ಕೆಕೆಆರ್‌ಟಿಸಿ ಬಸ್‌-ಬೈಕ್ ನಡುವೆ ಭೀಕರ ಅಪಘಾತ: ಮೂವರು ಸ್ಥಳದಲ್ಲೆ ಸಾವು

ಸುದ್ದಿ ಸಂಗ್ರಹ ಕಲಬುರಗಿದ್ವಿಚಕ್ರ ವಾಹನ ಮತ್ತು ಕೆಕೆಆರ್‌ಟಿಸಿ ಬಸ್ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ತಾಪುರ ತಾಲೂಕಿನ ಕರದಾಳ ಸಮೀಪ ಬುಧವಾರ ರಾತ್ರಿ ಈ ಅವಘಡ ಸಂಭವಿಸಿದೆ. ಚಿತ್ತಾಪುರದಿಂದ ಸನ್ನತಿಗೆ ಹೊರಟಿದ್ದ ಕೆಕೆಆರ್‌ಟಿಸಿ ಬಸ್‌ ಹಾಗೂ ಬೊಮ್ಮನಳ್ಳಿ ಕಡೆಯಿಂದ ಚಿತ್ತಾಪುರ ಕಡೆಗೆ ಹೋಗುತ್ತಿದ್ದ ಬೈಕ್ ಮುಖಾಮುಖಿ ಡಿಕ್ಕಿಯಾಗಿವೆ. ದುರಂತದಲ್ಲಿ ಬೈಕ್ ಮೇಲೆ ತೆರಳುತ್ತಿದ್ದ ಮೂವರ ಮೇಲೆ ಬಸ್ ಚಕ್ರಗಳು ಹರಿದ ಪರಿಣಾಮ ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಬೊಮ್ಮನಹಳ್ಳಿ ಗ್ರಾಮದ […]

Continue Reading

ಫೋಟೊ ತೆಗೆಯಲು ಹೋಗಿ ಒಂದೆ ಕುಟುಂಬದ ಐವರು ಕಾವೇರಿ ನದಿಯಲ್ಲಿ ಜಲಸಮಾಧಿ

ಸುದ್ದಿ ಸಂಗ್ರಹ ಮಂಡ್ಯಫೋಟೊ ತೆಗೆಯಲು ಹೋಗಿ ಒಂದೆ ಕುಟುಂಬದ ಐವರು ಕಾವೇರಿಯಲ್ಲಿ ನದಿಯಲ್ಲಿ ಜಲಸಮಾಧಿಯಾಗಿರುವ ದುರ್ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಇಂದು ಸಂಜೆ 5 ಗಂಟೆಗೆ ಘಟನೆ ನಡೆದಿದೆ. ಚೈತ್ರ (20), ಶ್ವೇತಾ (38), ವಿಜಯಮ್ಮ (50), ಪ್ರಿಯಾಂಕಾ (28), ಮಹೇಶ್ ಮೃತಪಟ್ಟವರು. ಮೃತರು ಚನ್ನಪಟ್ಟಣ ಮೂಲದವರು. ಮುತ್ತತ್ತಿಯ ಮುತ್ತೆತ್ತರಾಯ ದೇಗುಲಕ್ಕೆ ಕುಟುಂಬಸ್ಥರು ಬಂದಿದ್ದರು. ಈ ವೇಳೆ ಕಾವೇರಿ ನದಿಗಿಳಿದು ಪೋಟೊ ತೆಗೆದುಕೊಳ್ಳುವಾಗ ದುರ್ಘಟನೆ ನಡೆದಿದೆ. ಸದ್ಯ ಐವರ ಮೃತದೇಹವನ್ನು ಅಗ್ನಿಶಾಮಕದಳ ಸಿಬ್ಬಂದಿ […]

Continue Reading

133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ನೀಡಿದೆ. ಬ್ರ್ಯಾಂಡೆಡ್‌ ಔಷಧಿ ಮಾರಾಟ ಮಾಡುತ್ತಿದ್ದಾರೆ ಎಂದು ರಾಜ್ಯದ ಔಷಧ ನಿಯಂತ್ರಣ ಇಲಾಖೆ ಕಳೆದ ಎರಡು ದಿನಗಳಲ್ಲಿ 172 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳ ಮೇಲೆ ದಾಳಿ ಮಾಡಿದ್ದು, ಇದೀಗ 133 ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಹೊರಡಿಸಿದೆ. ರಾಜ್ಯದಲ್ಲಿ 1,200ಕ್ಕೂ ಹೆಚ್ಚು ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳು ಇವೆ. ಇದರಲ್ಲಿ 172ರ ಔಷಧಿ ಕೇಂದ್ರಗಳ ಮೇಲೆ ದಾಳಿ ನಡೆಸಿದ್ದು, ಈ ಪೈಕಿ 133 ಕೇಂದ್ರಗಳಲ್ಲಿ […]

