ಶಹಾಬಾದ್: ಆಸ್ತಿಗಾಗಿ ಅತ್ತೆಯ ಮಗನನ್ನು ಕೊಂದ ವ್ಯಕ್ತಿ

ಸುದ್ದಿ ಸಂಗ್ರಹ ಶಹಾಬಾದ್ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಶಹಾಬಾದ್ ಮರಗೋಳ ಕಾಲೇಜ್ ಹತ್ತಿರದ ಬೀರಲಿಂಗೇಶ್ವರ ದೇವಸ್ಥಾನ ಮಹಾದ್ವಾರದ ಮುಂದೆ ಶುಕ್ರವಾರ ಸಂಜೆ ನಡೆದಿದೆ. ನಾಗರಾಜ (40) ಕೊಲೆಯಾದವರಾಗಿದ್ದು, ತಿರುಪತಿ ದೇವಕರ ಕೊಲೆ ಆರೋಪಿಯಾಗಿದ್ದು. ತಿರುಪತಿ, ತನ್ನ ಸೋದರತ್ತೆಯ ಆಸ್ತಿಗಾಗಿ ಜೇವರ್ಗಿ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದ. ಆದರೆ ಇದಕ್ಕೆ ಅತ್ತೆಯ ಮಗ ನಾಗರಾಜ ಅಡ್ಡಿಯಾಗಿದ್ದ. ಇದರಿಂದ ಇತ್ತೀಚೆಗೆ ತೀವ್ರ ಕುಪಿತಗೊಂಡಿದ್ದ ತಿರುಪತಿ ನಾಗರಾಜನನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು […]

Continue Reading

ಕಲಬುರಗಿ ಜಿಲ್ಲೆಯಲ್ಲಿ ಮೇ, ಜೂನ್ ತಿಂಗಳ ಪಡಿತರ ಜೂನ್ ತಿಂಗಳಲ್ಲೆ ವಿತರಣೆ

ಸುದ್ದಿ ಸಂಗ್ರಹ ಕಲಬುರಗಿಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯ ಪಡಿತರ ಚೀಟಿದಾರರಿಗೆ ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಯನ್ನು ಜೂನ್ ತಿಂಗಳಲ್ಲೆ ವಿತರಣೆ ಮಾಡಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಇಕ್ರಂ ಶರೀಫ್ ತಿಳಿಸಿದ್ದಾರೆ. ಮೇ ಮತ್ತು ಜೂನ್ ತಿಂಗಳ ಹೆಚ್ಚುವರಿ 5 ಕೆ.ಜಿ ಅಕ್ಕಿಯನ್ನು ಹಂಚಿಕೆ ನೀಡಲಾಗಿದ್ದು, ಒಟ್ಟು 10 ಕೆ.ಜಿ ಅಕ್ಕಿಯನ್ನು ಜೂನ್ ತಿಂಗಳಲ್ಲಿ ಒಂದೆ ಬಯೋಮೇಟ್ರಿಕ್ ದೃಢೀಕರಣದ ಮೂಲಕ ಪಡೆಯಬಹುದಾಗಿದೆ. ಯಾವುದೆ ಪಡಿತರ ಚೀಟಿದಾರರು ಯಾವುದೆ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ನ್ಯಾಯಬೆಲೆ […]

Continue Reading

8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

ಸುದ್ದಿ ಸಂಗ್ರಹ ವಾಡಿಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಚಿತ್ತಾಪುರ ತಾಲೂಕಿನ ವಾಡಿ ಪೊಲೀಸರು ಬಂಧಿಸಿದ್ದಾರೆ. ದರೋಡೆ ಮಾಡಿ ಪರಾರಿಯಾಗಿದ್ದ ಚಿತ್ತಾಪುರ ತಾಲೂಕಿನ ಕಡಬೂರ ಗ್ರಾಮದ ಅಹ್ಮದ್ ಷಾ ಮತ್ತು ಅಕ್ರಮ ಶಸ್ತ್ರಾಸ್ತ್ರ ಬಂದೂಕು ತಯಾರು ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಚಿತ್ತಾಪುರ ತಾಲೂಕಿನ ಸ್ಟೇಷನ್ ನಾಲವಾರ ತಾಂಡಾದ ನಿವಾಸಿ ನಿಂಗಪ್ಪ ಬಂಧಿತ ಆರೋಪಿಗಳಾಗಿದ್ದು, ಈ ಇಬ್ಬರು ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತ್ಯೇಕ ಕೃತ್ಯದ ಬಳಿಕ ತಲೆಮರೆಸಿಕೊಂಡಿದ್ದರು‌‌. ಆರೋಪಿಗಳನ್ನು ಹುಡುಕಾಟ ನಡೆಸಿದ ವಾಡಿ ಪೊಲೀಸರು ನಿನ್ನೆ ಖಚಿತ […]

