ಮನಸ್ಸನ್ನು ಅರಳಿಸುವ ಶಕ್ತಿ ಸಂಗೀತಕ್ಕಿದೆ: ಡಾ.ಸಿದ್ಧತೋಟೇಂದ್ರ ಶ್ರೀ

ಚಿತ್ತಾಪುರ: ಸಂಗೀತಕ್ಕೆ ನೋವು, ದುಃಖ, ಆತಂಕ, ಖಿನ್ನತೆ ಮರೆಸುವ ಶಕ್ತಿಯಿದೆ, ಮಾನಸಿಕ ಆರೋಗ್ಯ ವೃದ್ಧಿಗೆ ಸಂಗೀತವು ಒಂದು ಸಾಧನವಾಗಿ ಕೆಲಸ ಮಾಡುತ್ತದೆ ಎಂದು ನಾಲವಾರದ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿ ಡಾ.ಸಿದ್ಧತೋಟೇಂದ್ರ ಮಹಾಸ್ವಾಮಿಗಳು ಹೇಳಿದರು. ದೀಪಾವಳಿ ಅಮಾವಾಸ್ಯೆ ಪ್ರಯುಕ್ತ ಮಂಗಳವಾರ ರಾತ್ರಿ ಶ್ರೀಮಠದ ಸಿದ್ಧತೋಟೇಂದ್ರ ಸುವರ್ಣ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಸಿಕ ಶಿವಾನುಭವ ಚಿಂತನ ಹಾಗೂ ಸಂಗೀತೋತ್ಸವ ಸಮಾರಂಭದಲ್ಲಿ ಸಾನಿಧ್ಯ ವಹಿಸಿ ಮಾತನಾಡಿದ ಅವರು, ವಚನ ಸಾಹಿತ್ಯ ದಾಸರ ಹಾಡುಗಳು, ಸರ್ವಜ್ಞರ ತ್ರಿಪದಿಗಳು, ಸ್ವರ ವಚನಗಳಿಗೆ ಭಾವಗೀತೆಗಳಿಗೆ ಸಂಗೀತ […]

Continue Reading

ಬಿ12 ಕೊರತೆಗೂ, ಪದೇ ಪದೆ ಉಗುರುಗಳು ಮುರಿಯುವುದಕ್ಕೂ ಸಂಬಂಧವಿದೆಯೆ ? ಇಲ್ಲಿದೆ ತಜ್ಞರು ನೀಡಿದ ಕಾರಣ

ಕೆಲವರಿಗೆ ಉಗುರು ಬಿಡುವುದು ಎಂದರೆ ಬಲು ಪ್ರೀತಿ. ಅದಕ್ಕೆ ನಾನಾ ರೀತಿಯಲ್ಲಿ ಸಿಂಗಾರ ಮಾಡಿ ಬಣ್ಣ ಬಣ್ಣದ ನೈಲ್ ಪೊಲಿಶ್ ಹಚ್ಚಿಕೊಳ್ಳುತ್ತಾರೆ. ಇದು ಹುಡುಗಿಯರಿಗೆ ಮಾತ್ರ ಸೀಮಿತವಾಗಿಲ್ಲ. ಕೆಲವು ಹುಡುಗರು ಕೂಡ ಉಗುರನ್ನು ಬೆಳೆಸುತ್ತಾರೆ. ಇದು ಕೈಗಳ ಅಂದವನ್ನು ಮತ್ತಷ್ಟು ಇಮ್ಮಡಿಗೊಳಿಸುತ್ತದೆ ಎಂಬುದು ಹಲವರ ನಂಬಿಕೆ ಆದರೆ ಕೆಲವರಿಗೆ ಸ್ವಲ್ಪ ಉಗುರು ಬರುವುದರೊಳಗೆ ಅದು ತನ್ನಿಂದ ತಾನಾಗಿಯೇ ಮುರಿದು ಹೋಗುತ್ತದೆ. ಈ ರೀತಿ ನಿಮ್ಮ ಉಗುರುಗಳು ಕೂಡ ದುರ್ಬಲವಾಗಿದ್ದರೆ ಅಥವಾ ಆಗಾಗ ಮುರಿದು ಹೋಗುತ್ತಿದ್ದರೆ ಅದಕ್ಕೆ ಕಾರಣ […]

