ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ: ಶಿವಕುಮಾರ ಇಂಗಿನಶೆಟ್ಟಿ

ಸುದ್ದಿ ಸಂಗ್ರಹ ಶಹಾಬಾದ್ ಶಿಕ್ಷಕರು ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಅವರನ್ನು ಪ್ರೋತ್ಸಾಹಿಸುವತ್ತ ಗಮನ ಹರಿಸಬೇಕು ಎಂದು ಉದ್ಯಮಿ ಶಿವಕುಮಾರ ಇಂಗಿನಶೆಟ್ಟಿ ಹೇಳಿದರು. ನಗರದ ಚವ್ಹಾಣ್ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಾಗಮ್ಮ ಚನ್ನಪ್ಪ ಇಂಗಿನಶೆಟ್ಟಿ ಶಾಲೆಯಲ್ಲಿ ದಿ.ಆದರ್ಶ ಕುಂಬಾರ ಅವರ ಹುಟ್ಟುಹಬ್ಬದ ನಿಮಿತ್ತ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಲೇಖನಿ, ಸಲಕರಣೆ ಪರೀಕ್ಷೆ ಪ್ಯಾಡ್‌ಗಳು ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪಾಲಕರು ಮಕ್ಕಳಿಗೆ ಒಳ್ಳೆಯ ನಡೆತೆ ಬಗ್ಗೆ ಮಾರ್ಗದರ್ಶನ ಮಾಡಬೇಕು. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು […]

Continue Reading

ಚಿತ್ತಾಪುರ: ಡಿ.28 ರಿಂದ ಗುಡ್ಡಾಪುರ ದಾನಮ್ಮ ದೇವಿಯ ಪುರಾಣ ಪ್ರಾರಂಭ, ಜ.3 ರಂದು ಬನಶಂಕರಿ ದೇವಿಯ ಜಾತ್ರಾ ಮಹೋತ್ಸವ

ಸುದ್ದಿ ಸಂಗ್ರಹ ಚಿತ್ತಾಪುರಪಟ್ಟಣದ ಚೌಡೇಶ್ವರಿ ದೇವಾಲಯದ ಆವರಣದಲ್ಲಿ ಚೌಡೇಶ್ವರಿ ದೇವಸ್ಥಾನದ ಟ್ರಸ್ಟ್ ವತಿಯಿಂದ ಪರಮ ಪೂಜ್ಯರ ಸಾನಿಧ್ಯದಲ್ಲಿ ಡಿಸೆಂಬರ್ 28ರಿಂದ ಜನವರಿ 3ರವರೆಗೆ ಗುಡ್ಡಾಪುರ ದಾನಮ್ಮ ದೇವಿಯ ಪುರಾಣ ಕಾರ್ಯಕ್ರಮ ಹಾಗೂ ರಾಮಲಿಂಗ ಚೌಡೇಶ್ವರಿ ಮತ್ತು ಬನಶಂಕರಿ ದೇವಿಯ ಜಾತ್ರಾ ಮಹೋತ್ಸವ ಜರುಗುವುದು ಎಂದು ಟ್ರಸ್ಟ್ ಅಧ್ಯಕ್ಷ ಬಸವರಾಜ ರಾಜೋಳ್ಳಿ ಮತ್ತು ಉಪಾಧ್ಯಕ್ಷ ರಾಜಶೇಖರ ಬಳ್ಳಾ ತಿಳಿಸಿದ್ದಾರೆ. ಡಿ.30 ರಂದು ಸಂಜೆ 7.30ಕ್ಕೆ ಉಡಿ ತುಂಬುವ ಕಾರ್ಯಕ್ರಮ, ಜನವರಿ 1 ರಂದು ಸಂಜೆ 7.30ಕ್ಕೆ ಸಹಸ್ರ ದೀಪೋತ್ಸವ, […]

