PSI ಆಗಿ 10 ವರ್ಷ ಪೂರೈಸಿದ್ದಕ್ಕೆ ರೌಡಿಶೀಟರ್ ಜೊತೆ ಕೇಕ್ ಕಟ್: ಫೋಟೋ ವೈರಲ್ ಆಗ್ತಿದ್ದಂತೆ ಸಸ್ಪೆಂಡ್

ಯಾದಗಿರಿ: ಪಿಎಸ್‌ಐ ಆಗಿ 10 ವರ್ಷ ಪೂರೈಸಿದ್ದಕ್ಕೆ ರೌಡಿಶೀಟರ್ ಜೊತೆಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದ ಅಧಿಕಾರಿಯನ್ನು ಯಾದಗಿರಿ ಎಸ್ಪಿ ಪೃಥ್ವಿಕ್ ಶಂಕರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಠಾಣೆಯ ಪಿಎಸ್‌ಐ ಆಗಿರುವ ರಾಜಶೇಖರ್ ರಾಠೋಡ್ ಅವರನ್ನು ಅಮಾನತು ಮಾಡಿದ್ದಾರೆ. ಪಿಎಸ್‌ಐ ಆಗಿ ಹತ್ತು ವರ್ಷ ಪೊರೈಸಿದ್ದಕ್ಕೆ ಅದೆ ಠಾಣೆಯಲ್ಲಿ ರೌಡಿಶೀಟರ್ ಆಗಿರುವ ನಾಗರಾಜ್ ಜೊತೆ ಕೇಕ್ ಕಟ್ ಮಾಡಿ ಸೆಲೆಬ್ರೇಷನ್ ಮಾಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್ ಆಗಿತ್ತು. […]

Continue Reading

ಕಣ್ಣು ಅಮೂಲ್ಯ ಅಂಗ, ಸಂರಕ್ಷಣೆ ಮಾಡಿಕೊಳ್ಳಬೇಕು

ಕಲಬುರಗಿ: ಕಣ್ಣು ಮಾನವನ ಅಮೂಲ್ಯ ಅಂಗವಾಗಿದ್ದು, ಎಲ್ಲರು ಕಣ್ಣಿನ ಆರೋಗ್ಯ ಬಗ್ಗೆ ಕಾಳಜಿ, ಮುಂಜಾಗ್ರತೆ ವಹಿಸಿ ಸಂರಕ್ಷಣೆ ಮಾಡಿಕೊಳ್ಳಬೇಕು ಎಂದು ನೇತ್ರಾಧಿಕಾರಿ ಡಾ.ದಸ್ತಗಿರ್ ಸಲಹೆ ನೀಡಿದರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನ ಜ್ಯೋತಿ ಐ ಕೇರ್ ಕಲಿನಿಕ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಸಂಜೆ ಜರುಗಿದ “ನೇತ್ರ ಮಾಸಾಚರಣೆ” ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಮೊಬೈಲ್ ಮತ್ತು ಕಂಪ್ಯೂಟರ್ ಬಳಕೆ ಹೆಚ್ಚಾಗಿರುವುದರಿಂದ ಕಣ್ಣಿನ ಮೇಲೆ ಪರಿಣಾಮ ಬೀರುತ್ತಿದೆ. ಇದರಿಂದ ಕಣ್ಣಿನ ಪೊರೆ, […]

Continue Reading

ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ಲೋಕಾ ದಾಳಿ: ಅಪಾರ ಪ್ರಮಾಣದ ಚಿನ್ನ, ಬೆಳ್ಳಿ, ನಗದು, ಆಸ್ತಿ ಪತ್ತೆ

ಬೆಂಗಳೂರು: ಭ್ರಷ್ಟ ಅಧಿಕಾರಿಗಳ ಮನೆಗಳು ಹಾಗೂ ಕಚೇರಿಗಳ ಮೇಲಿನ ದಾಳಿಯನ್ನು ಲೋಕಾಯುಕ್ತ ಮುಕ್ತಾಯಗೊಳಿಸಿದೆ. ದಾಳಿಯಲ್ಲಿ ಅಪಾರ ಪ್ರಮಾಣದ ಚಿನ್ನ, ಬೆಳ್ಳಿ, ನಗದು, ಆಸ್ತಿ ಪತ್ತೆಯಾಗಿದೆ. ಬೆಂಗಳೂರು ಸೇರಿ 48 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ ಮಾಡಿದೆ. ಆ ಮೂಲಕ ಒಟ್ಟು 12 ಅಧಿಕಾರಿಗಳಿಗೆ ಶಾಕ್‌ ನೀಡಿದೆ.