Continue Reading

ದೀಪಾವಳಿ ಗಿಫ್ಟ್‌: ದುಬಾರಿ ಕಾರುಗಳನ್ನು ನೀಡಿ ಹೃದಯ ಶ್ರೀಮಂತಿಕೆ ಮೆರೆದ ಉದ್ಯಮಿ

ಚಂಡೀಗಢ: ಉದ್ಯೋಗಿಗಳ ಕಾರ್ಯಗಳನ್ನು ಗುರುತಿಸುವ ವಿನೂತನ ಮಾದರಿಯನ್ನು ಕಳೆದ ಕೆಲ ವರ್ಷಗಳಿಂದ ಅನುಸರಿಸಿಕೊಂಡು ಬರುತ್ತಿರುವ ಔಷಧ ತಯಾರಿಕಾ ಕಂಪನಿಯ ಮಾಲೀಕ ಎಂ.ಕೆ ಭಾಟಿಯಾ, ಈ ದೀಪಾವಳಿಗೂ ಕಂಪನಿ ನೌಕರರಿಗೆ ಭರ್ಜರಿ ಉಡುಗೊರೆಯನ್ನು ನೀಡಿದ್ದಾರೆ. ಬೋನಸ್, ಸ್ವೀಟ್ ಬದಲಿಗೆ ದುಬಾರಿ ಕಾರುಗಳನ್ನೇ ಉಡುಗೊರೆಯಾಗಿ ನೀಡಿ ಹೃದಯ ಶ್ರೀಮಂತಿಕೆ ಮೆರೆದಿದ್ದಾರೆ. ಹರಿಯಾಣದ ಖ್ಯಾತ ಉದ್ಯಮಿ ಹಾಗೂ ಮಿಟ್ಸ್ ಕಾರ್ಟ್ ಸಂಸ್ಥೆಯ ಮಾಲೀಕ ಎಂ.ಕೆ ಭಾಟಿಯಾ ನೌಕರರಿಗೆ ಈ ಬಾರಿಯೂ ದುಬಾರಿ ಕಾರು ಗಿಫ್ಟ್ ಮಾಡುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ತಮ್ಮ […]

Continue Reading

ಬ್ರಿಟಿಷರಿಗೆ ಸಿಂಹಸ್ವಪ್ನವಾಗಿ ಕಾಡಿದ್ದ ಆಜಾದ್ ಹಿಂದ್ ಫೌಜ್: ಡಾ.ರಾಜಶೇಖರ ಪಾಟೀಲ

ಕಲಬುರಗಿ: ದೇಶಕ್ಕೆ ಸ್ವಾತಂತ್ರ ನೀಡಬೇಕು ಎಂದು ಪ್ರಬಲವಾಗಿ ವಾದಿಸಿದ ನೇತಾಜಿಯವರ ನೇತೃತ್ವದ ಆಜಾದ್ ಹಿಂದ್ ಫೌಜ್, ಬ್ರಿಟಿಷರ ಜೊತೆಗೆ ಹೋರಾಟ ಮಾಡಿತು ಎಂದು ಚಿಂತಕ ಡಾ.ರಾಜಶೇಖರ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಸಂಜೆ ಜರುಗಿದ ‘83ನೇ ಆಜಾದ್ ಹಿಂದ್ ಫೌಜ್’ನ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಅವರು, ವಿದೇಶಿಗಳಲ್ಲಿ ಬಂದಿತರಾಗಿದ್ದ ಭಾರತೀಯರನ್ನು ನೇತಾಜಿಯವರು ಒಗ್ಗೂಡಿಸಿ, ಬ್ರಿಟಿಷರ ವಿರುದ್ಧ ಹೋರಾಡಲು ಪ್ರೇರಣೆ ನೀಡಿದರು. ದೇಶದ ಸ್ವಾತಂತ್ರಕ್ಕಾಗಿ ನೇತಾಜಿಯವರ ಕೊಡುಗೆ […]