Continue Reading

ಮೂಕಾಂಬಿಕಾ ಸನ್ನಿಧಿಯಲ್ಲಿ ವಿಜಯ್ ಶತ್ರು ಸಂಹಾರ ಸಂಕಲ್ಪ

ಸುದ್ದಿ ಸಂಗ್ರಹ ಕೊಲ್ಲೂರುತಮಿಳುನಾಡು ಮುಖ್ಯಮಂತ್ರಿ ಹಾಗೂ ಖ್ಯಾತ ನಟ ದಳಪತಿ ವಿಜಯ್ ಅವರು ಕರ್ನಾಟಕದ ಪ್ರಸಿದ್ಧ ಶಕ್ತಿಪೀಠವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಭೇಟಿಯ ಬೆನ್ನಲ್ಲೆ ಅವರು ದೇವಿಯ ಸನ್ನಿಧಿಯಲ್ಲಿ ಮಾಡಿಕೊಂಡಿದ್ದಾರೆನ್ನಲಾದ ‘ಶತ್ರು ಸಂಹಾರ ಸಂಕಲ್ಪ’ ಈಗ ರಾಜಕೀಯ ಹಾಗೂ ಸಿನಿಮಾ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಮಧ್ಯಾಹ್ನ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿಜಯ್, ಅಲ್ಲಿಂದ ಮಾಡರ್ನ್ ಉಡುಪಿನಲ್ಲೆ ಕೊಲ್ಲೂರು ಕಡೆಗೆ ಪ್ರಯಾಣ ಬೆಳೆಸಿದರು. ದಾರಿ ಮಧ್ಯೆ […]

Continue Reading

ಪಾಠ ಕೇಳುವಾಗಲೆ ವಿದ್ಯಾರ್ಥಿನಿಯರ ಮೇಲೆ ಕುಸಿದ ಕಾಲೇಜು ಕಟ್ಟಡದ ಮೇಲ್ಛಾವಣಿಯ ಪ್ಲಾಸ್ಟರ್: ತಪ್ಪಿದ ಭಾರಿ ಅನಾಹುತ

ಸುದ್ದಿ ಸಂಗ್ರಹ ಕಲಬುರಗಿಪಾಠ ಕೇಳುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಕಾಲೇಜು ಕಟ್ಟಡದ ಮೇಲ್ಛಾವಣಿಯ ಪ್ಲಾಸ್ಟರ್​​ ಕುಸಿದಿರುವ ಆಘಾತಕಾರಿ ಘಟನೆ ಕಲಬುರಗಿಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ. ಘಟನೆ ವೇಳೆ 80ಕ್ಕೂ ಅಧಿಕ ಯುವತಿಯರು ಕೊಠಡಿಯಲ್ಲಿದ್ದರು ಎನ್ನಲಾಗಿದ್ದು, ಅದೃಷ್ಟವಶಾತ್​​ ಸಂಭವನೀಯ ಭಾರಿ ಅನಾಹುತವೊಂದು ತಪ್ಪಿದೆ. ಐವರು ವಿದ್ಯಾರ್ಥಿಗಳಿಗೆ ಈ ವೇಳೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಕಾಲೇಜಿನಲ್ಲಿ ಸುಮಾರು 2 ಸಾವಿರ ಜನ ವಿದ್ಯಾರ್ಥಿನಿಯರಿದ್ದು, ಬಹುತೇಕ ಗ್ರಾಮೀಣ ಭಾಗದ ಹೆಣ್ಣು ಮಕ್ಕಳೇ ಕಾಲೇಜಿನಲ್ಲಿ […]

