ಕೋವಿಡ್‌ಗಿಂತಲೂ ಡೆಡ್ಲಿ ಎಬೋಲಾ ವೈರಸ್‌ ಆತಂಕ: ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ

ಸುದ್ದಿ ಸಂಗ್ರಹ ನವದೆಹಲಿ/ಬೆಂಗಳೂರುಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್‌ ಹಾವಳಿ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ. ಈಗಾಗಲೆ ರಾಷ್ಟ್ರದ ರಾಜಧಾನಿ ನವದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಬೋಲಾ ಕುರಿತು ನೀಡಲಾಗಿದ್ದು, ಹೈ-ರಿಸ್ಕ್‌ ದೇಶಗಳ ಪ್ರಯಾಣಿಕರಿಗೆ ಹಲವು ಸೂಚನೆಗಳನ್ನ ನೀಡಲಾಗಿದೆ. ಈ ಮಧ್ಯೆ ದೆಹಲಿಯಲ್ಲಿ ನಡೆಯಬೇಕಾಗಿದ್ದ ಭಾರತ-ಆಫ್ರಿಕಾ ಒಕ್ಕೂಟದ ಶೃಂಗಸಭೆಯನ್ನೂ ಮುಂದೂಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಈ ಶೃಂಗಸಭೆಯನ್ನು ಮುಂದೂಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ಈ ಬೆನ್ನಲ್ಲೆ ರಾಜ್ಯದಲ್ಲಿ ಕಟ್ಟೆಚ್ಚರ […]

Continue Reading

ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ ಪಡೆದ ಕೈ ಸರ್ಕಾರ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗುತ್ತಿದೆ ಎನ್ನುವ ಅಭಿಪ್ರಾಯ ಕೇಳಿಬಂದಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲಬುರಗಿಯ ಆಳಂದದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ ಪಡೆದಿದೆ. ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್ ಮನವಿ ಮೇರೆಗೆ ಈ ಕೇಸ್ ವಾಪಸ್ ಪಡೆದುಕೊಂಡಿದೆ. ಈ ಮೂಲಕ ಮುಸ್ಲಿಂ ಯುವಕರು ಹಾಗೂ ಕೆಲ ಮುಖಂಡರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಏನಾಗಿತ್ತು ?2022ರ ಶಿವರಾತ್ರಿಯಂದು ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗದ […]

Continue Reading

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭಾರಿ ಅವಘಡ: ರನ್‌ವೇಗೆ ತಾಗಿದ ಏರ್ ಇಂಡಿಯಾ ವಿಮಾನದ ಹಿಂಭಾಗ

ಸುದ್ದಿ ಸಂಗ್ರಹ ಬೆಂಗಳೂರುದೆಹಲಿಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಬಾಲವು ನೆಲಕ್ಕೆ ಅಪ್ಪಳಿಸಿದ್ದು, ಭಾರಿ ಅವಘಡ ತಪ್ಪಿದೆ. ಇಂದು ಬೆಳಿಗ್ಗೆ (ಮೆ.21) 181 ಪ್ರಯಾಣಿಕರನ್ನು ಹೊತ್ತು ದೆಹಲಿಯಿಂದ ಆಗಮಿಸುತ್ತಿದ್ದ ಏರ್ ಇಂಡಿಯಾ AI2651 ವಿಮಾನವು ಬೆಂಗಳೂರಿನಲ್ಲಿ ಲ್ಯಾಂಡಿಂಗ್ ಆಗುತ್ತಿತ್ತು. ಈ ವೇಳೆ ಇನ್ನೊಂದು ವಿಮಾನ ಅದೆ ರನ್‌ವೇಯಿಂದ ಟೇಕ್-ಆಫ್ ಆಗುತ್ತಿತ್ತು. ಇದರಿಂದಾಗಿ ಗಾಳಿಯಲ್ಲಿ ಅಸಮತೋಲನ ಉಂಟಾದಂತೆ ಕಂಡುಬಂದಿದೆ. ಕೂಡಲೆ ಪೈಲಟ್ ಮುನ್ನೆಚ್ಚರಿಕೆ ಕ್ರಮವಾಗಿ ಲ್ಯಾಂಡಿಂಗ್ ಕೈಬಿಟ್ಟು ವಿಮಾನವನ್ನು ಮತ್ತೆ ಟೇಕ್ ಆಫ್ […]