Continue Reading

ನಾಳೆಯ ಹವಾಮಾನ: 26 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: 26 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ, ರಾಜ್ಯದಲ್ಲಿ ನಾಳೆ ವರುಣನ ಆರ್ಭಟ ಮುಂದುವರಿಯಲಿದೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟ, ಹಳೆ ಮೈಸೂರು, ಕರಾವಳಿ ಮತ್ತು ಘಟ್ಟ ಪ್ರದೇಶ ಸೇರಿದಂತೆ ವಿವಿಧೆಡೆ ಉತ್ತಮ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಲ್ಲೂ ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಮಳೆ ?ಉತ್ತರ ಕರ್ನಾಟಕದ ಮತ್ತು ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಬೀದರ್​, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿಯಲ್ಲಿ […]

Continue Reading

ಕ್ರೀಡಾಕೂಟದಲ್ಲಿ ಬಾಲಕಿಯರ ಅಪ್ರತಿಮ ಸಾಧನೆ: ಚಂದರ್ ಚವ್ಹಾಣ

ಚಿತ್ತಾಪುರ: ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 14 ವರ್ಷದ ಬಾಲಕಿಯರ ಕಬ್ಬಡಿ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗಿಯ ಮಟ್ಟಕ್ಕೆ ಆಯ್ಕೆಯಾಗಿ ಸಾಧನೆಗೈದಿದ್ದಾರೆ ಎಂದು ಎಸ್‌ಡಿಎಂಸಿ ಅಧ್ಯಕ್ಷ ಚಂದರ್ ಚವ್ಹಾಣ ಹೇಳಿದರು. ಮಕ್ಕಳ ಸಾಧನೆಗೆ ಶಾಲೆಯ ಮುಖ್ಯಗುರು ಸಂತೋಷಕುಮಾರ, ದೈಹಿಕ ಶಿಕ್ಷಕಿ ರಮಾಬಾಯಿ, ಶಿಕ್ಷಕರಾದ ಜಯಲಕ್ಷ್ಮಿ ಮತ್ತು ಶಿವರಾಜ್ ಪಾಟೀಲ್ ಹರ್ಷ ವ್ಯಕ್ತಪಡಿಸಿದ್ದಾರೆ.

Continue Reading

ಯೂಟ್ಯೂಬ್ ಚಾನೆಲ್ ರಚಿಸಿದರೆ, ಎಷ್ಟು ದಿನಗಳ ನಂತರ ಹಣ ಸಿಗಲು ಪ್ರಾರಂಭವಾಗುತ್ತದೆ ?

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ, ಎಲ್ಲರೂ ಆನ್‌ಲೈನ್‌ನಲ್ಲಿ ಹಣ ಗಳಿಸುವ ಮಾರ್ಗಗಳನ್ನು ಹುಡುಕುತ್ತಿದ್ದಾರೆ. ಈ ಉದ್ದೇಶಕ್ಕಾಗಿ ಯೂಟ್ಯೂಬ್ ಅತ್ಯಂತ ಜನಪ್ರಿಯ ವೇದಿಕೆಯಾಗಿದ್ದು ಸದಾ ಟ್ರೆಂಡಿಂಗ್​ನಲ್ಲಿರುತ್ತದೆ. ಲಕ್ಷಾಂತರ ಜನರು ಹವ್ಯಾಸ, ಪ್ರತಿಭೆ ಅಥವಾ ಜ್ಞಾನ ವೀಡಿಯೊಗಳ ಮೂಲಕ ಹಂಚಿಕೊಳ್ಳುತ್ತಾರೆ ಮತ್ತು ಉತ್ತಮ ಆದಾಯ ಗಳಿಸುತ್ತಾರೆ. ಆದರೆ ದೊಡ್ಡ ಪ್ರಶ್ನೆಯೆಂದರೆ ನೀವು ಇಂದು ಹೊಸ ಯೂಟ್ಯೂಬ್ ಚಾನಲ್ ರಚಿಸಿದರೆ, ಹಣ ಗಳಿಸಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ ?. ಈ ಕುರಿತು ವಿವರವಾಗಿ ನೋಡೋಣ. ಯೂಟ್ಯೂಬ್ ನಿಂದ ಹಣ ಗಳಿಸುವ ಮೊದಲ ಹೆಜ್ಜೆ […]

Continue Reading

ಕರ್ನಾಟಕದ 5 IAS ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ: ಒಂದೆ ವಾರದಲ್ಲಿ 3ನೇ ಟ್ರಾನ್ಸ್‌ಫರ್‌ ಲಿಸ್ಟ್‌

