅಮೃತ ಮಡಿವಾಳ (19) ಬಂಧಿತ ಆರೋಪಿಗಳು. ಬಂಧಿತರಿಂದ 10 ಸಾವಿರ ರೂ ಮೌಲ್ಯದ 3 ಮೊಬೈಲ್, 35 ಸಾವಿರ ರೂ. ಮೌಲ್ಯದ 6 ಗ್ರಾಂ. ಬಂಗಾರದ ಸರ, […]

Continue Reading

ಪರಿಸರ ಸಂರಕ್ಷಣೆ ನಮ್ಮ ಕರ್ತವ್ಯ

ಸುದ್ದಿ ಸಂಗ್ರಹ ಶಹಾಬಾದ್ ನಗರದ ಮೌಂಟ್ ಕಾರ್ಮೆಲ್ ಕಾನ್ವೆಂಟ್ ಶಾಲೆಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಪರಿಸರ ಸಂರಕ್ಷಣಾ ಸಪ್ತಾಹ ಕಾರ್ಯಕ್ರಮ ಜರುಗಿತು. ಶಾಲೆಯ ಮುಖ್ಯಗುರು ಸಿಸ್ಟರ್ ಲೋವಿಟಾ ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪರಿಸರ ನಾಶ ಮಾಡಿದರೆ ಮುಂದಿನ ದಿನಗಳಲ್ಲಿ ಭೂಮಿಗೆ ಬಹಳಷ್ಟು ಹಾನಿಯಾಗಲಿದೆ. ಪರಿಸರವನ್ನು ರಕ್ಷಿಸುವದು ಕೇವಲ ಒಂದು ದಿನದಆಚರಣೆಗೆ ಅಥವಾ ಕಾರ್ಯಕ್ರಮಕ್ಕೆ ಸೀಮಿತವಾಗಬಾರದು, ಪರಿಸರ ಸಂರಕ್ಷಣೆ ನಮ್ಮ ಕರ್ತವ್ಯ ಎಂದರು.‌ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯದರ್ಶಿ […]

Continue Reading

ಪರಿಸರ ಸಂರಕ್ಷಣೆ ನಮ್ಮ ಕರ್ತವ್ಯ……ಸುದ್ದಿ ಸಂಗ್ರಹ ಶಹಾಬಾದ್ ನಗರದ ಮೌಂಟ್ ಕಾರ್ಮೆಲ್ ಕಾನ್ವೆಂಟ್ ಶಾಲೆಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಪರಿಸರ ಸಂರಕ್ಷಣಾ ಸಪ್ತಾಹ ಕಾರ್ಯಕ್ರಮ ಜರುಗಿತು…..ಶಾಲೆಯ ಮುಖ್ಯಗುರು ಸಿಸ್ಟರ್ ಲೋವಿಟಾ ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪರಿಸರ ನಾಶ ಮಾಡಿದರೆ ಮುಂದಿನ ದಿನಗಳಲ್ಲಿ ಭೂಮಿಗೆ ಬಹಳಷ್ಟು ಹಾನಿಯಾಗಲಿದೆ. ಪರಿಸರವನ್ನು ರಕ್ಷಿಸುವದು ಕೇವಲ ಒಂದು ದಿನದಆಚರಣೆಗೆ ಅಥವಾ ಕಾರ್ಯಕ್ರಮಕ್ಕೆ ಸೀಮಿತವಾಗಬಾರದು, ಪರಿಸರ ಸಂರಕ್ಷಣೆ ನಮ್ಮ ಕರ್ತವ್ಯ ಎಂದರು.‌……ಪತ್ರಕರ್ತರ ಸಂಘದ ಜಿಲ್ಲಾ […]

Continue Reading

ಗಾಂಜಾ ಹಾಗೂ ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟ ತಡೆಗೆ ಪೊಲೀಸ್ ಇಲಾಖೆಯಿಂದ ದಿಟ್ಟ ಕ್ರಮ‌

ಸುದ್ದಿ ಸಂಗ್ರಹ ಕಾಳಗಿ ಡಿವೈಎಸ್ಪಿ ಶಂಕರಗೌಡ ಪಾಟೀಲ ಅವರ ನೇತೃತ್ವದಲ್ಲಿ ಗಾಂಜಾ ಹಾಗೂ ಇತರೆ ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ಉದ್ದೇಶದಿಂದ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಯಿತು. ಕಾರ್ಯಾಚರಣೆಯಲ್ಲಿ ಗಾಂಜಾ/ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟದಲ್ಲಿ ಈ ಹಿಂದೆ ಭಾಗಿಯಾಗಿದ್ದ ಆರೋಪಿತರ ಚಲನ-ವಲನಗಳ ಮೇಲೆ ನಿಗಾ ವಹಿಸುವ ದೃಷ್ಟಿಯಿಂದ, ತೆಲಂಗಾಣ ರಾಜ್ಯದಲ್ಲಿ ದಾಖಲಾಗಿರುವ ಗಾಂಜಾ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮಾಡಬೂಳ ಠಾಣಾ ವ್ಯಾಪ್ತಿಯ ಆರೋಪಿತರ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಪಿಎಸ್ಐಗಳಾದ […]