Continue Reading

ಕಲಬುರಗಿ–ಬೆಂಗಳೂರು ವಿಮಾನಯಾನ ಪುನರಾರಂಭ

ಸುದ್ದಿ ಸಂಗ್ರಹ ಕಲಬುರಗಿಕಳೆದ ಎಂಟು ತಿಂಗಳಿಂದ ಸ್ಥಗಿತಗೊಂಡಿರುವ ಕಲಬುರಗಿ ಮತ್ತು ಬೆಂಗಳೂರು ನಡುವಣ ನಿತ್ಯ ವಿಮಾನ ಸೇವೆಗೆ ಜೂನ್‌ 10ರಿಂದ ಮತ್ತೆ ಚಾಲನೆ ಸಿಗಲಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಸ್ಟಾರ್‌ ಏರ್‌ ಸಂಸ್ಥೆಯು, ನಿತ್ಯ ಸಂಜೆ 6 ಗಂಟೆಗೆ ಬೆಂಗಳೂರಿನಿಂದ ಹೊರಟು ಸಂಜೆ 7.10ಕ್ಕೆ ಕಲಬುರಗಿ ತಲುಪಲಿದೆ. ಸಂಜೆ 7.40ಕ್ಕೆ ಕಲಬುರಗಿಯಿಂದ ಹೊರಟು ರಾತ್ರಿ 8.50ಕ್ಕೆ ಬೆಂಗಳೂರು ತಲುಪಲಿದೆ ಎಂದು ಸ್ಪಷ್ಟಪಡಿಸಿದೆ. ಅಲ್ಲದೆ ಜೂನ್ 10ರಿಂದ ಬುಕಿಂಗ್‌ ಅವಕಾಶ ನೀಡಿದೆ. ಈ ನಿರ್ಧಾರವು […]

Continue Reading

ಮೇ.26 ರಿಂದ ಕೇರಳಕ್ಕೆ ಮುಂಗಾರು ಪ್ರವೇಶ: ಎಲ್‌ ನಿನೊ ಪರಿಣಾಮದಿಂದ ದುರ್ಬಲ ಸಾಧ್ಯತೆ

ಸುದ್ದಿ ಸಂಗ್ರಹ ನವದೆಹಲಿಈ ವರ್ಷದ ನೈಋತ್ಯ ಮುಂಗಾರು ಮೇ.26 ರಿಂದ ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರತಿವರ್ಷ ಸಾಮಾನ್ಯವಾಗಿ ಜೂನ್ 1ರಂದು ಕೇರಳಕ್ಕೆ ಮುಂಗಾರು ಆಗಮಿಸುತ್ತದೆ. ಆದರೆ ಈ ಬಾರಿ ಐದು ದಿನ ಮುಂಚಿತವಾಗಿ ಆರಂಭವಾಗುವ ನಿರೀಕ್ಷೆ ಇದೆ. ಹವಾಮಾನ ಇಲಾಖೆಯ ಪ್ರಕಾರ, ಮೇ 26ಕ್ಕೆ ನಾಲ್ಕು ದಿನಗಳ ವ್ಯತ್ಯಾಸದ ಸಾಧ್ಯತೆಯೊಂದಿಗೆ ಮುಂಗಾರು ಕೇರಳ ಪ್ರವೇಶಿಸಬಹುದು ಎಂದು ಅಂದಾಜಿಸಲಾಗಿದೆ. ಕಳೆದ ವರ್ಷವೂ ಮೇ 24ರಂದು ಮುಂಗಾರು ಕೇರಳ ಪ್ರವೇಶಿಸಿತ್ತು. […]

