ಮಂತ್ರಾಲಯ: ಆ.27ರಿಂದ ರಾಯರ 355ನೇ ಆರಾಧನಾ ಮಹೋತ್ಸವ

ಸುದ್ದಿ ಸಂಗ್ರಹ ರಾಯಚೂರುಆಗಸ್ಟ್ 27ರಿಂದ ಸೆಪ್ಟೆಂಬರ್ 2ರವರೆಗೆ 7 ದಿನಗಳ ಕಾಲ ಗುರು ರಾಯರ 355ನೇ ಆರಾಧನಾ ಮಹೋತ್ಸವ ಅದ್ಧೂರಿಯಾಗಿ ನಡೆಯಲಿದೆ ಎಂದು ಗುರುರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಹೇಳಿದ್ದಾರೆ. ಮಂತ್ರಾಲಯದಲ್ಲಿ ಮಾತನಾಡಿದ ಅವರು, ಆರಾಧನಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆದಿವೆ ಎಂದರು. ಆಗಸ್ಟ್ 29, 30, 31ರಂದು ಪರಿಮಳ ತೀರ್ಥ ಪುಷ್ಕರಣಿಯಲ್ಲಿ ಮೂರು ದಿನ ರಾತ್ರಿ ವೇಳೆ ತೆಪ್ಪೋತ್ಸವ ನಡೆಯಲಿದೆ. ಆಗಸ್ಟ್ 29ರಂದು ರಾಯರ ಪೂರ್ವಾರಾಧನೆ ಕಾರ್ಯಕ್ರಮ ನಡೆಯಲಿದ್ದು, ವಿಶೇಷ ಪೂಜಾ […]

Continue Reading

ಮಂಗಳೂರಿನ ಅಶ್ಮಿತ್‌ಗೆ ʻಸರಿಗಮಪʼ ಲಿಟಲ್‌ ಚಾಂಪ್ಸ್‌ ಕಿರೀಟ: 20 ಲಕ್ಷ ಬಹುಮಾನ

ಜೀ ಕನ್ನಡದ ಜನಪ್ರಿಯ ರಿಯಾಲಿಟಿ ಶೋ ʻಸರಿಗಮಪ ಲಿಟಲ್‌ ಚಾಂಪ್ಸ್‌ʼ ಸೀಸನ್‌ ಅದ್ಧೂರಿಯಾಗಿ ತೆರೆ ಕಂಡಿದ್ದು, ಮಂಗಳೂರಿನ ಬಾಲಕ ಅಶ್ಮಿತ್‌ ಈ ಬಾರಿಯ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ. ಸುದೀರ್ಘ ಸಂಗೀತ ಪ್ರಯಾಣದ ನಂತರ, ಅಂತಿಮ ಮಹಾಸಂಗ್ರಮದಲ್ಲಿ ತಮ್ಮ ನಾದಸುಧೆಯಿಂದ ಜಡ್ಜಸ್‌ ಮತ್ತು ವೀಕ್ಷಕರ ಮನಗೆದ್ದು ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. ಫಿನಾಲೆ ಕದನದಲ್ಲಿ ಜಯಭೇರಿ ಬಾರಿಸಿದ ಅಶ್ಮಿತ್‌ಗೆ ಆಕರ್ಷಕ ವಿನ್ನಿಂಗ್‌ ಟ್ರೋಫಿಯ ಜೊತೆಗೆ 20 ಲಕ್ಷ ರೂ ನಗದು ಬಹುಮಾನವನ್ನು ನೀಡಿಲಾಗಿದೆ. ಅಶ್ಮಿತ್‌ಗೆ ತೀವ್ರ ಪೈಪೋಟಿ ನೀಡಿದ ಮಂಗಳೂರಿನ ಮತ್ತೊಬ್ಬ […]