Continue Reading

ಕೆಪಿಎಸ್ ಹೆಸರಿನಲ್ಲಿ ಕನ್ನಡ ಶಾಲೆ ಮುಚ್ಚುವ ಹುನ್ನಾರ: ವಿ.ಎನ್ ರಾಜಶೇಖರ

ಸುದ್ದಿ ಸಂಗ್ರಹ ಶಹಾಬಾದಕೆಪಿಎಸ್ ಮ್ಯಾಗ್ನೆಟ್ ಶಾಲಾ ಯೋಜನೆಯಡಿ ಕಡಿಮೆ ಮಕ್ಕಳ ಸಂಖ್ಯೆಯಿರುವ ಶಾಲೆಗಳನ್ನು ವಿಲೀನ ಮಾಡಿ ಸರಿಸುಮಾರು 40 ಸಾವಿರಕ್ಕೂ ಅಧಿಕ ಶಾಲೆಗಳನ್ನು ಮುಚ್ಚುವ ಹುನ್ನಾರ ಅಡಗಿದೆ. ಇಂತಹ ಜನವಿರೋಧಿ, ಶಿಕ್ಷಣ ವಿರೋಧಿ ನೀತಿ ಈ ಕೂಡಲೆ ಕೈಬಿಡಬೇಕು ಎಂದು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ರಾಜ್ಯ ಸಮಿತಿಯ ಉಪಾಧ್ಯಾಕ್ಷ ವಿ.ಎನ್ ರಾಜಶೇಖರ ಹೇಳಿದರು. ನಗರದ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ನೇತೃತ್ವದಲ್ಲಿ ಜನಪರ ಶಿಕ್ಷಣ ನೀತಿಗಾಗಿ ಜರುಗಿದ ಶೈಕ್ಷಣಿಕ ಸಮಾವೇಶದಲ್ಲಿ ಮುಖ್ಯ ಭಾಷಣಕಾರರಾಗಿ […]

Continue Reading

6 ತಿಂಗಳಿಂದ ಸಂಬಳ ಕೊಡದ ಸರ್ಕಾರ: ಜೀವನ ನಡೆಸೋದು ಕಷ್ಟ ಅಂತ ರಾಜೀನಾಮೆ ಕೊಟ್ಟ ವೈದ್ಯ

ಸುದ್ದಿ ಸಂಗ್ರಹ ಮಂಗಳೂರು ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಸುಳ್ಯದ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸರಿಯಾಗಿ ಸಂಬಳವಾಗದ ಕಾರಣ ರಾಜಿನಾಮೆ ನೀಡಿದ್ದಾರೆ. 6 ತಿಂಗಳಿಂದ ಸಂಬಳ ಬರದಿದ್ದಕ್ಕೆ ಬೇಸತ್ತು ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ವೈದ್ಯರಾದ ಡಾ.ಕುಲದೀಪ್ ಎಂ.ಡಿ ರಾ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಎರಡುವರೆ ವರ್ಷದಿಂದ ವೈದ್ಯಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು. ಸಂಬಳ ಬಾರದೆ ವೈಯಕ್ತಿಕ ಜೀವನಕ್ಕೆ ಸಮಸ್ಯೆ ಆಗುತ್ತಿದೆ. ಆರ್ಥಿಕ ಸಮಸ್ಯೆ ಉಂಟಾಗುತ್ತಿದೆ ಈ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. […]

Continue Reading

ಒಲಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ಬಹುಮಾನ: ಸಿಎಂ

ಸುದ್ದಿ ಸಂಗ್ರಹ ಬೆಂಗಳೂರು ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ರೂ. ನಗದು ಬಹುಮಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿ.21 ರವಿವಾರ ಒಲಂಪಿಕ್ 2025 ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿಗೆ ಭಾಜನರಾಗಿರುವ ಕ್ರೀಡಾ ಸಾಧಕರಿಗೆ ಅಭಿನಂದನೆಗಳು. ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ರೂ.ಗಳ ನಗದು ಬಹುಮಾನ […]