Continue Reading

ವಿಶ್ವಾದ್ಯಂತ ಇನ್‌ಸ್ಟಾಗ್ರಾಮ್‌, ವಾಟ್ಸಪ್‌, ಫೇಸ್‌ಬುಕ್‌ ಡೌನ್‌

ಸುದ್ದಿ ಸಂಗ್ರಹ ನವದೆಹಲಿಸಾಮಾಜಿಕ ಜಾಲತಾಣ ದೈತ್ಯ ‘ಮೆಟಾ’ ಸಂಸ್ಥೆಯ ಒಡೆತನದ ಪ್ರಮುಖ ಆಪ್‌ಗಳಾದ ಇನ್‌ಸ್ಟಾಗ್ರಾಮ್‌, ವಾಟ್ಸಪ್‌ ಮತ್ತು ಫೇಸ್‌ಬುಕ್‌ ಸರ್ವರ್‌ಗಳು ಜಾಗತಿಕ ಮಟ್ಟದಲ್ಲಿ ಏಕಾಏಕಿ ಸ್ಥಗಿತಗೊಂಡಿದ್ದು, ಕೋಟ್ಯಂತರ ಬಳಕೆದಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ವಿಶ್ವದಾದ್ಯಂತ ಏಕಕಾಲದಲ್ಲಿ ಮೆಟಾ ಸಂಸ್ಥೆಯ ಈ ಮೂರು ಪ್ರಮುಖ ಆಪ್‌ಗಳ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದ್ದು, ಬಳಕೆದಾರರು ಲಾಗಿನ್ ಮಾಡಲು ಅಥವಾ ಸಂದೇಶಗಳನ್ನು ಕಳುಹಿಸಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ. ಇನ್‌ಸ್ಟಾಗ್ರಾಮ್: ಬಳಕೆದಾರರಿಗೆ ಫೀಡ್ ರಿಫ್ರೆಶ್ ಮಾಡಲು ಸಾಧ್ಯವಾಗುತ್ತಿಲ್ಲ, ಡೈರೆಕ್ಟ್ ಮೆಸೇಜ್‌ಗಳು ಹೋಗುತ್ತಿಲ್ಲ ಮತ್ತು ಸ್ಟೋರಿಗಳನ್ನು ಅಪ್‌ಲೋಡ್ […]

Continue Reading

ಕಾಡುಗೋಡಿ ಮಗು ಕೊಲೆ ಕೇಸ್‌: ಮೂವರು ಪೊಲೀಸರ ತಲೆದಂಡ

ಸುದ್ದಿ ಸಂಗ್ರಹ ಬೆಂಗಳೂರುಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಾಲಕಿ ವೆನ್ನಿಲಾ ಕೊಲೆ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದಡಿ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಅಮಾನತುಗೊಂಡವರಲ್ಲಿ ಕಾಡುಗೋಡಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಂಗಸ್ವಾಮಿ, ಪಿಎಸ್‌ಐ ನಿಂಗರಾಜು ಮತ್ತು ಸಿಬ್ಬಂದಿ ಹಾಲೇಶ್ ನಾಯ್ಕ್ ಸೇರಿದ್ದಾರೆ. ಇನ್ನು ಪ್ರಿಯಕರನೊಂದಿಗೆ ತನ್ನ ಐದೂವರೆ ವರ್ಷದ ಮಗಳು ವೆನ್ನಿಲಾಳನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿದ್ದ ಪ್ರಿಯಾಂಕಾ, ಎಫ್‌ಐಆರ್‌ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದಳು. ಆದರೆ ಇದೀಗ ಪೊಲೀಸರು ಆಕೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. […]