Continue Reading

ವಿದ್ಯುತ್ ಕಂಬಕ್ಕೆ ಪಿಕಪ್ ಡಿಕ್ಕಿ: 3 ಜನ ಕಾರ್ಮಿಕರ ಸಾವು, 15 ಜನರಿಗೆ ಗಾಯ

ಸುದ್ದಿ ಸಂಗ್ರಹ ಯಾದಗಿರಿವಿದ್ಯುತ್ ಕಂಬಕ್ಕೆ ಬುಲೆರೋ ಪಿಕಪ್ ಡಿಕ್ಕಿ ಹೊಡೆದ ಪರಿಣಾಮ 3 ಜನ ಕಾರ್ಮಿಕರು ಸಾವನ್ನಪ್ಪಿದ್ದು, 15 ಜನ ಗಾಯಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಡ್ನಾಳ್ ಗ್ರಾಮದ ಬಳಿ ನಡೆದಿದೆ. ಭಾಗ್ಯಶ್ರೀ (35), ಸತ್ಯಮ್ಮ (30), ಹೊನ್ನಿಂಗಮ್ಮ (18) ಮೃತ ಕಾರ್ಮಿಕರು. ಚಾಲಕನ ನಿಯಂತ್ರಣ ತಪ್ಪಿ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮೂವರು ಕಾರ್ಮಿಕರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಕಾರ್ಮಿಕರನ್ನು ಶಹಾಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. […]

Continue Reading

40 ಕಿ.ಮೀ ಚೇಸಿಂಗ್​​​: ಪ್ರಾಣ ಪಣಕ್ಕಿಟ್ಟು ಅಂತಾರಾಜ್ಯ ದನಗಳ್ಳರ​​ ಹೆಡೆಮುರಿ ಕಟ್ಟಿದ ಯಾದಗಿರಿ ಪೊಲೀಸರು

ಸುದ್ದಿ ಸಂಗ್ರಹ ಯಾದಗಿರಿಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ರೈತರ ನಿದ್ದೆಗೆಡಿಸಿದ್ದ ಅಂತಾರಾಜ್ಯ ದನಗಳ್ಳರ ಖತರ್ನಾಕ್ ಗ್ಯಾಂಗ್​​ನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ಬಂಧಿಸಿದ್ದಾರೆ . ದನಗಳನ್ನು ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಕಳ್ಳರನ್ನು ಬರೋಬ್ಬರಿ 40 ಕಿ.ಮೀ ಬೆನ್ನಟ್ಟಿ ಖೆಡ್ಡಾ ತೋಡುವಲ್ಲಿ ಯಾದಗಿರಿ ಪೊಲೀಸರು ಯಶಸ್ವಿಯಾಗಿದ್ದಾರೆ. ನಡೆದಿದ್ದೇನು ?ಕಳೆದ ಎರಡು ವರ್ಷಗಳಿಂದ ವಡಗೇರ ತಾಲೂಕು ಸೇರಿದಂತೆ ಜಿಲ್ಲೆಯ ಹಲವೆಡೆ ಈ ಗ್ಯಾಂಗ್ ನಿರಂತರವಾಗಿ ಕೈಚಳಕ ತೋರುತ್ತಿತ್ತು. ಮನೆಗಳ ಮುಂದೆ ಹಾಗೂ ಕೊಟ್ಟಿಗೆಯಲ್ಲಿ ಕಟ್ಟಲಾಗಿದ್ದ ರಾಸುಗಳಿಗೆ ಅರವಳಿಕೆ (ನಿದ್ದೆ ಬರುವ) ಇಂಜೆಕ್ಷನ್ […]