Continue Reading

ರಾಷ್ಟ್ರೀಯ ಕರಕುಶಲ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಶಿಲ್ಪಿಗೆ ಗೌರವ

ಕಲಬುರಗಿ: ಶಿಲ್ಪ ಕಲಾವಿದ, ಸಾಂಪ್ರದಾಯಿಕ ಕುಸುರಿ ಕೆತ್ತನೆಯ ಪರಿಣಿತ ಚಂದ್ರಶೇಖರ ವೈ.ಶಿಲ್ಪಿ ಅವರಿಗೆ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸತ್ಕರಿಸಿ, ಅಭಿನಂದಿಸಲಾಯಿತು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ನಿವಾಸಿ ಚಂದ್ರಶೇಖರ ವೈ.ಶಿಲ್ಪಿ ಅವರಿಗೆ ಕೇಂದ್ರ ಜವಳಿ ಸಚಿವಾಲಯದ 2024ನೇ ಸಾಲಿನ “ರಾಷ್ಟ್ರೀಯ ಕರಕುಶಲ ಪ್ರಶಸ್ತಿ” ದೊರೆತಿರುವ ಪ್ರಯುಕ್ತ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಸಂಜೆ ಶಿಲ್ಪಿಯವರಿಗೆ ಸತ್ಕರಿಸಿ, ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಬಳಗದ ಅಧ್ಯಕ್ಷ ಎಚ್.ಬಿ ಪಾಟೀಲ, ಸದಸ್ಯ ಅಸ್ಲಾಂ ಶೇಖ್, ಶಿಲ್ಪಿಯವರ ಕುಟುಂಬ […]

Continue Reading

ಅಭಿವೃದ್ಧಿಯಲ್ಲಿ ಅಂಕಿ-ಅಂಶಗಳ ಪಾತ್ರ ಪ್ರಮುಖ: ಎಚ್.ಬಿ ಪಾಟೀಲ

ಕಲಬುರಗಿ: ರಾಷ್ಟ್ರದ ಸಾಮಾಜಿಕ, ಆರ್ಥಿಕ ಸಮಸ್ಯೆಗಳಿಗೆ ನಿಖರವಾದ ಮಾಹಿತಿ ನೀಡುವ ಮೂಲಕ ಅವುಗಳಿಗೆ ಪರಿಹಾರ ದೊರಕಿಸಿಕೊಡುವಲ್ಲಿ ಅಂಕಿ-ಅಂಶಗಳು ಪ್ರಮುಖ ಪಾತ್ರ ನಿರ್ವಹಿಸುತ್ತವೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ಸಂಖ್ಯಾಶಾಸ್ತ್ರ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಂಖ್ಯಾಶಾಸ್ತ್ರ ರಾಷ್ಟ್ರದ ಸಂಪನ್ಮೂಲಗಳ ಸದ್ಬಳಕೆಯ ಬಗ್ಗೆ ವಿವರಣೆ ನೀಡುತ್ತದೆ. ಯುವಕರು ಸಂಖ್ಯಾಶಾಸ್ತ್ರದ […]

