ಶಹಾಬಾದ್: ಮಂಗಲಸಿಂಗ್ ಬೆಂಕಿತಾತಾ ಪದಗ್ರಹಣ

ಸುದ್ದಿ ಸಂಗ್ರಹ ಶಹಾಬಾದ್ತಾಲೂಕಿನ ಗೋಳಾ (ಕೆ) ಗ್ರಾಮದ ನಿಜಾಮ ಬಜಾರ ಬಡಾವಣೆಯ ಸದಾಶಿವ ಬೆಂಕಿತಾತ ಮಠಕ್ಕೆ ಕಿರಿಯ ಪೀಠಾಧಿಪತಿ ಸದ್ಗುರು ಮಂಗಲಸಿಂಗ್ ಬೆಂಕಿತಾತ ಅಧಿಕಾರ ವಹಿಸಿಕೊಂಡರು. ಜೇವರ್ಗಿ ತಾಲೂಕಿನ ಯನಗುಂಟಿಯ ಸದಾಶಿವ ಬೆಂಕಿತಾತ ಮಠದಿಂದ ಗುರುವಾರ ಸಂಜೆ ಪುರಪ್ರವೇಶ ಮಾಡಿದರು. ಸ್ಥಳೀಯ ನೂರಾರು ಭಕ್ತರು ಪುಷ್ಪವೃಷ್ಠಿಯೊಂದಿಗೆ ಭವ್ಯ ಸ್ವಾಗತ ಕೋರಿದರು. ಶ್ರೀಮಠದ ಕಿರಿಯ ಸ್ವಾಮಿಯಾಗಿ ಅಧಿಕಾರಿ ವಹಿಸಿಕೊಂಡ ನಂತರ ಪ್ರತಿ ಗುರುವಾರ, ಶುಕ್ರವಾರ, ರವಿವಾರ ಮತ್ತು ಅಮವಾಸ್ಯೆ ದಿನ ಶಹಾಬಾದ್ ಮಠದಲ್ಲಿ ಭಕ್ತರಿಗೆ ಲಭ್ಯವಿದ್ದು ಮತ್ತು ಮೂಲ […]

Continue Reading

ಗೃಹಲಕ್ಷ್ಮಿ ಯೋಜನೆಗೆ ಡಿಕೆಶಿ ಬಿಗ್ ಅಪ್ಡೇಟ್: 2,000 ರೂ.ಬೇಕು ಅಂದ್ರೆ ಈ ನಿಯಮಗಳು ಪಾಲಿಸಬೇಕು

ಸುದ್ದಿ ಸಂಗ್ರಹ ಬೆಂಗಳೂರುಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಇಂದು (ಜುಲೈ 19) ರಂದು ನಡೆದ ಸಚಿವ ಸಂಪುಟದಲ್ಲಿ ಈ ಬಗ್ಗೆ ಮಹತ್ವದ ಚರ್ಚೆ ಆಗಿದೆ. ಗೃಹಲಕ್ಷ್ಮಿ ಫಲಾನುಭವಿಗಳ ಮರುಪರಿಶೀಲನೆ ನಡೆಸಲು ಸರ್ಕಾರ ಸಜ್ಜಾಗಿದ್ದು, ಗೃಹಲಕ್ಷ್ಮಿ ಹಣಕ್ಕೆ ಬಯೋಮೆಟ್ರಿಕ್ ಕಡ್ಡಾಯಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಪ್ರತಿಯೊಂದು ಕುಟುಂಬದ ಯಜಮಾನಿಗೆ 2000 ರೂ. ಆರ್ಥಿಕ ನೆರವು ನೀಡುವ ಯೋಜನೆಯೇ ಗೃಹಲಕ್ಷ್ಮಿ. ಆದ್ರೆ ಅನರ್ಹರು ಕೂಡ ಯೋಜನೆಯ ಲಾಭ ಪಡೆಯುತ್ತಿರುವ ಬಗ್ಗೆ ದೂರುಗಳು ಬಂದ […]

Continue Reading

12 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಮೂವರು ಅಪರಾಧಿಗಳಿಗೆ ಜೈಲು ಶಿಕ್ಷೆ