Continue Reading

ಬಿಜೆಪಿಗೆ ದೇಶದ ವಿಭಜಿಸುವ ಹುನ್ನಾರ: ವಂದೇ ಮಾತರಂ ವಿವಾದಕ್ಕೆ ಯತಿಂದ್ರ ಟೀಕೆ

ಸುದ್ದಿ ಸಂಗ್ರಹ ಕಲಬುರಗಿವಂದೇ ಮಾತರಂ ಹೆಸರಿನಲ್ಲಿ ಬಿಜೆಪಿಯವರು ಧರ್ಮದ ಆಧಾರದ ಮೇಲೆ ದೇಶವನ್ನು ವಿಭಜಿಸಲು ಬಯಸುತ್ತಿದ್ದಾರೆ ಎಂದು ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಟೀಕಿಸಿದರು. ನಗರದ ಐವಾನ್‌–ಎ–ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷದ ಸಭೆಗಳಲ್ಲಿ ವಂದೇ ಮಾತರಂ ಅನ್ನು ಅಳವಡಿಸಿಕೊಂಡ ಮೊಟ್ಟ ಮೊದಲ ಪಕ್ಷ ಕಾಂಗ್ರೆಸ್‌. ವಂದೇ ಮಾತರಂ ರಾಷ್ಟ್ರೀಯ ಗೀತೆ ಮಾಡಿದ್ದು ಕೂಡ ಕಾಂಗ್ರೆಸ್‌ ಪಕ್ಷ. 1950ರಲ್ಲಿ ಈ ತೀರ್ಮಾನವಾಗಿತ್ತು. ಆಗ ವಂದೇ ಮಾತರಂನ ಎರಡು ಚರಣಗಳನ್ನಷ್ಟೆ ರಾಷ್ಟ್ರೀಯ ಗೀತೆಯಾಗಿ ಪರಿಗಣಿಸಲು ನಿರ್ಧರಿಸಲಾಗಿತ್ತು. ನಮ್ಮ […]

Continue Reading

ಹೊಸ ಸಿಮ್ ಪಡೆಯಲು ಇನ್ನುಮುಂದೆ ಬಯೋಮೆಟ್ರಿಕ್ ಪರಿಶೀಲನೆ ಕಡ್ಡಾಯ

ಸುದ್ದಿ ಸಂಗ್ರಹ ನವದೆಹಲಿಹೊಸ ಸಿಮ್ ಕಾರ್ಡ್ ಪಡೆಯಲು ಇನ್ನುಮುಂದೆ ಬಯೋಮೆಟ್ರಿಕ್ ಪರಿಶೀಲನೆ ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶಿಸಿದೆ. ಕೇಂದ್ರದ ಆದೇಶದ ಹಿನ್ನೆಲೆ ಹೊಸ ಸಿಮ್ ಕಾರ್ಡ್‌ ಪಡೆಯುವ ಮುನ್ನ ಗ್ರಾಹಕರು ಬಯೋಮೆಟ್ರಿಕ್ ಪರಿಶೀಲಿಸಬೇಕು. ಗ್ರಾಹಕರ ಮಾಹಿತಿ ಅಪ್‌ಡೇಟ್ ಮತ್ತು ಮರುಪರಿಶೀಲನೆ ಸಂದರ್ಭದಲ್ಲೂ ಬಯೋಮೆಟ್ರಿಕ್ ವೆರಿಫಿಕೇಶನ್ ಅಗತ್ಯ ಎಂದು ಸೂಚಿಸಿದೆ. ಸಿಮ್ ಕಾರ್ಡ್‌ ಸ್ಥಗಿತಗೊಳಿಸುವ ಪ್ರಕ್ರಿಯೆಯಲ್ಲೂ ಗುರುತು ಪರಿಶೀಲನೆ ನಿಯಮ ಅನ್ವಯವಾಗಲಿದೆ. ಸೈಬರ್ ವಂಚನೆ ಹಾಗೂ ನಕಲಿ ಸಿಮ್ ಕಾರ್ಡ್ ಕನೆಕ್ಷನ್‌ಗಳಿಗೆ ಕಡಿವಾಣ ಹಾಕಲು ಕೇಂದ್ರ ಈ ಕ್ರಮ […]

