ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ: ವಾಕಿಂಗ್‌ಗೆ ಬಂದಿದ್ದವರಿಗೆ ದರ್ಶನ, ಪಾರ್ಕ್‌ನಿಂದ ಎದ್ನೋ ಬಿದ್ನೋ ಅಂತ ಓಡಿದ ಜನ

ಸುದ್ದಿ ಸಂಗ್ರಹ ಬೆಂಗಳೂರುಸಿಲಿಕಾನ್‌ ಸಿಟಿಯಲ್ಲಿ ಹೆಚ್ಚುತ್ತಿರುವ ನಗರೀಕರಣದಿಂದಾಗಿ ಕೆಲವೊಮ್ಮೆ ಕಾಡು ಪ್ರಾಣಿಗಳು ನಾಡಿಗೆ ಪ್ರವೇಶಿಸುತ್ತವೆ. ವಿಶೇಷವಾಗಿ ದಕ್ಷಿಣ ಬೆಂಗಳೂರು ಹಾಗೂ ಮಾಗಡಿ ರಸ್ತೆಯಂತಹ ಪ್ರದೇಶಗಳಲ್ಲಿ ಚಿರತೆಗಳು ಆಗಾಗ್ಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ನಿದರ್ಶನಗಳಿವೆ. ಇಂತಹ ಸಂದರ್ಭಗಳಲ್ಲಿ ಅರಣ್ಯ ಇಲಾಖೆಯು ಸ್ಥಳದಲ್ಲೇ ಬೋನುಗಳು ಇರಿಸಿ ಪ್ರಾಣಿಗಳನ್ನು ಸೆರೆಹಿಡಿಯುವ ಕಾರ್ಯಾಚರಣೆ ನಡೆಸುತ್ತದೆ. ಸದ್ಯ ಬೆಂಗಳೂರಿನ ಬಿಇಎಲ್ ಲೇಔಟ್‌ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳ ನಿದ್ದೆಗೆಡಿಸಿರುವುದು ತಾಜಾ ಉದಾಹರಣೆಯಾಗಿದೆ. ಬೆಂಗಳೂರಿನ ಬ್ಯಾಡ್ರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಇಎಲ್ ಲೇಔಟ್ ನಲ್ಲಿ ನಿನ್ನೆ […]

Continue Reading

ಕಲಬುರಗಿ ನಗರದಲ್ಲಿ ನಡುರಾತ್ರಿ ಲಘು ಭೂಕಂಪ: ಭಯಗೊಂಡ ಜನತೆ

ಸುದ್ದಿ ಸಂಗ್ರಹ ಕಲಬುರಗಿ ನಗರ ಸೇರಿದಂತೆ ಕೆಲವು ಸುತ್ತಮುತ್ತಲಿನ ಪ್ರದೇಶದಲ್ಲಿ ಗುರುವಾರ ನಸುಕಿನ 1.30ರ ವೇಳೆ ಕೆಲ ಸೆಕೆಂಡುಗಳ ಕಾಲ ಭೂಮಿ ಕಂಪಿಸಿದೆ. ಇದರಿಂದಾಗಿ ಜನ ಭಯಗೊಂಡು ಮನೆಗಳಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ. ಭೂಮಿ ಕಂಪಿಸುತ್ತಿದ್ದಂತೆ ಹಲವು ಮನೆಗಳಲ್ಲಿ ಕಿಟಕಿ, ಬಾಗಿಲುಗಳು ಸದ್ದು ಮಾಡಿವೆ ಮತ್ತು ಮೇಲ್ಮಟ್ಟದಲ್ಲಿ ಇಟ್ಟಿದ್ದ ವಸ್ತುಗಳು ನೆಲಕ್ಕುರುಳಿ ಬಿದ್ದಿದ್ದು, ಆಗ ಜನರಿಗೆ ಇದು ಭೂಕಂಪ ಎಂಬುದು ಗೊತ್ತಾಗಿದೆ. ಇದರಿಂದಾಗಿ ಭಯಗೊಂಡು ಮನೆಯಿಂದ ಹೊರಗಡೆ ಓಡಿಬಂದು ರಕ್ಷಣೆ ಪಡೆದಿದ್ದಾರೆ ಎಂದು ಮೂಲಗಳು […]