Continue Reading

ಯಾರಿಗೆ ಹೇಳ್ತಿರಾ ಹೇಳಿ: ರಾಷ್ಟ್ರೀಯ ಹೆದ್ದಾರಿಯ ಟೋಲ್‌ನಲ್ಲಿ MLC ತಡೆದು ಅನುಚಿತ ವರ್ತನೆ

ಸುದ್ದಿ ಸಂಗ್ರಹ ವಿಜಯಪುರ ರಾಷ್ಟ್ರೀಯ ಹೆದ್ದಾರಿ 52ರ ಟೋಲ್‌ನಲ್ಲಿ ಎಂಎಲ್‌ಸಿ ಕೇಶವ ಪ್ರಸಾದ್ ಅವರನ್ನು ತಡೆದು ಅನುಚಿತ ವರ್ತನೆ ತೋರಿರುವ ಘಟನೆ ನಡೆದಿದೆ. ವಿಜಯಪುರ ನಗರದ ಹೊರವಲಯದಲ್ಲಿರುವ ಬೆಂಗಳೂರು-ಸೋಲಾಪುರ ಹೈವೆಯಲ್ಲಿರುವ ಟೋಲ್‌ನಲ್ಲಿ ಕೇಶವ ಪ್ರಸಾದ್ ಅವರ ಪಾಸ್ ಹಾಗೂ ಪಿಎ ಮೊಬೈಲ್ ಕಸಿದುಕೊಂಡ ಮಹಿಳಾ ಸಿಬ್ಬಂದಿ ಅನುಚಿತ ವರ್ತನೆ ತೋರಿದ್ದಾರೆ. ಬರೋಬ್ಬರಿ ಒಂದು ಗಂಟೆಕಾಲ ಎಂಎಲ್‌ಸಿಯನ್ನು ತಡೆದು ಗೊಂದಲ ಸೃಷ್ಟಿಸಿದ್ದಾರೆ. ಮೊಬೈಲ್, ಪಾಸ್ ಕಸಿದು ‘ಯಾರಿಗೆ ಹೇಳ್ತಿರಾ ಹೇಳಿ’ ಎಂದು ಏರುದ್ವನಿಯಲ್ಲಿ ಮಾತನಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ನೀವೆ […]

Continue Reading

ಮಧುಮೇಹಿಗಳು, ಸ್ಥೂಲಕಾಯರಿಗೆ ಗುಡ್ ನ್ಯೂಸ್: ಭಾರತಕ್ಕೆ ಬಂತು ಓಝೆಂಪಿಕ್ – ಏನಿದು ಔಷಧಿ ?

ಆಧುನಿಕ ಜೀವನಶೈಲಿಯು ಮನುಷ್ಯನ ಆರೋಗ್ಯದ ಮೇಲೆ ನಾನಾ ಪರಿಣಾಮ ಬೀರುತ್ತಿದೆ. ಉತ್ತಮ ಆರೋಗ್ಯಕ್ಕೆ ನಿಗದಿತ ದೈಹಿಕ ಚಟುವಟಿಕೆ ಮತ್ತು ವ್ಯಾಯಾಮ ಅತ್ಯಗತ್ಯ. ಆದರೆ, ಒತ್ತಡದ ಬದುಕು, ಆಲಸ್ಯ ಮನೋಭಾವದಿಂದ ಮನುಷ್ಯ ಆರೋಗ್ಯ ಸುಲಭ ಮಾರ್ಗ ಅನುಸರಿಸುತ್ತಿದ್ದಾನೆ. ವೈದ್ಯಕೀಯ ವಲಯದಲ್ಲಿ ಅದಕ್ಕೆ ಪೂರಕವಾದ ಚಿಕಿತ್ಸೆ, ಔಷಧಿಗಳು ಹೊರಬರುತ್ತಿವೆ. ಇವುಗಳ ಮೇಲಿನ ಅವಲಂಬನೆ ಕೂಡ ಹೆಚ್ಚಾಗುತ್ತಿದೆ. ಈಗಿನ ದಿನಮಾನಗಳಲ್ಲಿ ಜನರನ್ನು ಹೆಚ್ಚಾಗಿ ಬಾಧಿಸುತ್ತಿರುವುದು ಶುಗರ್ ಮತ್ತು ಬೊಜ್ಜುತನ. ದಿಲ್ಲಿಯಿಂದ ಹಳ್ಳಿವರೆಗೆ, ಶ್ರೀಮಂತನಿಂದ ಬಡವನವರೆಗೆ ಸಕ್ಕರೆ ಕಾಯಿಲೆ ತಲುಪಾಗಿದೆ. ಅಂತೆಯೆ, ದೊಡ್ಡವರಿಂದ […]