ಸುದ್ದಿ ಸಂಗ್ರಹ ಕಲಬುರಗಿ12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಹಾಗೂ ಅಪಹರಣ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೂವರು ಸ್ನೇಹಿತರಿಗೆ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯ ಶುಕ್ರವಾರ ಜೈಲು ಶಿಕ್ಷೆ ವಿಧಿಸಿದೆ. ಕಲಬುರಗಿ ನಗರದ ನಾಗೇಶ ಅಲಿಯಾಸ್ ಬಾಬು ರಾಠೋಡಗೆ (30) 25 ವರ್ಷ ಜೈಲು ಮತ್ತು 45 ಸಾವಿರ ದಂಡ ವಿಧಿಸಿದೆ. ಶಿವರಾಜ ಅಲಿಯಾಸ್ ಸುರಜ್ಯಾ ಹೊನಗುಂಟಿ (20) ಮತ್ತು ಕಾಳಗಿ ತಾಲೂಕಿನ ಕಲಗುರ್ತಿಯ ಮಲ್ಲಿಕಾರ್ಜುನ ಅಲಿಯಾಸ್‌ ಮಲ್ಲು ಶ್ರೀನವರ (19) ಎಂಬುವವರಿಗೆ ಮೂರು ವರ್ಷ ಜೈಲು ಮತ್ತು […]

Continue Reading

15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಅನುಮೋದನೆ

ಸುದ್ದಿ ಸಂಗ್ರಹ ಬೆಂಗಳೂರುಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದೆ. ರಾಜ್ಯದಲ್ಲಿ 15,000 ಶಿಕ್ಷಕರ ನೇಮಕಾತಿಗೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿರುವುದಾಗಿ ಸಿಎಂ ಡಿಕೆ ಶಿವಕುಮಾರ ತಿಳಿಸಿದರು. ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹತ್ವದ ನಿರ್ಧಾರಗಳನ್ನೂ ಪ್ರಕಟಿಸಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ 15,000 ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಿರುವುದಾಗಿ ಮಾಹಿತಿ ನೀಡಿದರು. ಜೊತೆಗೆ ಹಾಸ್ಟೆಲ್ ಗಳ ಬೆಡ್‌ಕಾಟ್ ಖರೀದಿಗೆ 30 ಕೋಟಿ ಕೊಡುವ ಬಗ್ಗೆ ತೀರ್ಮಾನ ಮಾಡಲಾಗಿದೆ. ಅಲೆಮಾರಿ ಜನಾಂಗಕ್ಕೆ ಮನೆ ಕಟ್ಟಲು […]

Continue Reading

ದೇವೆಗೌಡರ ಪ್ರತಿ ಯಶಸ್ಸಿನ‌ ಹಿಂದೆ ನಿಂತಿದ್ದವರು ಚೆನ್ನಮ್ಮ: ಸಿಎಂ ಡಿಕೆಶಿ ತೀವ್ರ ಸಂತಾಪ‌

ಸುದ್ದಿ ಸಂಗ್ರಹ ಬೆಂಗಳೂರುಮಾತೃ ಸ್ವರೂಪಿ ಚೆನ್ನಮ್ಮ ದೇವೆಗೌಡ ಅವರ ನಿಧನಕ್ಕೆ ಸಿಎಂ ಡಿ.ಕೆ ಶಿವಕುಮಾರ್ ತೀವ್ರ ಸಂತಾಪ ಸೂಚಿಸಿದರು. ಅಪಾರ ಧೈವಭಕ್ತೆಯಾಗಿದ್ದ ಚನ್ನಮ್ಮನವರು ಕುಟುಂಬವನ್ನು ಸಾಕಿ ಸಲಹಿದ ಮಹಾನ್ ತಾಯಿ. ದೇವೆಗೌಡರು, ಕುಮಾರಸ್ವಾಮಿ, ರೇವಣ್ಣ ಸೇರಿದಂತೆ ಅವರ ಕುಟುಂಬ ಸದಸ್ಯರ ರಾಜಕೀಯ ಮತ್ತು ಬದುಕಿನ ಏಳ್ಗೆಯ ಹಿಂದೆ ಚನ್ನಮ್ಮನವರ ಪರಿಶ್ರಮ ಅಡಗಿದೆ. ಅವರು ಆಸ್ಪತ್ರೆಯಿಂದ ಗುಣಮುಖರಾಗಿ ವಾಪಸ್ ಬರುತ್ತಾರೆ ಎಂದು ಎಲ್ಲರೂ ನಂಬಿಕೆ ಇಟ್ಟಿದ್ದರು. ಆ ನಂಬಿಕೆ ಸುಳ್ಳಾಗಿರುವುದಕ್ಕೆ ಬಹಳ ಬೇಸರವಾಗಿದೆ ಎಂದು ದುಃಖತಪ್ತರಾದರು. ಯಶಸ್ವಿ ಪುರುಷನ […]