Continue Reading

ಜು.11ರಂದು ಬೆಂಗಳೂರಿನಲ್ಲಿ ನಮ್ಮ ಅಭಿಮಾನದ ಅಭಿನಂದನೆ: ಬಸವರಾಜ ಬಳೂಂಡಗಿ

ಸುದ್ದಿ ಸಂಗ್ರಹ ಕಲಬುರಗಿರಾಜ್ಯ ಸರ್ಕಾರಿ ನೌಕರರ ಸಂಘವು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌, ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರಿಗೆ ಜುಲೈ 11ರಂದು ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಹಳೆ ಪಿಂಚಣಿ ಯೋಜನೆ ಮರು ಜಾರಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಅಂದು ಮನವಿ ಸಲ್ಲಿಸಲಾಗುವುದು ಎಂದು ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ‘ನಮ್ಮಭಿಮಾನದ ಅಭಿನಂದನೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 11 ಗಂಟೆಗೆ […]

Continue Reading

ಗೃಹ ಜ್ಯೋತಿ ಸ್ಕೀಮ್​ನಲ್ಲಿ ಆರ್​ಆರ್ ನಂಬರ್​ಗೆ ನಿಮ್ಮ ಆಧಾರ್ ಡಿ-ಲಿಂಕ್ ಮಾಡುವುದು ಹೇಗೆ ?

ಸುದ್ದಿ ಸಂಗ್ರಹ ಬೆಂಗಳೂರುಕರ್ನಾಟಕ ಸರ್ಕಾರ ಗೃಹ ಜ್ಯೋತಿ ಸ್ಕೀಮ್ ಅಡಿಯಲ್ಲಿ ಪ್ರತಿ ಅರ್ಹ ಮನೆಗೆ ಒಂದು ತಿಂಗಳಿಗೆ 200 ಯುನಿಟ್​ಗಳವರೆಗೆ ವಿದ್ಯುತ್ ಉಚಿತವಾಗಿ ನೀಡುತ್ತಿದೆ. ಹಿಂದಿನ 12 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಉಚಿತ ವಿದ್ಯುತ್ ಸೌಲಭ್ಯ ನೀಡಲಾಗುತ್ತಿದೆ. ಆಧಾರ್ ನಂಬರ್ ಲಿಂಕ್ ಆದ ಪ್ರತಿ ಆರ್​ಆರ್ ನಂಬರ್​ಗೂ ಉಚಿತ ವಿದ್ಯುತ್ ಪೂರೈಕೆಯ ಅವಕಾಶ ಇರುತ್ತದೆ. ಒಂದು ವೇಳೆ ಬಾಡಿಗೆ ಮನೆ ಖಾಲಿ ಮಾಡಿ ಬೇರೆಡೆ ವರ್ಗಾವಣೆ ಆಗುತ್ತಿದ್ದರೆ ಅಥವಾ ಆಗಿದ್ದರೆ ಏನು ಮಾಡಬೇಕು […]

Continue Reading

ಮೋಟಾರ್ ಪಂಪ್ ಕಳ್ಳತನ, ಇಬ್ಬರು ಆರೋಪಿಗಳ ಬಂಧನ

ಸುದ್ದಿ ಸಂಗ್ರಹ ಚಿತ್ತಾಪುರಪಾಲಿಶ್ ಮಷಿನ್ ಒಂದರಲ್ಲಿ ಮೋಟಾರ್ ಪಂಪ್ ಕಳ್ಳತನವಾಗಿದ್ದ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಬುಧವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ…..ಪಟ್ಟಣದ ಆಶ್ರಯ ಬಡಾವಣೆಯ ಮಂಜುನಾಥ ಅಲಿಯಾಸ್ ಆಂಜನೇಯ ಚಂದಪ್ಪ ಹೇಳವರ (30), ಭೀಮಣ್ಣ ರಾಮಪ್ಪ ಹೇಳವರ (38) ಎಂಬುವರೆ ಬಂಧಿತ ಆರೋಪಿಗಳು. ಪಟ್ಟಣದ ಸೈಯದ್ ನಾಸಿರ್ ಬಶೀರಮಿಯ್ಯ ಎಂಬುವರ ಪಾಲಿಶ್ ಮಶಿನ್‌ನಲ್ಲಿ ಜು.2ರಂದು 3 ಮೋಟಾರ್ ಪಂಪ್ ಕಳ್ಳತನವಾಗಿದ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಶುರು ಮಾಡಿ ಆರೋಪಿಗಳ ಪತ್ತೆಗೆ […]

Continue Reading

ಚನ್ನಪಟ್ಟಣ ತಹಸೀಲ್ದಾರ್‌ಗೆ ಅಸಹಜ ಲೈಂಗಿಕ ಕಿರುಕುಳ, ವಿವಸ್ತ್ರಗೊಳಿಸಿ ಕೊಲೆ ಯತ್ನ: 10 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದವ ಅರೆಸ್ಟ್