Continue Reading

ಚಿತ್ತಾಪುರ: ಪಲ್ಸ್‌ ಪೋಲಿಯೋ ಅಭಿಯಾನಕ್ಕೆ ಸಿಡಿಪಿಒ ಆರತಿ ತುಪ್ಪದ ಚಾಲನೆ

ಸುದ್ದಿ ಸಂಗ್ರಹ ಚಿತ್ತಾಪುರ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಅಭಿಯಾನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ಆರತಿ ತುಪ್ಪದ ಅವರು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರವಿವಾರ ಮಗುವಿಗೆ ಲಸಿಕೆ ಹಾಕಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ನಮ್ಮ ರಾಷ್ಟ್ರದಲ್ಲಿ ಪೋಲಿಯೋ ಸಂಪೂರ್ಣ ನಿರ್ಮೂಲನೆ ಆಗಿದೆ. ಮತ್ತೆ ಪೋಲಿಯೋ ವೈರಸ್‌ನಿಂದ ಅಂಗವೈಕಲ್ಯಕ್ಕೆ ಒಳಗಾಗದಂತೆ ಮುನ್ನೆಚ್ಚರಿಕೆಯಾಗಿ ಸಾರ್ವಜನಿಕರು ತಮ್ಮ ನವಜಾತ ಶಿಶುವಿನಿಂದ ಹಿಡಿದು 5 ವರ್ಷದೊಳಗಿನ ಮಕ್ಕಳಿಗೆ ಬೂತ್ ಮಟ್ಟದಲ್ಲಿ ಕರೆತಂದು […]

Continue Reading

ಕನ್ನಡ ಸಾಹಿತ್ಯಕ್ಕೆ ಡಾ.ಯು.ಆರ್ ಅನಂತಮೂರ್ತಿ ಕೊಡುಗೆ ಅನನ್ಯ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ ಕವಿತೆ, ಕಥೆ, ಕಾದಂಬರಿ, ಸಾಹಿತ್ಯ, ವಿಮರ್ಶೆ, ನಾಟಕ ಹೀಗೆ ಹಲವು ವೈವಿಧ್ಯಮಯ ಪ್ರಕಾರದಲ್ಲಿ ತಮ್ಮದೆಯಾದ ಪಾಂಡಿತ್ಯ ಹೊಂದಿದ್ದ ಡಾ.ಯು.ಆರ್ ಅನಂತಮೂರ್ತಿ, ಕನ್ನಡ ಸಾಹಿತ್ಯ ಬೆಳವಣಿಗೆಗೆ ಅನನ್ಯವಾದ ಕೊಡುಗೆ ನೀಡಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಜರುಗಿದ ‘ಡಾ.ಯು.ಆರ್ ಅನಂತಮೂರ್ತಿಯವರ 93ನೇ ಜನ್ಮದಿನಾಚರಣೆ’ಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಕನ್ನಡ ಭಾಷೆ, ಸಾಹಿತ್ಯಕ್ಕೆ […]

Continue Reading

ಪತ್ರಿಕಾ ಭವನ ನಿರ್ಮಾಣಕ್ಕೆ ಅನುದಾನ: ಶಾಸಕ ಬಸವರಾಜ ಮತ್ತಿಮೂಡ

ಸುದ್ದಿ ಸಂಗ್ರಹ ಶಹಾಬಾದತಾಲೂಕು ಕೇಂದ್ರದಲ್ಲಿ ಪತ್ರಕರ್ತರ ಕಾರ್ಯ ಚಟುವಟಿಕೆಗೆ ಪತ್ತಿಕಾ ಭವನ ನಿರ್ಮಾಣಕ್ಕೆ ಅನುದಾನ ನೀಡುವದಲ್ಲದೆ, ನಗರ ಸಭೆಯಿಂದ ನಿವೇಶನ ನೀಡಿದ್ದಲ್ಲಿ, ಸರಕಾರದ ಮಾರ್ಗ ಸೂಚಿಯಂತೆ ನಿವೇಶನ ಖರೀದಿಯ ಅರ್ಧ ವೆಚ್ಚ ಭರಿಸಿ, ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡುವದಾಗಿ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಭರವಸೆ ನೀಡಿದರು. ನಗರದ ಪಾರ್ವತಿ ಕಲ್ಯಾಣ ಮಂಟಪದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶನಿವಾರ ನಡೆದ ನೂತನವಾಗಿ ಆಯ್ಕೆಯಾದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಹಾಗೂ […]

Continue Reading