Continue Reading

ಕಲಬುರಗಿ: ಬಾರ್‌ನಲ್ಲಿ ಅಗ್ನಿ ಅವಘಡ – ತಪ್ಪಿದ ಅನಾಹುತ

ಸುದ್ದಿ ಸಂಗ್ರಹ ಕಲಬುರಗಿನಗರದ ಸರ್ಧಾರ್ ವಲ್ಲಭಭಾಯಿ ಪಟೇಲ್ (ಎಸ್‌ವಿಪಿ) ವೃತ್ತದಲ್ಲಿರುವ ಬಾರ್ & ರೆಸ್ಟೋರೆಂಟ್ ಒಂದರ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬಾರ್‌ನ ಮೇಲಂತಸ್ತಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೆ ಜ್ವಾಲೆಗಳು ವ್ಯಾಪಿಸಿ ಕಟ್ಟಡದ ಮೇಲ್ಭಾಗ ಧಗಧಗನೆ ಹೊತ್ತಿ ಉರಿದಿದೆ. ವಿಷಯ ತಿಳಿಯುತ್ತಿದ್ದಂತೆ ಎರಡು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿವೆ. ಅಗ್ನಿಶಾಮಕ ಸಿಬ್ಬಂದಿ ಸಮಯೋಚಿತವಾಗಿ ಕಾರ್ಯಾಚರಣೆ ನಡೆಸಿದ ಪರಿಣಾಮ ಬೆಂಕಿ ಅಕ್ಕಪಕ್ಕದ ಕಟ್ಟಡಗಳಿಗೆ ವ್ಯಾಪಿಸದಂತೆ ತಡೆಗಟ್ಟಲಾಯಿತು. […]

Continue Reading

ಡಿಕೆಶಿಯಿಂದ ಮೋದಿ ಭೇಟಿ: ರಾಜ್ಯದ ಕೆಲಸಗಳಿಗೆ ಸಹಕಾರ ಕೇಳಿದ ಸಿಎಂ

ಸುದ್ದಿ ಸಂಗ್ರಹ ನವದೆಹಲಿಕರ್ನಾಟಕದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ ಶಿವಕುಮಾರ್ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿರುವುದು ಇದೆ ಮೊದಲು. ಆಯೋಗದ ಮಹತ್ವದ ಸಭೆಯು ಮುಗಿದ ಬಳಿಕ ರಾಷ್ಟ್ರಪತಿ ಭವನದಲ್ಲಿ ಈ ಉನ್ನತ ಮಟ್ಟದ ಭೇಟಿ ನಡೆದಿದೆ. ಮೊದಲ ಭೇಟಿಯಲ್ಲೆ ಪ್ರಧಾನಿ ಅವರಿಗೆ ಜಗದ್ಗುರು ಬಸವಣ್ಣನವರ ಭವ್ಯವಾದ ಪುತ್ಥಳಿ ನೀಡಿ ಮುಖ್ಯಮಂತ್ರಿಗಳು ಗೌರವಿಸಿದರು. ಈ ಸೌಜನ್ಯಯುತ ಭೇಟಿಯ ಸಂದರ್ಭದಲ್ಲಿ […]

Continue Reading

ಶಹಾಬಾದ್: ನಗರದ ವಿವಿಧ ಬಡಾವಣೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಸುದ್ದಿ ಸಂಗ್ರಹ ಶಹಾಬಾದ್ನಗರದ ಎಸ್-4 ಟೌನ್ ಫೀಡರ್ ವ್ಯಾಪ್ತಿಯಲ್ಲಿ ತುರ್ತು ವಿದ್ಯುತ್ ವಾಹಕ ಬದಲಾವಣೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ, ಜೂನ್ 12 ರಂದು ಶುಕ್ರವಾರ ಬೆಳಗ್ಗೆ 8:30 ರಿಂದ ಸಂಜೆ 5:30 ರವರೆಗೆ ನಗರದ ಪ್ರಮುಖ ಬಡಾವಣೆಯಲ್ಲಿ ವಿದ್ಯುತ್ ಸಂಪರ್ಕ ಇರುವುದಿಲ್ಲ ಎಂದು ಶಹಾಬಾದ ಜೆಸ್ಕಾಂ ಎಇಇ ಅಧಿಕಾರಿ ಸೈಯದ ಯೂನೂಸ್ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಜೂನ್ 12 ರಂದು ನಗರದ ಲಕ್ಷ್ಮಿ ಗಂಜ, ಶಾಸ್ತ್ರಿ ಚೌಕ, ನಾಲಾ ಟೇಕ್, ಅಪ್ಪರ ಮಡ್ಡಿ, […]

Continue Reading