Continue Reading

ಕಲಬುರಗಿ: ಸೀರೆ, ಪ್ಯಾಂಟ್‌, ಶೂ ಬೇಡಿದ ಎಪಿಪಿ

ಸುದ್ದಿ ಸಂಗ್ರಹ ಕಲಬುರಗಿಹಲ್ಲೆ ಪ್ರಕರಣವೊಂದರ ಸಂಬಂಧ ಕೋರ್ಟ್‌ನಲ್ಲಿ ರಾಜಿ ಅರ್ಜಿ ದಾಖಲಿಸಲು ಲಂಚ ಪಡೆದ ಸಹಾಯಕ ಸರ್ಕಾರಿ ಅಭಿಯೋಜಕರೊಬ್ಬರು (ಎಪಿಪಿ) ಶುಕ್ರವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹಲ್ಲೆ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ರಾಜಿ ಅರ್ಜಿ ಸಲ್ಲಿಕೆಗೆ ಹೈದರಾಬಾದ್ ಮೂಲದ ಬಟ್ಟೆ ವ್ಯಾಪಾರಿ ರಾಹುಲ್‌ ಮಾರಾಜೋ ಮುಂದಾಗಿದ್ದರು. ಅದಕ್ಕೆ 10 ಸಾವಿರ ನಗದು, 9 ಸೀರೆಗಳು, 4 ಶರ್ಟ್‌ಗಳು, 4 ಲಂಡನ್ ಜೀನ್ಸ್ ಪ್ಯಾಂಟ್, ಒಂದು ಜೊತೆ ಶೂ, ಮಹಿಳೆಯರ ನಾಲ್ಕು ಉಡುಗೆಗಳು, ಮಹಿಳೆಯರ 6 ಜೋಡಿ ಚಪ್ಪಲಿಗಳಿಗೆ […]

Continue Reading

ಕಲಬುರಗಿ: ನೀಟ್ ಪರೀಕ್ಷೆಯಲ್ಲಿ 190ನೇ ರ‍್ಯಾಂಕ್ ಪಡೆದ ಚನ್ನಬಸವ ಕೊರಳ್ಳಿ

ಸುದ್ದಿ ಸಂಗ್ರಹ ಕಲಬುರಗಿ ವೈದ್ಯಕೀಯ ಶಿಕ್ಷಣದ ಕೋರ್ಸ್‌ ಪ್ರವೇಶಾತಿಗೆ ನಡೆಸುವ ನೀಟ್‌ ಪರೀಕ್ಷೆಯಲ್ಲಿ ನಗರದ ಎಸ್‌ಬಿಆರ್‌ ಪದವಿ ಪೂರ್ವ ಕಾಲೇಜಿನ ಚನ್ನಬಸವ ಕೊರಳ್ಳಿ 190ನೇ ರ‍್ಯಾಂಕ್ ಪಡೆಯುವ ಮೂಲಕ ಅಮೋಘ ಸಾಧನೆ ತೋರಿದಕ್ಕೆ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಆಳಂದ ತಾಲೂಕಿನಲ್ಲಿ ಸರಕಾರಿ ಪ್ರೌಢ ಶಾಲಾ ಶಿಕ್ಷಕ ಧರ್ಮರಾಯ ಕೊರಳ್ಳಿ ಅವರ ಸುಪುತ್ರ ಚನ್ನಬಸವ ಕೊರಳ್ಳಿ 720ಕ್ಕೆ 685 ಅಂಕ ಗಳಿಸಿ ಕಾಲೇಜು […]