Continue Reading

ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಶೈಕ್ಷಣಿಕ ಪ್ರವಾಸಕ್ಕೆ ಕಟ್ಟುನಿಟ್ಟಿನ ನಿಯಮ ಜಾರಿ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಶೈಕ್ಷಣಿಕ ಪ್ರವಾಸಗಳಿಗೆ ಇದೀಗ ಕಟ್ಟುನಿಟ್ಟಿನ ನಿಯಮಗಳು ಜಾರಿಯಾಗಿವೆ. ಇತ್ತೀಚೆಗೆ ವಿದ್ಯಾರ್ಥಿಗಳ ಪ್ರವಾಸ ಬಸ್ ಅಪಘಾತವಾದ ಹಿನ್ನೆಲೆ, ಕಾಲೇಜು ಶಿಕ್ಷಣ ಇಲಾಖೆ ಸುರಕ್ಷತೆಗೆ ಆದ್ಯತೆ ನೀಡಿ ಹೊಸ ಮಾರ್ಗಸೂಚಿ ಹೊರಡಿಸಿದೆ. ಶೈಕ್ಷಣಿಕ ಪ್ರವಾಸ ವಿದ್ಯಾರ್ಥಿಗಳ ಬದುಕಿನಲ್ಲಿ ಹೊಸ ಅನುಭವ, ಸ್ನೇಹ ಮತ್ತು ಜ್ಞಾನ ನೀಡುವ ವಿಶೇಷ ಕ್ಷಣ. ಆದರೆ ಇತ್ತೀಚಿನ ಕೆಲವು ಅವಘಡಗಳು ಕಾಲೇಜು ಪ್ರವಾಸಗಳ ಸುರಕ್ಷತೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದ್ದವು. ಇದೆ ಕಾರಣದಿಂದಾಗಿ ರಾಜ್ಯದ ಸರ್ಕಾರಿ ಪದವಿ […]

Continue Reading

ವಿಶ್ವದಲ್ಲೆ ಅತ್ಯಂತ ಬಿಸಿ ನಗರ ಎಂಬ ಕುಖ್ಯಾತಿಗೆ ಪಾತ್ರವಾದ ಬಂಡಾ: 75 ವರ್ಷಗಳ ದಾಖಲೆ ಬ್ರೇಕ್

ಸುದ್ದಿ ಸಂಗ್ರಹ ಲಕ್ನೋಉತ್ತರ ಪ್ರದೇಶದ ಬುಂದೇಲ್‌ಖಂಡ ಪ್ರದೇಶದ ಬಂಡಾ ನಗರ ವಿಶ್ವದಲ್ಲೆ ಅತ್ಯಂತ ಗರಿಷ್ಠ ತಾಪಮಾನ ದಾಖಲಾದ ನಗರ ಎಂಬ ಕುಖ್ಯಾತಿಗೆ ಪಾತ್ರವಾಗಿದೆ. ಇತ್ತೀಚೆಗಷ್ಟೆ ಬಂಡಾ ನಗರದಲ್ಲಿ ಬರೋಬ್ಬರಿ 48 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಈ ಮೂಲಕ ವಿಶ್ವದಲ್ಲೆ ಅತ್ಯಂತ ಗರಿಷ್ಠ ತಾಪಮಾನ ದಾಖಲಾದ ನಗರ ಎಂಬ ಕುಖ್ಯಾತಿಗೆ ಪಾತ್ರವಾಗಿದೆ. ಬಂಡಾ ನಗರದಲ್ಲಿ ಗರಿಷ್ಠ ಮಟ್ಟದ ತಾಪಮಾನ ದಾಖಲಾಗಿರುವುದು ಇದೆ ಮೊದಲಲ್ಲ. ಆದರೆ ಈ ಬಾರಿಯ ತಾಪಮಾನ ಹಳೆಯ ಎಲ್ಲಾ ದಾಖಲೆಗಳನ್ನು ಮುರಿದಿದೆ. ಇದಕ್ಕೂ ಮುನ್ನ […]

Continue Reading

302 ಗ್ರಾಂ ಗಾಂಜಾ ಜಪ್ತಿ: ಆರೋಪಿ ಬಂಧನ

ಸುದ್ದಿ ಸಂಗ್ರಹ ಕಲಬುರಗಿಇಲ್ಲಿನ ತಾಜನಗರ 2ನೇ ಕ್ರಾಸ್ ಮನೆಯೊಂದರ ಮೇಲೆ ದಾಳಿ ಮಾಡಿದ ಅಬಕಾರಿ ಅಧಿಕಾರಿಗಳು ಆರೋಪಿಯನ್ನು ಬಂಧಿಸಿ, 302 ಗಾಂಜಾ ಜಪ್ತಿ ಮಾಡಿಕೊಂಡಿದ್ದಾರೆ. ಅಬ್ದುಲ್‌ ರಜಾಕ್‌ ಬಂಧಿತ ಆರೋಪಿ, ಅಬಕಾರಿ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಸಣ್ಣದಾದ 90 ಪ್ಲಾಸ್ಟಿಕ್‌ ಪೌಚ್‌ಗಳು ದೊರೆತಿವೆ. ಅದರಲ್ಲಿ ಹೂ, ಬೀಜ ಮತ್ತು ಎಲೆಗಳಿಂದ ಕೂಡಿದ ಒಣ ಗಾಂಜಾ ಇದೆ. ಆರೋಪಿಯು ವ್ಯಸನಿಗಳಿಗೆ ಮಾರುವ ಉದ್ದೇಶದಿಂದ ಗಾಂಜಾ ಸಂಗ್ರಹಿಸಿದ್ದ ಎಂದು ಮೂಲಗಳು ಹೇಳಿವೆ. ಕಾರ್ಯಾಚರಣೆಯಲ್ಲಿ ಅಬಕಾರಿ ಉಪ ಅಧೀಕ್ಷಕ ಮಲ್ಲಿಕಾರ್ಜುನ ದೊಡ್ಡಮನಿ, […]