Continue Reading

ಕಲಬುರಗಿ ಜಿಲ್ಲೆಯ ಆರು ಪೊಲೀಸರಿಗೆ ಡಿಜಿ–ಐಜಿಪಿ ಪ್ರಶಸ್ತಿ

ಸುದ್ದಿ ಸಂಗ್ರಹ ಕಲಬುರಗಿಅತ್ಯುತ್ತಮ ಸೇವೆಗಾಗಿ ಕಲಬುರಗಿ ವಲಯದ ಡಿಐಜಿ ಶಾಂತನು ಸಿನ್ಹಾ ಸೇರಿದಂತೆ ಜಿಲ್ಲೆಯ ಆರು ಪೊಲೀಸರು 2025–26ನೇ ಸಾಲಿನ ಡಿಜಿ–ಐಜಿಪಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು, ಕಲಬುರಗಿ ಪೊಲೀಸ್‌ ಕಮಿಷನರೇಟ್‌ನ ಸಿಸಿಬಿ ಇನ್‌ಸ್ಪೆಕ್ಟರ್‌ ಅರುಣಕುಮಾರ, ಆಳಂದ ಸಿಪಿಐ ಶರಣಬಸಪ್ಪ ಕೊಡ್ಲಾ, ಡಿಎಆರ್‌ನ ಆರ್‌ಪಿಐ ಚಂದ್ರಶೇಖರ ಹಾಗೂ ಈಶಾನ್ಯ ವಲಯ ಪೊಲೀಸ್‌ ಕಚೇರಿಯ ಹೆಡ್‌ ಕಾನ್‌ಸ್ಟೆಬಲ್‌ ಅರುಣಕುಮಾರ ಈ ಪ್ರಶಸ್ತಿಗೆ ಪಾತ್ರರಾದ ಇತರ ಪೊಲೀಸರು. ದೆಹಲಿ ಮೂಲದ ಶಾಂತನು ಸಿನ್ಹಾ 2009ರ ಬ್ಯಾಚ್‌ನ […]

Continue Reading

ಸರಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿಯಾಗಿ ಚಂದ್ರಕಾಂತ ಏರಿ ನೇಮಕ

ಸುದ್ದಿ ಸಂಗ್ರಹ ಕಲಬುರಗಿ ‌ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿಯಾಗಿ ಚಂದ್ರಕಾಂತ ಏರಿ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ. ಈ ಹಿಂದೆ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿಗಳಾಗಿದ್ದ ಮಹೇಶ ಹೂಗಾರ ಅವರು ಸ್ವ-ಇಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ದರಿಂದ ಜಿಲ್ಲಾ ಕಾರ್ಯದರ್ಶಿ ಸ್ಥಾನ ತೆರವಾದ ಹಿನ್ನೆಲೆ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌ ಷಡಾಕ್ಷರಿ ಅವರ ಅನುಮೋದನೆ ಪಡೆದುಕೊಂಡು ಆರೋಗ್ಯ ಇಲಾಖೆ ನಿರ್ದೇಶಕ ಚಂದ್ರಕಾಂತ ಏರಿ ಅವರಿಗೆ ಜಿಲ್ಲಾ ಕಾರ್ಯದರ್ಶಿ ಸ್ಥಾನಕ್ಕೆ […]