Continue Reading

ಶಹಾಬಾದ್: ಅವಧಿ ಮುಗಿದ ಎಣ್ಣೆ ಬಳಸಿ ಶಾಲಾ ಮಕ್ಕಳಿಗೆ ಬಿಸಿಯೂಟ ಸರಬರಾಜು

ಸುದ್ದಿ ಸಂಗ್ರಹ ಶಹಾಬಾದ್ಬಿಸಿಯೂಟದಲ್ಲಿ ಅವಧಿ ಮುಗಿದ ಅಡುಗೆ ಎಣ್ಣೆ ಬಳಸಿದ ಪರಿಣಾಮ ಶಹಾಬಾದ್ ಸರಕಾರಿ ಬಾಲಕರ ಪ್ರೌಢ ಶಾಲೆ ಮತ್ತು ಉರ್ದು ಶಾಲಾ ಮಕ್ಕಳಿಗೆ ಊಟ ಸರಬರಾಜು ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಆಹಾರ ಸೇವಿಸಿದ ವಿದ್ಯಾರ್ಥಿಗಳು ದುರಂತದಿಂದ ಪಾರಾಗಿದ್ದಾರೆ, ಆದರೆ ಈ ಬಗ್ಗೆ ಶಾಲಾ ಆಡಳಿತವು ನಿರ್ಲಕ್ಷ್ಯ ತೋರಿರುವುದು ಗಂಭೀರ ವಿಷಯವಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಶಹಬಾದ್ ಸರ್ಕಾರಿ ಬಾಲಕರ ಪ್ರೌಢ ಶಾಲೆ ಮತ್ತು ಉರ್ದು ಶಾಲೆಗೆ ಪತ್ರಕರ್ತರು ಭೇಟಿ ನೀಡಿದಾಗ ಈ ಸತ್ಯ ತಿಳಿದು […]

Continue Reading

ಬಾಲಕಿ ಮೇಲೆ ಅತ್ಯಾಚಾರ: ಮೂವರು ಅಪರಾಧಿಗಳಿಗೆ ಜೈಲು ಶಿಕ್ಷೆ

ಸುದ್ದಿ ಸಂಗ್ರಹ ಕಲಬುರಗಿ12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಮೂರು ಪ್ರತ್ಯೇಕ ಪೋಕ್ಸೊ ಪ್ರಕರಣಗಳಲ್ಲಿ ಮೂವರು ಯುವಕರಿಗೆ ಇಲ್ಲಿನ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಿದೆ. ಒಂದು ಪ್ರಕರಣದಲ್ಲಿ ಕಲಬುರಗಿಯ ಮಹಾದೇವ ನಗರದ ನಿವಾಸಿ ನಾಗೇಶ ಅಲಿಯಾಸ್ ಬಾಬು ರಾಠೋಡ (30) ನ್ಯಾಯಾಲಯವು 25 ವರ್ಷ ಜೈಲು ಮತ್ತು 45 ಸಾವಿರ ದಂಡ ವಿಧಿಸಿದೆ. ಇನ್ನೆರಡು ಪ್ರಕರಣಗಳಲ್ಲಿ ಕಲಬುರಗಿಯ ಶಿವರಾಜ ಅಲಿಯಾಸ್ ಸುರಜ್ಯಾ ಹೊನಗುಂಟಿ […]

Continue Reading

ಮೋಹನ್ ಭಾಗವತ್‌ಗೆ ಸಾವರ್ಕರ್ ಕೃತಿ ನೀಡಿ ಗೌರವಿಸಿದ ಬಿಜೆಪಿಗರು

ಸುದ್ದಿ ಸಂಗ್ರಹ ವಾಡಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್)ದ ಸರಸಂಘಚಾಲಕ ಮೋಹನ್ ಭಾಗವತ್ ಅವರಿಗೆ ಸ್ಥಳೀಯ ಬಿಜೆಪಿ ಮುಖಂಡರು ಅಪ್ರತಿಮ ದೇಶಭಕ್ತ, ಸ್ವಾತಂತ್ರ್ಯ ಸೇನಾನಿ ವೀರ ಸಾವರ್ಕರ್ಕೃತಿ ನೀಡಿ ಗೌರವಿಸಿದರು. ರಾಜ್ಯದ ವಿವಿಧೆಡೆ ಆಯೋಜನೆಗೊಂಡಿದ್ದ ಕಾರ್ಯಕ್ರಮಗಳನ್ನು ಮುಗಿಸಿಕೊಂಡು ಗುರುವಾರ ಸಂಜೆ ಉದ್ಯಾನ್‌ ಎಕ್ಸ್‌ಪ್ರೆಸ್ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುತ್ತಿದ್ದ ವೇಳೆ ವಾಡಿ ರೈಲು ನಿಲ್ದಾಣದಲ್ಲಿ ಇಳಿದು ಬಿಜೆಪಿ ಸೇರಿದಂತೆ ಹಿಂದೂಪರ ಸಂಘಟನೆಗಳ ನೂರಾರು ಕಾರ್ಯಕರ್ತರನ್ನು ಭೇಟಿ ಮಾಡಿ ಕುಶಲೋಪರಿ ವಿಚಾರಿಸುತ್ತಿದ್ದರು. ಈ ವೇಳೆ ವಾಡಿ […]

Continue Reading