Continue Reading

ಕಲಬುರಗಿ: 18 ಅಂಚೆ ಕಚೇರಿಗಳಲ್ಲಿ ಆಧಾರ್ ನೋಂದಣಿ, ನವೀಕರಣ ಸೇವೆ ಪ್ರಾರಂಭ

ಸುದ್ದಿ ಸಂಗ್ರಹ ಕಲಬುರಗಿಕಲಬುರಗಿ ವಿಭಾಗದ ಅಂಚೆ ಇಲಾಖೆಯು ಸಾರ್ವಜನಿಕರ ಅನುಕೂಲಕ್ಕಾಗಿ ಜಿಲ್ಲೆಯ 18 ಪ್ರಮುಖ ಅಂಚೆ ಕಚೇರಿಗಳಲ್ಲಿ ಆಧಾರ್‌ ನೋಂದಣಿ ಮತ್ತು ನವೀಕರಣ ಸೇವೆ ಪ್ರಾರಂಭಿಸಿದೆ ಎಂದು ಕಲಬುರಗಿ ವಿಭಾಗದ ಅಂಚೆ ಅಧೀಕ್ಷಕ ರವೀಂದ್ರ ಬಿ.ಎಲ್ ತಿಳಿಸಿದ್ದಾರೆ. ಈ ಅಂಚೆ ಕಚೇ ರಿಗಳಲ್ಲಿ ತರಬೇತಿ ಪಡೆದ ಸಿಬ್ಬಂದಿ ಹಾಗೂ ಅತ್ಯಾ ಧುನಿಕ ಬಯೋಮೆಟ್ರಿಕ್ ಸಾಧನಗಳ ಮೂಲಕ ಗುಣಮಟ್ಟದ ಆಧಾರ್ ಸೇವೆ ನೀಡಲಾಗುತ್ತಿದೆ. ಸಾರ್ವಜನಿಕರು ಅಗತ್ಯ ಮೂಲ ದಾಖಲೆಗಳೊಂದಿಗೆ ಅಂಚೆ ಕಚೇರಿಗೆ ಭೇಟಿ ನೀಡಿ ಈ ಸೌಲಭ್ಯದ ಸದುಪಯೋಗ […]

Continue Reading

ಚಿತ್ತಾಪುರ: ಒಕ್ಕೂಟದ ನೂತನ ಅಧ್ಯಕ್ಷರಾಗಿ ಜಗದೇವ ದಿಗ್ಗಾಂವಕರ್ ಆಯ್ಕೆ

ಸುದ್ದಿ ಸಂಗ್ರಹ ಚಿತ್ತಾಪುರ ತಾಲೂಕಿನ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಮತ್ತು ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ಅಧ್ಯಕ್ಷರಾಗಿ ಪಟ್ಟಣದ ಪ್ರಾರ್ಥನಾ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಜಗದೇವ ದಿಗ್ಗಾಂವಕರ್ ಆಯ್ಕೆಯಾಗಿದ್ದಾರೆ. ಒಕ್ಕೂಟದ ಪದಾಧಿಕಾರಿಗಳ ಆಯ್ಕೆ ಕುರಿತು ಗುರುವಾರ ಇಲ್ಲಿನ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಶಾಲೆಗಳಮುಖ್ಯಸ್ಥರ ಮತ್ತು ಆಡಳಿತ ಮಂಡಳಿಗಳ ಪದಾಧಿಕಾರಿಗಳ ಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ಮಾಡಲಾಯಿತು. ರಾಘವೇಂದ್ರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರವಿ ಕುಲಕರ್ಣಿ ಅವರನ್ನು ಒಕ್ಕೂಟದ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಯಿತು. ಒಕ್ಕೂಟದ […]