Continue Reading

ರಾಜ್ಯದ ಪ್ರವಾಸೋದ್ಯಮ ಉತ್ತೇಜನಕ್ಕೆ ನಮ್ಮ ಗೈಡ್ ವೆಬ್‌ಸೈಟ್‌ & ಆಪ್ ಅಭಿವೃದ್ಧಿ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದ ಪ್ರವಾಸೋದ್ಯಮ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಹಾಗೂ ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ನೂತನವಾಗಿ ‘ನಮ್ಮ ಗೈಡ್’ ಆನ್‌ಲೈನ್ ವೇದಿಕೆ ಸಿದ್ಧಪಡಿಸಲು ಪ್ರವಾಸೋದ್ಯಮ ಇಲಾಖೆ ಚಿಂತನೆ ನಡೆಸಿದೆ. ರಾಜ್ಯದ ಯಾವುದೆ ಪ್ರವಾಸಿ ತಾಣಕ್ಕೆ ಭೇಟಿ ನೀಡುವ ದೇಶ-ವಿದೇಶಗಳ ಪ್ರವಾಸಿಗರಿಗೆ ಆಯಾ ಪ್ರದೇಶದ ಇತಿಹಾಸ, ಸಂಸ್ಕೃತಿ ಮತ್ತು ಮಹತ್ವದ ಬಗ್ಗೆ ನಿಖರ ಮಾಹಿತಿ ನೀಡುವಲ್ಲಿ ಸ್ಥಳೀಯ ಗೈಡ್‌ಗಳ ಸೇವೆ ಅತ್ಯಂತ ಪ್ರಮುಖವಾಗಿದೆ. ಪ್ರಸ್ತುತ ವಿದೇಶಗಳಲ್ಲಿ ಪ್ರವಾಸಿಗರು ತಮಗೆ ಬೇಕಾದ ಗೈಡ್‌ಗಳನ್ನು ಆನ್‌ಲೈನ್ ಮೂಲಕವೇ ಕಾಯ್ದಿರಿಸುವ […]

Continue Reading

ಯಲ್ಲಾಲಿಂಗ ಆಶ್ರಮದಲ್ಲಿ ನಾಳೆ ಉಚಿತ ಆರೋಗ್ಯ ತಪಾಸಣೆ ಶಿಬಿರ

ಸುದ್ದಿ ಸಂಗ್ರಹ ಶಹಾಬಾದ್ತಾಲೂಕಿನ ಸಮೀಪದ ಮಹಾನಗರ ತಾಂಡದ ಶ್ರೀ ಯಲ್ಲಾಲಿಂಗ ಪುಣ್ಯಾಶ್ರಮದ ಪೀಠಾಧಿಪತಿ ಸದ್ಗುರು ಶ್ರೀ ಜೇಮಸಿಂಗ ಮಹಾರಾಜರ 78ನೇ ಹುಟ್ಟು ಹಬ್ಬದ ನಿಮಿತ್ತ ಜೂನ್ 24 ರಂದು ಬೆಳಗ್ಗೆ 10 ಗಂಟೆಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಮತ್ತು ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಮಠದ ಪರವಾಗಿ ಪ್ರಕಾಶ ರಾಠೋಡ, ನೀಲಕಂಠ ಚವ್ಹಾಣ್ ಹೇಳಿದ್ದಾರೆ. ಆಶ್ರಮದ ಯಲ್ಲಾಲಿಂಗ ದೇವಸ್ಥಾನದಲ್ಲಿ ಬೆಳಗ್ಗೆ ವಿಶೇಷ ಪೂಜೆ ನಡೆಯುವುದು ನಂತರ ಆಯುಷ್ ಇಲಾಖೆ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ […]

Continue Reading

ಗಿರವಿ ಇಟ್ಟ ಚಿನ್ನ ‌ವಾಪಸ್ ಕೇಳಿದ್ದಕ್ಕೆ ಫೈರಿಂಗ್‌: ಶಾಲಾ ಬಾಲಕಿಗೂ ತಗುಲಿದ ಗುಂಡು

ಸುದ್ದಿ ಸಂಗ್ರಹ ಧಾರವಾಡಗಿರಿವಿ ಇಟ್ಟಿದ್ದ ಚಿನ್ನವನ್ನು ವಾಪಸ್ ಕೇಳಿದ್ದಕ್ಕೆ ಧಾರವಾಡದ ಗರಗ ಗ್ರಾಮದಲ್ಲಿ ಫೈರಿಂಗ್ ನಡೆದಿದೆ. ಚಿನ್ನ ಕೇಳಿದ ಅಪ್ಪ ಮಗನ ಮೇಲೆ ಚಿನ್ನದಂಗಡಿ ಮಾಲೀಕ ಗುಂಡು ಹಾರಿಸಿದ್ದಾನೆ. ಈ ವೇಳೆ ಶಾಲೆಯಿಂದ ಮನೆಗೆ ಹೊರಟಿದ್ದ ಬಾಲಕಿಗೆ ಸಹ ಗುಂಡು ತಗುಲಿದೆ. ಗರಗ ಗ್ರಾಮದ ಜ್ಯುವೆಲ್ಲರಿ ಶಾಪ್ ಮಾಲೀಕ ಮೌನೇಶ್ ಬಳಿ ಜೀರಿಗವಾಡ ಗ್ರಾಮದ ನಿಂಗಪ್ಪ ಹೊರಕೇರಿ ಹಾಗೂ ಆತನ ಪುತ್ರ ಸಿದ್ದಪ್ಪ ಹೊರಕೇರಿ 4 ವರ್ಷಗಳ ಹಿಂದೆ 40 ಗ್ರಾಂ ಚಿನ್ನವನ್ನು 60 ಸಾವಿರ ರೂ.ಗೆ […]