ಸುದ್ದಿ ಸಂಗ್ರಹ ರಾಮನಗರತಹಸೀಲ್ದಾರ್ ಅವರಿಗೆ ಸರ್ಕಾರಿ ನಿವಾಸದಲ್ಲೇ ಅಸಹಜ ಲೈಂಗಿಕ ಕಿರುಕುಳ ನೀಡಿ, ವಿವಸ್ತ್ರಗೊಳಿಸಿ ವಿಡಿಯೋ ಮಾಡಿ 10 ಲಕ್ಷ ರೂ. ಹಣಕ್ಕೆ ಬೇಡಿಕೆಯಿಟ್ಟಿರುವ ಆಘಾತಕಾರಿ ಘಟನೆ ಚನ್ನಪಟ್ಟಣದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಚನ್ನಪಟ್ಟಣ ತಹಸೀಲ್ದಾರ್ ಬಿ.ಎನ್ ಗಿರೀಶ್ ಅವರಿಗೆ ಕಿರುಕುಳ ನೀಡಿದ್ದು, ಆರೋಪಿಯನ್ನು ಮೈಸೂರು ಮೂಲದ ಅನುಶ್ ಎಂದು ಗುರುತಿಸಲಾಗಿದೆ. ಆರೋಪಿ ಅನುಶ್ ಫೇಸ್‌ಬುಕ್ ಮೂಲಕ ತಹಸೀಲ್ದಾರ್ ಗಿರೀಶ್‌ಗೆ ಪರಿಚಯವಾಗಿದ್ದ. ಜೂನ್ 28ರಂದು ರಾತ್ರಿ ಅನುಶ್ ತನ್ನ ಸ್ನೇಹಿತರಾದ ಶೋಭರಾಜನ್ ಮತ್ತು ನವೀನ್ ಎಂಬುವವರ ಜೊತೆಗೆ […]

Continue Reading

ಕರ್ನಾಟಕದ 2 ಸೇರಿ ಭಾರತದ 58 ಎಂಜಿನಿಯರಿಂಗ್ ಕಾಲೇಜುಗಳು ಬಂದ್: ಕಾರಣ ಗೊತ್ತಾ ?

ಸುದ್ದಿ ಸಂಗ್ರಹ ನವದೆಹಲಿವಿದ್ಯಾರ್ಥಿಗಳ ಪ್ರವೇಶಾತಿಯಲ್ಲಿ ಭಾರಿ ಕುಸಿತ ಹಾಗೂ ನಿಗದಿತ ಶೈಕ್ಷಣಿಕ ಮತ್ತು ಮೂಲಸೌಕರ್ಯ ಮಾನದಂಡ ಪಾಲಿಸಲು ವಿಫಲವಾದ ಹಿನ್ನೆಲೆಯಲ್ಲಿ, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯು 2025-26ರ ಶೈಕ್ಷಣಿಕ ಸಾಲಿನಲ್ಲಿ ದೇಶಾದ್ಯಂತ ಒಟ್ಟು 58 ಎಂಜಿನಿಯರಿಂಗ್ ಮತ್ತು ತಾಂತ್ರಿಕ ಸಂಸ್ಥೆಗಳನ್ನು ಹಂತ-ಹಂತವಾಗಿ ಮುಚ್ಚಲು ಅನುಮೋದನೆ ನೀಡಿದೆ. ತಾಂತ್ರಿಕ ಶಿಕ್ಷಣದ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದರೂ, ಪ್ರಸ್ತುತ ಈ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಕೋರ್ಸ್‌ಗಳಿಗೆ ಯಾವುದೆ ಅಡ್ಡಿಯಾಗುವುದಿಲ್ಲ ಎಂದು ಕೌನ್ಸಿಲ್ ಭರವಸೆ ನೀಡಿದೆ. ಈ […]