Continue Reading

ಬೆಂಗಳೂರಲ್ಲಿ ಅತಿದೊಡ್ಡ ಚಿನ್ನ ಲೂಟಿ: ಹೋಲ್‌ಸೇಲ್ ಖರೀದಿ ನೆಪದಲ್ಲಿ 1 ಕೆಜಿ 850 ಗ್ರಾಂ ಚಿನ್ನ ಕಳ್ಳತನ

ಸುದ್ದಿ ಸಂಗ್ರಹ ಬೆಂಗಳೂರುಹೋಲ್‌ಸೇಲ್ ಚಿನ್ನ ಖರೀದಿಸುವುದಾಗಿ ನಂಬಿಸಿ 3 ಕೋಟಿ ರೂ. ಮೌಲ್ಯದ 1 ಕೆಜಿ 850 ಗ್ರಾಂ ಚಿನ್ನಾಭರಣ ಕಳವು ಮಾಡಿ ಪರಾರಿಯಾದ ಘಟನೆ ಬೆಂಗಳೂರಿನ ಮಲ್ಲೇಶ್ವರದಲ್ಲಿ ನಡೆದಿದೆ. ಪರೇಶ್ ಸೋನಿ, ಶ್ಯಾಮ್ ಮತ್ತು ಚಂದ್ರಶೇಖರ್ ರಾವ್ ಕಳ್ಳತನ ಮಾಡಿದ ಆರೋಪಿಗಳು. ನಗರ್ತಪೇಟೆಯ ಮೆಹ್ತಾ ಗೋಲ್ಡ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಸೇಲ್ಸ್ ಮ್ಯಾನೇಜರ್ ಆಗಿರುವ ಮಹೇಂದ್ರಕುಮಾರ್ ಜೈನ್ ನೀಡಿದ ದೂರಿನ ಮೇರೆಗೆ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌. ಪರೇಶ್ ಸೋನಿ ಎಂಬಾತ ತಾನು ಹೋಲ್‌ಸೇಲ್ ಚಿನ್ನದ […]

Continue Reading

ರಾಜ್ಯದಲ್ಲಿ ಜೋರಾದ ಮುಂಗಾರು ಪೂರ್ವ ಮಳೆಯಬ್ಬರ: ಹಲವೆಡೆ ವರುಣಾರ್ಭಟಕ್ಕೆ ಅವಾಂತರ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಬ್ಬರ ಜೋರಾಗಿದ್ದು, ಗುಡುಗು ಸಹಿತ ಬಿರುಗಾಳಿ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಬೀದರ್ ತಾಲೂಕಿನ ಅಣದೂರು ವಾಡಿ ಗ್ರಾಮದ ಬಳಿ ಇರುವ ಮಾಂಜ್ರಾ ವಾಟರ್ ಪಾರ್ಕ್ನಲ್ಲಿ ಗೋಡೆ ಕುಸಿದು ಬಿದ್ದು ಅನಾಹುತ ಸಂಭವಿಸಿದೆ. ಮಕ್ಕಳು, ಮಹಿಳೆಯರು ಸೇರಿ 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ. ಸದ್ಯ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಬೀದರ್ ತಾಲೂಕಿನ ಕಮಠಾಣ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮೂವರು ಮಕ್ಕಳು ಗಾಯಗೊಂಡಿದ್ದಾರೆ. ಗದಗ ಜಿಲ್ಲೆಯಲ್ಲಿ ಬಿರುಗಾಳಿ […]

Continue Reading