Continue Reading

ಗಂಡನ ಮನೆಯಲ್ಲಿ ಕಿರುಕುಳ ಆರೋಪ: ನದಿಗೆ ಹಾರಿ ಪ್ರಾಣಬಿಟ್ಟ ತಾಯಿ, ಮಗಳು

ಹಾವೇರಿ: ಪತಿ ಕುಟುಂಬ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು, ಮಹಿಳೆ ತನ್ನ ಮಗಳ ಜೊತೆ ವರಾದ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ ತಾಲೂಕಿನ ವರದಾಹಳ್ಳಿ ಗ್ರಾಮದ ಬಳಿ ನಡೆದಿದೆ. ಸವಿತಾ ನಾಗರಾಜ್ ಉಳ್ಳಾಗಡ್ಡಿ (38) ಹಾಗೂ ಕಾವ್ಯಾ (12) ಆತ್ಮಹತ್ಯೆಗೆ ಶರಣಾದ ತಾಯಿ, ಮಗಳು. ಗಂಡನ ಮನೆಯಲ್ಲಿ ದಿನನಿತ್ಯ ಭಿನ್ನಾಭಿಪ್ರಾಯ ಹಾಗೂ ಕಲಹಗಳು ನಡೆಯುತ್ತಿದ್ದವು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ರವಿವಾರ (ಅ.19) ಮಧ್ಯಾಹ್ನ ಸುಮಾರು 3 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. […]

Continue Reading

ಕರ್ನಾಟಕದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧಾರ

ಶಿವಮೊಗ್ಗ: ಸರ್ಕಾರಿ ಶಾಲೆಗಳಿಗೆ ಸೇರಬೇಕೆಂದು ಕಾದು ಕುಳಿತ ಶಿಕ್ಷಕರಿಗೆ ಸರ್ಕಾರದಿಂದ ಸಿಹಿ ಸುದ್ದಿ ಬಂದಿದೆ. ಕರ್ನಾಟಕದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23 ರಿಂದ ನವೆಂಬರ್ 9ರವರೆಗೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿಸೆಂಬರ್ 7ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಅನುದಾನಿತ […]

Continue Reading

ಸೇಡಂ ಆರ್‌ಎಸ್ಎಸ್ ಪಥಸಂಚಲನದಲ್ಲಿ ಸರ್ಕಾರಿ ವೈದ್ಯ ಭಾಗಿ

ಕಲಬುರಗಿ: ಸೇಡಂನಲ್ಲಿ ರವಿವಾರ ನಡೆದ ಆರ್‌ಎಸ್ಎಸ್ ಪಥಸಂಚಲನ ಕಾರ್ಯಕ್ರಮದಲ್ಲಿ ಸರ್ಕಾರಿ ವೈದ್ಯರೊಬ್ಬರು ಭಾಗಿಯಾಗಿದ್ದಾರೆ. ಸೇಡಂ ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ.ನಾಗರಾಜ್ ಮನ್ನೆ ಗಣವೇಶಧಾರಿಯಾಗಿ ಪಥ ಸಂಚಲನದಲ್ಲಿ ಭಾಗಿಯಾಗಿದ್ದಾರೆ. ಪಥಸಂಚಲನದಲ್ಲಿ ಭಾಗಿಯಾದ ವೈದ್ಯರ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅಕ್ಟೋಬರ್ 12 ರಂದು ರಾಯಚೂರಿನ ಲಿಂಗಸುಗೂರು ಪಟ್ಟಣದಲ್ಲಿ ನಡೆದ ಪಥಸಂಚಲನ ಕಾರ್ಯಕ್ರಮದಲ್ಲಿ ರೋಡಲಬಂಡಾ ಗ್ರಾಮದ ಪಿಡಿಒ ಪ್ರವೀಣ್ ಕುಮಾರ್ ಭಾಗವಹಿಸಿದ್ದಕ್ಕೆ ಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ.ಅರುಂಧತಿ ಅವರು ಇಲಾಖಾ ತನಿಖೆ ಕಾಯ್ದಿರಿಸಿ ಅಮಾನತು ಮಾಡಿದ್ದರು. […]

Continue Reading

ರಾಜ್ಯದ 10 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ದೀಪಾವಳಿ ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿಗೆ ಯೆಲ್ಲೋ ಅಲರ್ಟ್‌ ಜಾರಿಯಾಗಿದ್ದು ಮಧ್ಯಾಹ್ನ ಅಥವಾ ಸಂಜೆ ಮಳೆ ಸುರಿಯುವ ಸಾಧ್ಯತೆಯಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಕೋಲಾರ, ಹಾಸನ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಿಗೂ ಯಲ್ಲೋ ಅಲರ್ಟ್ ಘೋಷಣೆಯಾಗಿದೆ. […]

Continue Reading