Continue Reading

ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ: ಡಿವೈಎಸ್ಪಿ ಶಂಕರಗೌಡ ಪಾಟೀಲ

ಸುದ್ದಿ ಸಂಗ್ರಹ ಕಾಳಗಿ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲ ವಾಹನ ಚಾಲಕರು ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ ಸೂಚಿಸಿದರು. ತಾಲೂಕಿನ ಮಾಡಬೂಳ ಪೊಲೀಸ್ ಠಾಣೆಯ ಆವರಣದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ರಸ್ತೆ ಸುರಕ್ಷತಾ ನಿಯಮಗಳ ಪಾಲನೆ ಕುರಿತು ಜಾಗೃತಿ ಸಭೆಯಲ್ಲಿ ಮಾತನಾಡಿದ ಅವರು, ಜನದಟ್ಟಣೆ ಇರುವ ಪ್ರದೇಶಗಳಲ್ಲಿ, ಶಾಲಾ- ಕಾಲೇಜುಗಳು ಮತ್ತು ಗ್ರಾಮಗಳ ವ್ಯಾಪ್ತಿಯಲ್ಲಿ ವಾಹನಗಳು ನಿಧಾನಗತಿಯಲ್ಲಿ ಚಲಾಯಿಸುವಂತೆ ತಿಳಿಸಿದರು. ಪ್ರತಿಯೊಬ್ಬ ವಾಹನ ಚಾಲಕರು ಕಡ್ಡಾಯವಾಗಿ […]

Continue Reading

ಕಲಬುರಗಿ: ಬರಪೀಡಿತ ಜಿಲ್ಲೆ ಎಂದು ಘೋಷಿಸಿ 50 ಸಾವಿರ ಪರಿಹಾರಕ್ಕೆ ಆಗ್ರಹ

ಸುದ್ದಿ ಸಂಗ್ರಹ ಚಿತ್ತಾಪುರಕಲಬುರಗಿ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಣೆ ಮಾಡಿ, ಪ್ರತಿ ಎಕರೆಗೆ 50 ಸಾವಿರ ಪರಿಹಾರ ಹಣ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ಮಂಡಲ ಪದಾಧಿಕಾರಿಗಳು ತಹಸೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು. ಬಿಜೆಪಿ ಮಂಡಲ ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ವಿಶೇಷ ಅನುದಾನ ಮಂಜೂರುಗೊಳಿಸಿ ರೈತರಿಗೆ ಭರವಸೆಯಾಗಬೇಕು. ಈಗಾಗಲೆ ರೈತರು ಬಿತ್ತಿದ ಹೆಸರು, ಉದ್ದು, ತೊಗರಿ ಎಲ್ಲ ಬೆಳೆಗಳು ಮಳೆ ಇಲ್ಲದೆ ಒಣಗಿ ಹೋಗುತ್ತಿವೆ ಎಂದು ಪತ್ರದಲ್ಲಿ ಸರ್ಕಾರದ […]

Continue Reading

ಫಿಟ್‌ನೆಸ್, ಇನ್ಶೂರೆನ್ಸ್ ಇಲ್ಲದ 390 ಖಾಸಗಿ ಶಾಲಾ ವಾಹನಗಳು ಸೀಜ್

ಸುದ್ದಿ ಸಂಗ್ರಹ ವಿಜಯನಗರಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ವಿಜಯನಗರ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಖಾಸಗಿ ಶಾಲಾ-ಕಾಲೇಜು ವಾಹನಗಳ ವಿರುದ್ಧ ಸಮರ ಸಾರಿದ್ದಾರೆ. ಜಿಲ್ಲೆಯಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಸೂಕ್ತ ದಾಖಲಾತಿಗಳಿಲ್ಲದೆ ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ ಬರೋಬ್ಬರಿ 390 ಖಾಸಗಿ ಶಾಲಾ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಫಿಟ್‌ನೆಸ್ ಪ್ರಮಾಣಪತ್ರ (FC) ಮತ್ತು ಇನ್ಶೂರೆನ್ಸ್ (ವಿಮೆ) ಇಲ್ಲದೆ ರಸ್ತೆಗಿಳಿದಿದ್ದ ವಾಹನಗಳ ವಿರುದ್ಧ ಆರ್‌ಟಿಒ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಜರುಗಿಸಿದ್ದಾರೆ. ಕಳೆದ ಫೆಬ್ರವರಿಯಿಂದ ಇಲ್ಲಿಯವರೆಗೆ ಒಟ್ಟು 103 ಪ್ರಕರಣಗಳನ್ನು ದಾಖಲಿಸಿಕೊಂಡಿರುವ […]

Continue Reading

ಅಕ್ರಮ ಮರಳು ಗಣಿಗಾರಿಕೆಗೆ ಬ್ರೇಕ್: ಕಠಿಣ ಕ್ರಮಕ್ಕೆ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ

ಸುದ್ದಿ ಸಂಗ್ರಹ ಬೆಂಗಳೂರುಕರ್ನಾಟಕದಲ್ಲಿ ಅಕ್ರಮ ಮರಳು ಗಣಿಗಾರಿಕೆ ಹಾಗೂ ಅಕ್ರಮ ಮರಳು ಸಾಗಣೆಗೆ ಸಂಪೂರ್ಣ ಬ್ರೇಕ್ ಹಾಕಲು ಗೃಹ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಈ ಕುರಿತು ರಾಜ್ಯಾದ್ಯಂತ ‘ಝೀರೋ ಟಾಲರೆನ್ಸ್’ ನೀತಿ ಅಡಿಯಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಡಿಜಿ ಮತ್ತು ಐಜಿಪಿ ಎಂ.ಎ ಸಲೀಂ ಅವರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಖಡಕ್​​ ಸೂಚನೆ ನೀಡಿದ್ದಾರೆ. ರಾಜ್ಯಾದ್ಯಂತ ಕಟ್ಟುನಿಟ್ಟಿನ ಕ್ರಮ ಜಾರಿಈ ಕುರಿತಾಗಿ ಗೃಹ ಇಲಾಖೆಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ಅಕ್ರಮ ಮರಳು ಗಣಿಗಾರಿಕೆ […]

Continue Reading