Continue Reading

ಉತ್ತಮ ಸಮಾಜ ನಿರ್ಮಾಣಕ್ಕೆ ಗುರು-ಹಿರಿಯರ ಮಾರ್ಗದರ್ಶನ ಅಗತ್ಯ: ಡಾ.ಸದಾನಂದ ಪೆರ್ಲ

ಸುದ್ದಿ ಸಂಗ್ರಹ ಕಲಬುರಗಿಹಿರಿಯ ನಾಗರಿಕರ ಅನುಭವ ಮತ್ತು ಆದರ್ಶಗಳು ಭವಿಷ್ಯದ ಬಾಳಿಗೆ ದಾರಿ ದೀಪವಾಗುತ್ತದೆ‌. ಉತ್ತಮ ಸಮಾಜ ನಿರ್ಮಾಣಕ್ಕೆ ಗುರು ಹಿರಿಯರ ಮಾರ್ಗ ದರ್ಶನ ಅಗತ್ಯ ಎಂದು ಆಕಾಶವಾಣಿಯ ನಿವೃತ್ತ ಕಾರ್ಯಕ್ರಮ ನಿರ್ವಾಹಕ ಡಾ.ಸದಾನಂದ ಪೆರ್ಲ ಹೇಳಿದರು. ನಗರದ ದನಗರ ಗಲ್ಲಿಯ ಕೋರಿ ಮಠದ ರೇವಣಸಿದ್ದೇಶ್ವರ ಪ್ರೌಢ ಶಾಲೆಯಲ್ಲಿ ಶುಕ್ರವಾರ ಜರುಗಿದ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ವಿಶ್ವ ಹಿರಿಯ ನಾಗರಿಕರ ದಿನಾಚರಣೆ” ಉದ್ಘಾಟಿಸಿ ಮಾತನಾಡಿದ ಅವರು, 1988ರಲ್ಲಿ ಅಮೆರಿಕದ ಅಧ್ಯಕ್ಷರಾದ ರೊನಾಲ್ಡ್ ರೇಗನ್ […]

Continue Reading

ಮತದಾರರ ಪಟ್ಟಿಯಲ್ಲಿ 11 ವಿದೇಶಿಗರು: ಚುನಾವಣಾ ಅಧಿಕಾರಿಗಳಿಂದ ಪರಿಶೀಲನೆ

ಸುದ್ದಿ ಸಂಗ್ರಹ ಬೆಂಗಳೂರುಕರ್ನಾಟಕದ ಮತದಾರರ ಪಟ್ಟಿಯಲ್ಲಿ ವಿದೇಶಿ ಪ್ರಜೆಗಳ ಹೆಸರುಗಳು ಸೇರ್ಪಡೆಯಾಗಿರುವ ಶಂಕೆ ಇದೀಗ ಚುನಾವಣಾ ಅಧಿಕಾರಿಗಳ ಪರಿಶೀಲನೆಗೆ ಕಾರಣವಾಗಿದೆ. ಕರ್ನಾಟಕದ ಮತದಾರರ ಗುರುತಿನ ಚೀಟಿ ಹೊಂದಿರುವ 11 ವಿದೇಶಿ ಪ್ರಜೆಗಳ ವಿವರ ವಿದೇಶಿಗರ ನೋಂದಣಿ ಕಚೇರಿ (FRO) ರಾಜ್ಯ ಮುಖ್ಯ ಚುನಾವಣಾಧಿಕಾರಿ (CEO) ಕಚೇರಿಯಿಂದ ಕೇಳಿಬಂದಿದೆ. ಈ 11 ಜನರನ್ನು ತಮಿಳುನಾಡಿನಲ್ಲಿ ಪತ್ತೆ ಹಚ್ಚಲಾಗಿದ್ದು, ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ಇವೆ ಎಂದು ಅಧಿಕಾರಿಗಳ ಮೂಲಗಳು ತಿಳಿಸಿವೆ. ಅವರು ಶ್ರೀಲಂಕಾ ಮೂಲದವರು ಎನ್ನಲಾಗಿದ್ದು, ಅವರ ಸಂಪೂರ್ಣ […]

Continue Reading