Continue Reading

ಬೆಳೆ ವಿಮೆ ನೋಂದಣಿ ಮಾಡಿಸಿ: ಸಂಜೀವಕುಮಾರ ಮಾನಕರ‌‌

ಸುದ್ದಿ ಸಂಗ್ರಹ ಚಿತ್ತಾಪುರಮುಂಗಾರು ಹಂಗಾಮಿನಲ್ಲಿ ಬಿತ್ತನೆ ಕೈಗೊಂಡಿರುವ ರೈತರು ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ವಿಮೆ ನೋಂದಣಿ ಮಾಡಿಸಿಕೊಳ್ಳುವಂತೆ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸಂಜೀವಕುಮಾರ ಮಾನಕರ ತಿಳಿಸಿದ್ದಾರೆ. ಮಳೆ ಅಭಾವ, ಹೆಚ್ಚಿನ ಮಳೆ, ಬರ, ಪ್ರವಾಹ, ಭೂಕುಸಿತ, ಬೆಳೆ ಮುಳುಗಡೆ ಸೇರಿದಂತೆ ಇತರೆ ಪ್ರಾಕೃತಿಕ ವಿಕೋಪಗಳಿಂದ ಬೆಳೆಗೆ ಹಾನಿಯಾದರೆ ರೈತರಿಗೆ ವಿಮಾ ಪರಿಹಾರ ದೊರೆಯಲಿದೆ. ಮಳೆಯಾಶ್ರಿತ ಬೆಳೆಗಳಿಗೆ ಪ್ರತಿ ಎಕರೆಗೆ 321 ರೂ, ಉದ್ದು ಪ್ರತಿ ಎಕರೆಗೆ 314 ರೂ, ತೊಗರಿ […]

Continue Reading

ಲಂಚ ಪಡೆದ ಗ್ರಾ.ಪಂ ಕರವಸೂಲಿಗಾರ ಸಂತೋಷ ರಾಠೋಡ ಲೋಕಾಯುಕ್ತ ಬಲೆಗೆ

ಸುದ್ದಿ ಸಂಗ್ರಹ ಚಿತ್ತಾಪುರ ಯುಪಿಐ ಮೂಲಕ ಲಂಚ ಪಡೆದ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮ ಪಂಚಾಯಿತಿ ಕರ ವಸೂಲಿಗಾರ ಸಂತೋಷ ರಾಠೋಡ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕರದಾಳ ಪಂಚಾಯಿತಿ ವ್ಯಾಪ್ತಿಯ ಹನ್ನಿಕೇರಿ ಗ್ರಾಮದ ರಾಮನಾಯಕ ತಾಂಡಾ ನಿವಾಸಿ ಸವಿತಾ ಎಂಬುವವರಿಗೆ ಸರ್ಕಾರ ಡಾ. ಬಿ.ಆರ್‌ ಅಂಬೇಡ್ಕರ್‌ ನಿವಾಸ ಯೋಜನೆಯಡಿಯ ಮನೆ ಮಂಜೂರು ಮಾಡಿತ್ತು. ಆ ಮನೆ ಕಟ್ಟಡದ 3 ಹಾಗೂ 4ನೇ ಕಂತಿನ ಹಣ ಬಿಡುಗಡೆಗೆ ಬಿಲ್‌ ಕಲೆಕ್ಟರ್‌ ಸಂತೋಷ 22 ಸಾವಿರ ಲಂಚಕ್ಕೆ ಬೇಡಿಕೆ […]

Continue Reading

ಶರಣಬಸವೇಶ್ವರ ದೇವಸ್ಥಾನ, ಕೆಬಿಎನ್ ದರ್ಗಾ ದರ್ಶನ ಪಡೆದ ಸಿಎಂ ಡಿ.ಕೆ ಶಿವಕುಮಾರ್

ಸುದ್ದಿ ಸಂಗ್ರಹ ಕಲಬುರಗಿಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಂಗಳವಾರ ಈ ಭಾಗದ ಸೌಹಾರ್ದ ಪರಂಪರೆಯ ಎರಡು ಕಣ್ಣುಗಳಂತಿರುವ ಶರಣಬಸವೇಶ್ವರರ ‌ದೇವಸ್ಥಾನ ಹಾಗೂ ಸೂಫಿ ಸಂತ ಖಾಜಾ ಬಂದಾನವಾಜ್ ದರ್ಗಾಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಗರದ ಐವಾನ್ ಎ ಶಾಹಿ ಅತಿಥಿ ಗೃಹದಲ್ಲಿ ‌ಸಾರ್ವಜನಿಕರ ಅಹವಾಲು ಆಲಿಸಿದ ಮುಖ್ಯಮಂತ್ರಿ ‌ಶಿವಕುಮಾರ್, ಮೊದಲಿಗೆ ವೈದ್ಯಕೀಯ ‌ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲರ ಮನೆಗೆ ಸೌಜನ್ಯಯುತ ಭೇಟಿ ನೀಡಿದರು. ಅಲ್ಲಿಯೆ ಉಪಾಹಾರ ಸ್ವೀಕರಿಸಿದರು. ನಂತರ ಈ ಭಾಗದ ಪ್ರಸಿದ್ಧ ಶರಣಬಸವೇಶ್ವರ ದೇವಸ್ಥಾನಕ್ಕೆ […]

Continue Reading