ಬೆಂಗಳೂರು: ಕರ್ನಾಟಕ ಸರ್ಕಾರವು 5 ಜನ ಐಎಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಿ ಮಹತ್ವದ ಆದೇಶ ಹೊರಡಿಸಿದೆ. ಕಳೆದ ಒಂದು ವಾರದಲ್ಲಿ ಮೂರನೇ ಬಾರಿ ವರ್ಗಾವಣೆ ಆದೇಶ ಹೊರಬಿದ್ದಿದೆ. ಸೋಮವಾರ ಹೊರಡಿಸಿರುವ ಆದೇಶದಂತೆ ಪಂಚಾಯತ್‌ರಾಜ್‌ ಇಲಾಖೆ ಕಾರ್ಯದರ್ಶಿಯಾಗಿದ್ದ ಡಿ.ರಂದೀಪ್‌ ಅವರಿಗೆ ಹೆಚ್ಚುವರಿಯಾಗಿ ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಎಂ.ಎಸ್‌ ದಿವಾಕರ್‌ ಅವರಿಗೆ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ನಿರ್ದೇಶಕ ಹುದ್ದೆಗೆ ಹೆಚ್ಚುವರಿಯಾಗಿ ಅಟಲ್‌ ಜನ ಸ್ನೇಹಿ ಕೇಂದ್ರದ ನಿರ್ದೇಶಕ ಹುದ್ದೆ ನೀಡಲಾಗಿದೆ. ನಿತೇಶ್‌ […]

Continue Reading

ಸಮೀಕ್ಷೆಯಲ್ಲಿ ಅಪಘಾತಕ್ಕೀಡಾದ ಸಿಬ್ಬಂದಿಗಳಿಗೆ ಸರ್ಕಾರದಿಂದ ಪರಿಹಾರ ನೀಡಲು ಒತ್ತಾಯ

ಕಲಬುರಗಿ: ಜಿಲ್ಲೆಯ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ತೊಡಗಿರುವಾಗ ಅಪಘಾತವಾಗಿ ಆಸ್ಪತ್ರೆಗೆ ದಾಖಲಾಗಿರುವ ಸಿಬ್ಬಂದಿಗಳಿಗೆ ಸರ್ಕಾರದಿಂದ ವಿನಾಯಿತಿ ನೀಡಬೇಕು ಮತ್ತು ಚಿಕಿತ್ಸಾ ವೆಚ್ಚ ಭರಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಮನವಿ ಪತ್ರ ಸಲ್ಲಿಸಿದೆ. ಕ.ರಾ.ಸ.ನೌ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೊಂಡಗಿ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಅಪಘಾತಕ್ಕಿಡಾದ ಸಿಬ್ಬಂದಿಗಳಿಗೆ ಸಮೀಕ್ಷಾ ಕಾರ್ಯದಿಂದ ವಿನಾಯಿತಿ ನೀಡಬೇಕು ಮತ್ತು ಅವರ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಬೇಕು ಎಂದು ಒತ್ತಾಯಿಸಲಾಯಿತು. […]

Continue Reading

ಭಾರತೀಯ ಸೇನೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ:10ನೇ ಪಾಸಾಗಿದ್ದರೆ ಸಾಕು

ಮೆಟ್ರಿಕ್ಯುಲೇಷನ್ ಮತ್ತು ಇಂಟರ್‌ಮಿಡಿಯೇಟ್‌ ಪಾಸಾದ ಮತ್ತು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿರುವವರಿಗೆ ಗುಡ್​​ನ್ಯೂಸ್​​ ಇಲ್ಲಿದೆ. ಭಾರತೀಯ ಸೇನೆಯು ಕ್ಲರ್ಕ್ ಮತ್ತು ಎಂಟಿಎಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಅರ್ಜಿ ಪ್ರಕ್ರಿಯೆಯು ಅಕ್ಟೋಬರ್ 11 ರಿಂದ ಪ್ರಾರಂಭವಾಗಿದ್ದು, ನವೆಂಬರ್ 15 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಸೇನೆಯ ಅಧಿಕೃತ ವೆಬ್‌ಸೈಟ್ indianarmy.nic.in ಭೇಟಿ ನೀಡುವ ಮೂಲಕ ಸಲ್ಲಿಸಬೇಕು. ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ಎಂಜಿನಿಯರ್‌ಗಳ ಮಹಾನಿರ್ದೇಶನಾಲಯ (DG EME) ಬಹು ವಹಿವಾಟುಗಳು ಮತ್ತು ವರ್ಗಗಳಲ್ಲಿ ವಿವಿಧ ಗ್ರೂಪ್ […]

Continue Reading

ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ

ಕಲಬುರಗಿ: ಜೇವರ್ಗಿ ಪಟ್ಟಣದ ಕೋರ್ಟ್ ಎದುರುಗಡೆಯಿರುವ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜ್’ನಲ್ಲಿ ಶನಿವಾರ ಜರುಗಿದ “ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ” ಕಾರ್ಯಕ್ರಮವನ್ನು ಪ್ರತಿಭಾನ್ವಿತ ವಿದ್ಯಾರ್ಥಿನಿ ಸಾಕ್ಷತಾ ಬಿರಾದಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರಾದ ಯಶವಂತ ಗಾಣಿಗೇರ್, ಶಾರದಾ ಆಲಗೂರ್, ಎಚ್.ಬಿ ಪಾಟೀಲ್, ರಾಜಶೇಖರ ಹಿರೇಗೌಡ ಮತ್ತು ಶಿವರುದ್ರ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Continue Reading