Continue Reading

ಅನ್ನಭಾಗ್ಯದಿಂದ 14 ಲಕ್ಷ ಅನರ್ಹರಿಗೆ ಶಾಕ್

ಸುದ್ದಿ ಸಂಗ್ರಹ ಬೆಂಗಳೂರುಗ್ಯಾರಂಟಿ ಯೋಜನೆಗಳಿಂದ ಇಕ್ಕಟ್ಟಿನಲ್ಲಿ ಸಿಲುಕಿರುವ ಸರ್ಕಾರ, ಯೋಜನೆಗಳ ಪರಿಷ್ಕರಣೆ ಮಾಡುವದು ಖಚಿತವಾಗಿದೆ. ಗೃಹಜ್ಯೋತಿ, ಗೃಹಲಕ್ಷ್ಮಿ ಜೊತೆ ಅನ್ನಭಾಗ್ಯಕ್ಕೂ ಫಿಲ್ಟರ್ ಆಗಲಿದೆ. ಆಹಾರ ಖಾತೆ ಸಚಿವ ಮುನಿಯಪ್ಪ ಸುಳಿವು ಕೊಟ್ಟಿದ್ದು, 13-14 ಲಕ್ಷ ಅನರ್ಹರನ್ನು ತೆಗೆಯೋ ಕೆಲಸ ಮಾಡ್ತೆವೆ ಅಂದಿದ್ದಾರೆ. ಸರ್ಕಾರಿ ನೌಕರಿ ಇರುವ ಕುಟುಂಬಕ್ಕೆ ಗ್ಯಾರಂಟಿ ಕಡಿತ ಮಾಡೋದಕ್ಕೆ ಚಿಂತನೆ ನಡೆಸಿದೆ. ಈ ಬಗ್ಗೆ ನಿನ್ನೆಯಷ್ಟೆ ನೌಕರರ ಜೊತೆ ಚರ್ಚೆ ಮಾಡ್ತೆನೆ ಎಂದಿದ್ದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್‌.ಎಂ ರೇವಣ್ಣ ಇವತ್ತು ಉಲ್ಟಾ […]

Continue Reading

ಶೀಘ್ರವೇ ಬಸ್‌ ಟಿಕೆಟ್ ದರ ಏರಿಕೆ: ಕೆಎಸ್ಆರ್‌ಟಿಸಿ 33%, ಬಿಎಂಟಿಸಿ 44% ರಷ್ಟು ಹೆಚ್ಚಳಕ್ಕೆ ಪ್ರಸ್ತಾಪ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದ ಜನತೆಗೆ ಶೀಘ್ರದಲ್ಲೇ ಸಾರಿಗೆ ಸಂಸ್ಥೆಗಳು ದರ ಏರಿಕೆಯ ಬಿಸಿ ಮುಟ್ಟಿಸಲು ಸಜ್ಜಾಗಿವೆ. ತೀವ್ರ ಆರ್ಥಿಕ ನಷ್ಟ ಹಾಗೂ ಡೀಸೆಲ್‌ ದರ ಏರಿಕೆಯಿಂದ ತತ್ತರಿಸಿರುವ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಸೇರಿದಂತೆ ನಾಲ್ಕೂ ಸಾರಿಗೆ ನಿಗಮಗಳು ಬಸ್ ಟಿಕೆಟ್ ದರವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ಅಧಿಕೃತ ಪ್ರಸ್ತಾವನೆ ಸಲ್ಲಿಸಿವೆ. ನಾಲ್ಕೂ ಸಾರಿಗೆ ನಿಗಮಗಳು ಪ್ರತ್ಯೇಕವಾಗಿ ದರ ಪರಿಷ್ಕರಣೆಗೆ ಬೇಡಿಕೆ ಇಟ್ಟಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಟಿಕೆಟ್ ದರದಲ್ಲಿ ಬರೋಬ್ಬರಿ […]

Continue Reading